ಜಮ್ಮು ಮತ್ತು ಕಾಶ್ಮೀರ: ಬೆಳ್ಳಂಬೆಳಿಗ್ಗೆ ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನಾ ಪಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ತ್ರಾಲ್‌ನ ಅರಣ್ಯ ಪ್ರದೇಶದಲ್ಲಿ ಶನಿವಾರ ಬೆಳಿಗ್ಗೆ ನಡೆದ ಅಲ್ಪ ಕಾಲದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಸಂಘಟನೆಯ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಉಗ್ರರ ಗುರುತನ್ನು ತಕ್ಷಣಕ್ಕೆ ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಈ ಪ್ರದೇಶದಲ್ಲಿನ ಅರಣ್ಯ ಭಾಗದಲ್ಲಿ ವ್ಯಾಪಕ ಪತ್ತೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ. ಉಗ್ರರಿಂದ ವಶಪಡಿಸಿಕೊಂಡಿರಬಹುದಾದ ಶಸ್ತ್ರಾಸ್ತ್ರಗಳು ಮತ್ತು ಇತರೆ ಸಾಮಗ್ರಿಗಳ ಕುರಿತು ಅವರು ವಿವರ ನೀಡಿಲ್ಲ. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಪೊಲೀಸರು, ಸಿಆರ್‌ಪಿಎಫ್ ಮತ್ತು ಸೇನೆಯ ಜಂಟಿ ತಂಡವು ನಾಗ್ಬೇರನ್ ತ್ರಾಲ್‌ನ ಅರಣ್ಯ ಪ್ರದೇಶದಲ್ಲಿನ ಎತ್ತರದ ಭಾಗದಲ್ಲಿ ಉಗ್ರರ ಹಾಜರಾತಿಯ ಕುರಿತಾದ ಮಾಹಿತಿ ಹಿನ್ನೆಲೆಯಲ್ಲಿ ಶನಿವಾರ ನಸುಕಿನಲ್ಲಿ ಹುಡುಕಾಟ ನಡೆಸಿತ್ತು. ಕಾಡಿನಲ್ಲಿ ಅಡಗಿದ್ದ ಈ ವೇಳೆ ಗುಂಡು ಹಾರಿಸಿದ್ದಾರೆ. ತಕ್ಷಣವೇ ಕಾರ್ಯೋನ್ಮುಖರಾದ ಭದ್ರತಾ ಸಿಬ್ಬಂದಿ ಪ್ರತಿ ದಾಳಿ ನಡೆಸಿ ಮೂವರು ಜೈಷ್ ಉಗ್ರರನ್ನು ಹತ್ಯೆ ಮಾಡಿದ್ದಾರೆ. ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಕಳೆದ ಮೂರು ದಿನಗಳಲ್ಲಿ ನಡೆಸಿದ ಮೂರನೇ ಇದಾಗಿದೆ. ಶ್ರೀನಗರದ ಖ್ರ್ಯೂ ಪ್ರದೇಶದಲ್ಲಿ ಶುಕ್ರವಾರ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿತ್ತು. ದಕ್ಷಿಣ ಕಾಶ್ಮೀರದಲ್ಲಿ ನಾಗರಿಕರ ಹತ್ಯೆಗಳಲ್ಲಿ ಈ ಉಗ್ರರು ಭಾಗಿಯಾಗಿದ್ದರು. ಗುರುವಾರ ರಜೌರಿ ಜಿಲ್ಲೆಯಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಸೇನೆಯ ಕಿರಿಯ ಅಧಿಕಾರಿಯೊಬ್ಬರು ಹಾಗೂ ಒಬ್ಬ ಉಗ್ರ ಮೃತರಾಗಿದ್ದರು.


from India & World News in Kannada | VK Polls https://ift.tt/3keQAjg

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...