ಪ್ರತಿ ದಿನ ಐದು ಲಕ್ಷ ವ್ಯಾಕ್ಸಿನೇಷನ್‌ ಗುರಿ ಇದೆ, ಈ ಬಗ್ಗೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ; ಸಿಎಂ ಬೊಮ್ಮಾಯಿ

ಬೆಂಗಳೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಿಂದ ತನಿಖೆ ನಡೆಯುತ್ತಿದೆ. ಎಲ್ಲ ವಿವರಗಳನ್ನು ಪಡೆದು ಮುಂದುವರಿಯುತ್ತಿದ್ದಾರೆ ಎಂದು ಸಿಎಂ ತಿಳಿಸಿದರು. ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಎಲ್ಲ ವಿವರ ಪಡೆದು ಮುಂದುವರಿಯುತ್ತಾರೆ. ತನಿಖೆ ಯಾವ ಹಂತದಲ್ಲಿ ಇದೆ ಎಂದು ಹೇಳಿಲ್ಲ. ನನಗೆ ನೇರವಾಗಿ ವರದಿ ಕೊಡಿ ಎಂದು ಸೂಚಿಸಿದ್ದೇನೆ. ಆರೋಪಿಗಳ ಪತ್ತೆಗೆ ಈಗಾಗಲೇ ತಂಡ ರಚನೆ ಮಾಡಲಾಗಿದೆ. ಅತೀ ಶೀಘ್ರದಲ್ಲೇ ಪತ್ತೆ ಹಚ್ಚಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಇನ್ನು ಸಂಪುಟ ವಿಸ್ತರಣೆ ಕುರಿತಾಗಿ ಮಾತನಾಡಿದ ಅವರು, ದೆಹಲಿ ಭೇಟಿ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆ ಮಾತುಕತೆ ಮಾಡಲು ಸಾಧ್ಯವಾಗಿಲ್ಲ. ಮುಂದೆ ದೆಹಲಿಗೆ ಹೋದಾಗ ಚರ್ಚೆ ಮಾಡುತ್ತೇನೆ ಎಂದರು. ಅಲ್ಲದೇ ಸೆಪ್ಟಂಬರ್ ತಿಂಗಳಲ್ಲಿ ಪ್ರತಿ ದಿನ ಐದು ಲಕ್ಷ ವ್ಯಾಕ್ಸಿನೇಷನ್‌ ಗುರಿ ಇದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವರಿಗೆ ಮನವಿ ಮಾಡಲಾಗಿದೆ. ಎಲ್ಲ ರೀತಿಯ ಸಹಕಾರ ಹಾಗೂ ವ್ಯಾಕ್ಸಿನ್ ಕೊಡುವ ಭರವಸೆ ನೀಡಿದ್ದಾರೆ. ಪ್ರತಿ ದಿನ ಐದು ಲಕ್ಷ ವ್ಯಾಕ್ಸಿನೇಷನ್‌ ಮಾಡುವ ಗುರಿ ಇದೆ ಎಂದರು. ಇದರ ಜೊತೆ ಜಲಶಕ್ತಿ‌ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಗಿದೆ. ಮೇಕೆದಾಟು, ಮಹದಾಯಿ, ಎತ್ತಿನ ಹೊಳೆ, ಕೃಷ್ಣ ಮೇಲ್ಡಂಡೆ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಸುಪ್ರೀಮ್ ಕೋರ್ಟ್‌ನಲ್ಲಿರುವ ಜಲವಿವಾದ ಕೇಸ್‌ಗಳ ಬಗ್ಗೆ ಅಡ್ವಕೇಟ್ ಜನರಲ್ ಜೊತೆ ಚರ್ಚೆ ಮಾಡಲಾಗಿದೆ. ಅದರ ಜೊತೆ ಹಣಕಾಸು ಸಚಿವರನ್ನು ಭೇಟಿ ಮಾಡಿ, ಜಿಎಸ್‌ಟಿ ಪರಿಹಾರ ಮುಂದುವರಿಸಲು ಮನವಿ ಮಾಡಲಾಗಿದೆ. ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಚರ್ಚೆ ಮಾಡುವುದಗಿ ಭರವಸೆ ನೀಡಿದ್ದಾರೆ ಎಂದರು. ಕರ್ನಾಟಕಕ್ಕೆ ಟೆಕ್ಸ್‌ಟೈಲ್ ಪಾರ್ಕ್ ನೀಡುವ ವಿಚಾರವಾಗಿಯೂ ಕೇಂದ್ರ ಜವಳಿ ಖಾತೆ ಸಚಿವ ಪಿಯೂಶ್ ಗೋಯಲ್‌ಗೆ ಮನವಿ ಮಾಡಲಾಗಿದೆ. ಇದರಿಂದ ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಅನುಕೂಲವಾಗಲಿದೆ. ಯೋಜನೆ ನೀಡುವ ಭರವಸೆಯನ್ನು ಅವರು ನೀಡಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.


from India & World News in Kannada | VK Polls https://ift.tt/3ylcMxj

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...