ವಿದೇಶ ಪ್ರವಾಸ ಮುಗಿಸಿ ಬಂದ ಬಿಎಸ್ ವೈ; ಇನ್ಮುಂದೆ ರಾಜ್ಯಾದ್ಯಂತ ಸುತ್ತಾಡಿ ಪಕ್ಷ ಸಂಘಟನೆಗೆ ಪ್ಲ್ಯಾನ್

ಬೆಂಗಳೂರು: ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಿದೇಶ ಪ್ರವಾಸದಿಂದ ವಾಪಸ್‌ ಆಗಿದ್ದಾರೆ. ಒಂದು ವಾರಗಳ ಕಾಲ ಮಾಲ್ಡೀವ್ಸ್ ನಲ್ಲಿ ರಿಲ್ಯಾಕ್ಸ್ ಆದ ಬಿಎಸ್‌ವೈ ಇದೀಗ ಮತ್ತೆ ರಾಜಕೀಯ ಅಖಾಡದಲ್ಲಿ ಸಕ್ರಿಯವಾಗಲು ತಯಾರಾಗಿದ್ದಾರೆ. ಕೆಲವೇ ದಿನಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲು ಯಡಿಯೂರಪ್ಪ ಪ್ಲ್ಯಾನ್ ಮಾಡಿದ್ದು 20- 25 ದಿನಗಳ ಬಳಿಕ ರಾಜ್ಯಾದ್ಯಂತ ಪ್ರವಾಸ ನಡೆಸಿ ಜಿಲ್ಲಾವಾರು‌ ಭೇಟಿ ನೀಡಿ ಕಾರ್ಯಕರ್ತರ ಜೊತೆ ಸಭೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ವಿದೇಶ ಪ್ರವಾಸದ ಬಗ್ಗೆ ಮಾತನಾಡಿದ ಅವರು, ಬಹಳ ವರ್ಷಗಳ ಬಳಿಕ ನಾನು ವಿದೇಶ ಪ್ರವಾಸ ಹೋಗಿದ್ದೆ. ಸ್ನೇಹಿತರು, ಕುಟುಂಬಸ್ಥರ ಒತ್ತಾಯದ ಮೇರೆಗೆ ಹೋಗಿದ್ದೆ. ಮಾಲ್ಡೀವ್ಸ್ ಒಳ್ಳೆಯ ಸ್ಥಳ, ಎಲ್ಲರು ನೋಡುವಂತದ್ದು, ನಾನು ಕೂಡ ಖುಷಿ ಪಟ್ಟೆ ಎಂದು ಸಂತಸ ಹಂಚಿಕೊಂಡರು. ಐದು ದಿನಗಳ ಕಾಲ ರಾಜಕೀಯ ಜಂಜಾಟ ಮರೆತು ಕುಟುಂಬದ ಜತೆ ವಿದೇಶ ಪ್ರವಾಸ ಕೈಗೊಂಡಿದ್ದ ಬಿಎಸ್‌ ಯಡಿಯೂರಪ್ಪ ಇದೀಗ ಮತ್ತೆ ರಾಜಕೀಯ ಅಖಾಡಕ್ಕೆ ದುಮುಕಿದ್ದಾರೆ. ಇನ್ನೇನು ವಿಧಾನಸಭಾ ಚುನಾವಣೆಗೆ ಎರಡು ವರ್ಷಗಳ ಕಾಲಾವಕಾಶ ಇದೆ. ಈಗಾಗಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಚುನಾವಣಾ ತಯಾರಿಯಲ್ಲಿ ತೊಡಗಿಕೊಂಡಿವೆ. ನಾಯಕತ್ವ ಬದಲಾವಣೆ, ಕೋವಿಡ್ ನಿರ್ವಹಣೆ ಇತ್ಯಾದಿ ಸಂದರ್ಭದಲ್ಲಿ ಆಡ ಎಡವಟ್ಟು ಸರ್ಕಾರದ ಬಗ್ಗೆ ಸೃಷ್ಟಿಯಾಗಿರುವ ಅಭಿಪ್ರಾಯವನ್ನು ತೊಡೆದುಹಾಕುವುದು ಬಿಜೆಪಿಯ ಮುಂದಿರುವ ಬಹುದೊಡ್ಡ ಸವಾಲಾಗಿದೆ. ಈ ನಿಟ್ಟಿನಲ್ಲಿ ಬಿಎಸ್‌ ಯಡಿಯೂರಪ್ಪ ಸ್ವತಃ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದಾರೆ. ನಾಯಕತ್ವ ಬದಲಾವಣೆಯ ಸಂದರ್ಭದಲ್ಲಿ ಕಣ್ಣೀರು ಹಾಕಿದ್ದ ಯಡಿಯೂರಪ್ಪ ರಾಜ್ಯದಲ್ಲಿ ಪಕ್ಷ ಸಂಘಟನೆಯ ಹಿಂದಿನ ದಿನಗಳನ್ನು ಮೆಲುಕು ಹಾಕಿದ್ದರು. ಸಾಧನಾ ಸಮಾವೇಶದಲ್ಲಿ ಕಣ್ಣೀರು ಹಾಕಿ ರಾಜೀನಾಮೆ ಘೋಷಣೆ ಮಾಡಿದ್ದರು. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕವೂ ಅವರ ಇಚ್ಛೆಯಂತೆ ಸಿಎಂ ಸ್ಥಾನ ಹಾಗೂ ಸಂಪುಟ ರಚನೆಯಾಗಿದೆ. ಸಿಎಂ ಬೊಮ್ಮಾಯಿ ಅವರೂ ಯಡಿಯೂರಪ್ಪ ಅವರ ಮಾರ್ಗದರ್ಶನದಂತೆ ನಡೆದುಕೊಳ್ಳುತ್ತೇನೆ ಎಂಬ ಅಂಶವನ್ನು ಉಲ್ಲೇಖಿಸಿದ್ದಾರೆ. ಮುಂದಿನ ದಿನಗಳಲ್ಲಿ ಯಡಿಯೂರಪ್ಪ ಯಾವ ನಿರ್ಧಾರವನ್ನು ಕೈಗೊಳ್ಳುತ್ತಾರೆ ಎಂಬ ಕುತೂಹಲವೂ ಇತ್ತು. ಇದೀಗ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸುಮ್ಮನಾಗದ ಯಡಿಯೂರಪ್ಪ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲು ನಿರ್ಧಾರ ಮಾಡಿದ್ದಾರೆ. ಈ ಪ್ರವಾಸ ರಾಜ್ಯ ರಾಜಕೀಯ ಹಾಗೂ ಆಂತರಿಕವಾಗಿ ಮೇಲೆ ಯಾವ ರೀತಿಯಲ್ಲಿ ಪರಿಣಾಮ ಬೀರಲಿದೆ ಎಂಬುವುದನ್ನು ಕಾದುನೋಡಬೇಕಿದೆ.


from India & World News in Kannada | VK Polls https://ift.tt/38cTP52

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...