ದೇಶಕ್ಕಾಗಿ ಕೆಲಸ ಮಾಡಿದ ಯಾವುದೇ ನಾಯಕರ ಬಗ್ಗೆ ಅವಹೇಳನ ಬೇಡ; ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ದೇಶದ ಆಡಳಿತ ಮಾಡಿದ ನಾಯಕರ ಬಗ್ಗೆ ಯಾರೂ ಅವಹೇಳನಕಾರಿಯಾಗಿ ಮಾತನಾಡಬಾರದು ಎಂದು ಕೇಂದ್ರ ಸಚಿವೆ ಹೇಳಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಾರೂ ಯಾರ ಬಗ್ಗೆಯೂ ಮಾತನಾಡಬಾರದು. ನಮ್ಮ ಎಲ್ಲ ನಾಯಕರೂ ಗೌರವಾನ್ವಿತರು. ಇದಕ್ಕೆ ಪಕ್ಷ, ಜಾತಿ, ಧರ್ಮದ ಭೇದವಿಲ್ಲ. ಎಲ್ಲರೂ ದೇಶಕ್ಕಾಗಿ ಕೆಲಸ ಮಾಡಿದ್ದಾರೆ. ಅವರವರ ಕಾಲಘಟ್ಟದಲ್ಲಿ ಎದುರಾದ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡಿದ್ದಾರೆ. ಅವರೆಲ್ಲರೂ ಗೌರವಾನ್ವಿತರು. ನಾಯಕರ ಬಗ್ಗೆ ಯಾರೂ ಅವಹೇಳನಕಾರಿಯಾಗಿ ಮಾತನಾಡಬಾರದು ಎಂದರು. ಕಾಫಿಗೂ ಕೃಷಿ ಸಿಂಚಾಯಿ ವಿಸ್ತರಣೆಕೃಷಿಗೆ ಸೀಮಿತವಾಗಿ ಕೃಷಿ ಸಿಂಚಾಯಿ ಯೋಜನೆಯನ್ನು 5 ಎಕರೆ ಒಳಗಿನ ಕಾಫಿ ಬೆಳೆಗಾರರಿಗೂ ಶೀಘ್ರದಲ್ಲೇ ವಿಸ್ತರಿಸಲಾಗುವುದು ಎಂದು ಶೋಭಾ ಕರಂದ್ಲಾಜೆ ಹೇಳಿದರು. ಕೃಷಿ ಸಿಂಚಾಯಿ ಯೋಜನೆಯನ್ನು ಕಾಫಿ ಬೆಳೆಗಾರರಿಗೂ ವಿಸ್ತರಿಸಬೇಕು ಎಂಬುದು ಕಾಫಿ ಮಂಡಳಿ ಅಧ್ಯಕ್ಷರ ಬೇಡಿಕೆಯಾಗಿತ್ತು. 5 ಎಕರೆ ಒಳಗಿನ ಎಲ್ಲ ಬೆಳೆಗಾರರಿಗೆ ಕೃಷಿ ಸಿಂಚಾಯಿ ಯೋಜನೆ ವಿಸ್ತರಿಸಲು ನಿರ್ಧರಿಸಿದ್ದೇವೆ. ಶೀಘ್ರದಲ್ಲೇ ರಾಜ್ಯ ಸರಕಾರ ಈ ಬಗ್ಗೆ ಆದೇಶ ಹೊರಡಿಸಲಿದೆ ಎಂದರು. ಕೃಷಿ ಜಮೀನಿನಲ್ಲಿ ರೈತರು ಬೆಳೆದ ಮರಗಳನ್ನು ಕಟಾವು ಮಾಡಲು ಕರ್ನಾಟಕ ಹೊರತು ಬೇರೆ ಯಾವುದೇ ರಾಜ್ಯದಲ್ಲಿ ಕಾನೂನಿನ ಅಡ್ಡಿ ಇಲ್ಲ. ಆದರೆ, ಕರ್ನಾಟಕದಲ್ಲಿ ಮಾತ್ರ ಇದಕ್ಕೆ ಕಾನೂನು ಅಡ್ಡಿ ಇದೆ. ಈ ಬಗ್ಗೆ ಅರಣ್ಯ ಸಚಿವ ಉಮೇಶ್‌ ಕತ್ತಿ ಅವರೊಂದಿಗೆ ಮಾತನಾಡಿದ್ದೇನೆ. ಈ ನಿಯಮ ಸಡಿಲಗೊಳಿಸಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಮರಗಳನ್ನು ಕಟಾವು ಮಾಡಲು ಅವಕಾಶ ನೀಡಲು ಕ್ರಮ ಕೈಗೊಳ್ಳಲಾಗುವುದು. ಕೃಷಿ ಜಮೀನಿನಲ್ಲಿ ತ್ವರಿತವಾಗಿ ಬೆಳೆಯುವ ಮರಗಳ ಬೆಳೆಸಲು ಉತ್ತೇಜನ ನೀಡಲಾಗುವುದು. ಇದರಿಂದ ರೈತರಿಗೆ ಆರ್ಥಿಕ ಲಾಭವಾಗಲಿದೆ ಎಂದರು.


from India & World News in Kannada | VK Polls https://ift.tt/3gcdIOo

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...