ಬೆಂಗಳೂರು:ಜಂಕ್ ಫುಡ್ ಸೇವಿಸಬೇಡಿ, ಸಾಂಪ್ರದಾಯಕ ಭಾರತೀಯ ಆಹಾರ ಸೇವಿಸಿ.ಹೀಗಂತ ಸಲಹೆ ಕೊಟ್ಟವರು ಉಪರಾಷ್ಟ್ರಪತಿ . ಬೆಂಗಳೂರಿನ ರಾಜಭವನದಲ್ಲಿ ನಡೆದ ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಮೈ ಮರೆಯಬೇಡಿ, ಸಾಮಾಜಿಕ ಅಂತರ ಇರಲಿ. ಮಾಸ್ಕ್ ಸದಾ ಹಾಕಿಕೊಳ್ಳಿ ಹಾಗೂ ಕೈ ತೊಳೆಯುತ್ತಿರಿ ಎಂದು ಸಲಹೆ ನೀಡಿದರು. ಅಲ್ಲದೆ, ಪ್ರತಿಯೊಬ್ಬರು ವ್ಯಾಕ್ಸಿನ್ ಹಾಕಿಸಿಕೊಳ್ಳಿ.ಇದು ಕಡ್ಡಾಯ ವ್ಯಾಕ್ಸಿನ್ ಗೆ ಪರ್ಯಾಯ ಯಾವುದೂ ಇಲ್ಲ ಎಂದರು. ಅಲ್ಲದೆ, ಜಂಕ್ ಫುಡ್ ಸೇವಿಸಬೇಡಿ. ಬದಲಾಗಿ, ನಮ್ಮ ಸಾಂಪ್ರದಾಯಕ ಭಾರತೀಯ ಆಹಾರ ಸೇವಿಸಿ. ಆರೋಗ್ಯ ಮಹಾ ಭಾಗ್ಯ ಎಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಲಹೆ ನೀಡಿದರು. ಇನ್ನು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಬಡವರು, ಕೆಳ ಹಂತದ ವರ್ಗದವರಿಗೆ ವ್ಯಾಕ್ಸಿನ್ ನೀಡಬೇಕಾಗಿದೆ. ಆಗ ಕೊರೊನ ವಿರುದ್ಧ ಹೋರಾಡಲು ಶಕ್ತಿ ಸಿಗುತ್ತದೆ. ಖಾಸಗಿ ಸಂಸ್ಥೆಗಳು ಸಿ ಎಸ್ ಆರ್ ನಿಧಿ ಬಳಕೆ ಮಾಡಬೇಕು. ವ್ಯಾಕ್ಸಿನ್ ಕಾರ್ಯಕ್ಕೆ ಸಿಎಸ್ ಆರ್ ನಿಧಿ ಬಳಕೆ ಆಗಬೇಕು ಎಂದರು. ಗಿವ್ ಇಂಡಿಯಾ ಸಂಸ್ಥೆಯಿಂದ ಆಯೋಜನೆಯಾಗಿರುವ ವ್ಯಾಕ್ಸಿನೇಟ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಾಂಕೇತಿಕವಾಗಿ ಇಬ್ಬರು ಮಹಿಳೆಯರಿಗೆ ವ್ಯಾಕ್ಸಿನ್ ನೀಡುವ ಮೂಲಕ ಉಪರಾಷ್ಟ್ರಪತಿಗಳಾದ ವೆಂಕಯ್ಯ ನಾಯ್ಡು ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಸಚಿವರಾದ ಡಾ. ಕೆ. ಸುಧಾಕರ, ಮುನಿರತ್ನ, ಸಂಸದ ಪಿಸಿ ಮೋಹನ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
from India & World News in Kannada | VK Polls https://ift.tt/3B8sQ7e