ಎರಡು ಹಂತದಲ್ಲಿ ಸಂಪುಟ ವಿಸ್ತರಣೆ? ಬೊಮ್ಮಾಯಿ ತಂತ್ರಗಾರಿಕೆ ಏನು

ಬೆಂಗಳೂರು: ಅಂತಿಮ ಹಂತದಲ್ಲಿದ್ದು ಭಿನ್ನಮತಕ್ಕೆ ಅವಕಾಶ ನೀಡದಂತೆ ಎರಡು ಹಂತದಲ್ಲಿ ವಿಸ್ತರಣೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಆರಂಭಿಕ ಹಂತದಲ್ಲಿ 24 ಮಂದಿಗೆ ಸಂಪುಟದಲ್ಲಿ ಅವಕಾಶ ನೀಡಿದರೆ ಉಳಿದವರಿಗೆ ಎರಡನೇ ಹಂತದಲ್ಲಿ ಅವಕಾಶ ನೀಡಲು ನಿರ್ಧಾರ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಹಿಂದಿನ ಸಂಪುಟದಲ್ಲಿ ಇದ್ದ ಬಹುತೇಕ ಮಂದಿಗೆ ಮೊದಲ ಹಂತದಲ್ಲಿ ಸಂಪುಟದಲ್ಲಿ ಸ್ಥಾನ ಸಿಗಲಿದೆ. ಹೊಸ ಮುಖಗಳಿಗೆ ಎರಡನೇ ಹಂತದಲ್ಲಿ ಅವಕಾಶ ಕಲ್ಪಿಸಬಹುದು. ಅಥವಾ 8 ಅಥವಾ 10 ಸ್ಥಾನಗನ್ನು ಖಾಲಿ ಇಟ್ಟು ಎರಡನೇ ಹಂತದಲ್ಲಿ ಅವಕಾಶ ಕಲ್ಪಿಸುವ ಮೂಲಕ ಭಿನ್ನಮತ ಸೃಷ್ಟಿಯಾಗದಂತೆ ನೋಡಿಕೊಳ್ಳುವ ತಂತ್ರಗಾರಿಯೂ ಇದೆ ಎನ್ನಲಾಗುತ್ತಿದೆ. ಸದ್ಯ ದೆಹಲಿಯಲ್ಲಿ ಬೀಡು ಬಿಟ್ಟಿರುವ ಈ ಕುರಿತಾಗಿ ತಂತ್ರಗಾರಿಕೆ ನಡೆಸುತ್ತಿದ್ದಾರೆ. ಹೀಗಿದ್ದರೂ ಅಂತಿಮ ಹಂತದ ಲಾಬಿಯನ್ನು ಬಹುತೇಕ ಮಂದಿ ದೆಹಲಿಯಲ್ಲಿ ನಡೆಸುತ್ತಿದ್ದಾರೆ. ಹಲವು ಹೊಸಬರು ರಾಜೂಗೌಡ, ಮಸಾಲೆ ಜಯರಾಂ, ಅರವಿಂದ ಬೆಲ್ಲದ, ಮಾಡಾಳ್ ವಿರೂಪಾಕ್ಷಪ್ಪ, ದುರ್ಯೋಧನ ಐಹೊಳೆ ಸೇರಿದಂತೆ ಹೊಸ ಮುಖಗಳು ಹೈಕಮಾಂಡ್‌ ಗೆ ಪರೋಕ್ಷವಾಗಿ ಒತ್ತಡ ಹೇರುತ್ತಿದ್ದಾರೆ. ತೇಜಸ್ವಿನಿ ಗೌಡ ಅವರೂ ಕೂಡಾ ಸಂಪುಟ ಸೇರಲು ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಸಂಪುಟ ರಚನೆ ಸಂದರ್ಭದಲ್ಲಿ ಆಕಾಂಕ್ಷಿಗಳಿಗೆ ಸ್ಥಾನ ಸಿಗದೇ ಇದ್ದಲ್ಲಿ ಭಿನ್ನಮತ ಮತ್ತಷ್ಟು ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಾಗಿದೆ. ಇದನ್ನು ಸರಿದೂಗಿಸುವುದು ಕೂಡಾ ಬಸವರಾಜ ಬೊಮ್ಮಾಯಿ ಪಾಲಿಗೆ ಸವಾಲಿನ ಸಂಗತಿ. ಈ ನಿಟ್ಟಿನಲ್ಲಿ ಅನಗತ್ಯ ಗೊಂದಲ ಸೃಷ್ಟಿಯಾಗದಂತೆ ನೋಡಿಕೊಳ್ಳುವುದು ಬೊಮ್ಮಾಯಿ ಪಾಲಿಗೆ ತಲೆನೋವಿನ ಸಂಗತಿಯಾಗಿದೆ.


from India & World News in Kannada | VK Polls https://ift.tt/3A6YSQO

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...