ಬೆಂಗಳೂರು: ಬಡ ಮಕ್ಕಳ ಪಾಲಿನ ಮೊಟ್ಟೆಯಿಂದ ಸ್ವೆಟರ್ವರೆಗೂ ಎಲ್ಲವನ್ನೂ ತಿನ್ನುತ್ತಿದ್ದಾರೆ! ಎಂದು ಸರ್ಕಾರದ ವಿರುದ್ಧ ಕಿಡಿಕಾರಿದೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಬಿಜೆಪಿ ಸರ್ಕಾರ ಹಗರಣಗಳ ಕೂಪವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಡ ಮಕ್ಕಳ ಪಾಲಿನ ಮೊಟ್ಟೆಯಿಂದ ಸ್ವೆಟರ್ವರೆಗೂ ಎಲ್ಲವನ್ನೂ ತಿನ್ನುತ್ತಿದ್ದಾರೆ! ಬಿಬಿಎಂಪಿ ಶಾಲೆಗಳ ಸುಮಾರು 16,167 ಮಕ್ಕಳಿಗೆ ಸ್ವೆಟರ್ ನೀಡುವ ಯೋಜನೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಬಿಜೆಪಿ ವಕ್ತಾರ ಜಗ್ಗೇಶ್ ಅವರು ನಿಯಮ ಮೀರಿ ಸಹೋದರನಿಗೆ ಟೆಂಡರ್ ಕೊಡಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಮಕ್ಕಳಿಗೆ ಸ್ವೆಟರ್ ಹಂಚಿಕೆಯನ್ನೇ ಮಾಡದೆ 1.75 ಕೋಟಿ ಬಿಲ್ ಪಾವತಿಯಾಗಿದ್ದು ಹೇಗೆ?ಕೈಮಗ್ಗ ನಿಗಮದ ಟೆಂಡರ್ ನಿಯಮ ಮೀರಿ ಕೋಮಲ್ ಹೆಸರಿಗೆ ಹೋಗಿದ್ದು ಹೇಗೆ? ಶಾಲೆ ತೆರೆಯದೆ ಹಂಚಿದ್ದೇವೆನ್ನುವುದು ಸುಳ್ಳು. ಹಂಚಿಕೆಯಾಗದಿದ್ದರೂ ಹಣ ಬಿಡುಗಡೆಗೆ ಸಚಿವ ಆರ್. ಅಶೋಖ್ ಹಾಗೂ ಅಧಿಕಾರಿಗಳಿಗೆ ಒತ್ತಡ ಹಾಕಿದ್ದೇಕೆ? ಈ ಹಗರಣದಲ್ಲಿ ಅವರದ್ದೆಷ್ಟು ಪಾಲು? ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಈ ಪ್ರಕರಣ ನನಗೆ ಸಂಬಂಧವಿಲ್ಲವೆಂದು ಕೋಮಲ್ ನಿರಾಕರಿಸುತ್ತಾರೆ, ಹಾಗಿದ್ದರೆ ಅವರ ಸಹೋದರ ಏಪ್ರಿಲ್ 27ರಂದು ಕೋಮಲ್ರ ಬಿಬಿಎಂಪಿ ಟೆಂಡರ್ ಬಗ್ಗೆ ಪ್ರಸ್ತಾಪಿಸಿದ್ದು ಹೇಗೆ? ಬಿಜೆಪಿಯ ಆಡಳಿತ ಭ್ರಷ್ಟಾಚಾರದ ಕೂಪವಾಗಿದೆ, ಎಂದು ಸ್ವತಃ ಬಿಜೆಪಿಯ ಜಗ್ಗೇಶ್ ಆರೋಪಿಸಿದ್ದಾರೆ! ಭ್ರಷ್ಟರೇ ಭ್ರಷ್ಟಾಚಾರದ ಬಗ್ಗೆ ಆರೋಪಿಸುವುದು - ಹಾಸ್ಯನಟನೆ! ಎಂದು ಕಾಂಗ್ರೆಸ್ ಆರೋಪ ಮಾಡಿದೆ. ಬಿಬಿಎಂಪಿ ಶಾಲಾ ಕಾಲೇಜುಗಳ ವಿದ್ತಾರ್ಥಿಗಳಿಗೆ ಸ್ಟಟರ್ ನೀಡದೆ ವಂಚನೆ ಮಾಡಿದ ಆರೋಪ ಕೇಳಿಬಂದಿದೆ. ಈ ವಿವಚಾರವಾಗಿ ದಲಿತ ಸಂಘರ್ಷ ಸಮಿತಿ ಬಿಬಿಎಂಪಿ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತನಿಖೆಗೆ ಆಗ್ರಹಿಸಿದ್ದಾರೆ. ಆದರೆ ಯಾವುದೇ ಅಕ್ರಮ ನಡೆದಿಲ್ಲ ಎಂದು ಬಿಬಿಎಂಪಿ ಶಿಕ್ಷಣ ವಿಭಾಗ ಸ್ಪಷ್ಟನೆ ನೀಡಿದೆ.
from India & World News in Kannada | VK Polls https://ift.tt/3zg3FPz