ಕೊರೊನಾಮೂರನೇ ಅಲೆ ನಿಯಂತ್ರಣದಲ್ಲಿದೆ. ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವ ಡಾ.ಅಶ್ವತ್ಥ ನಾರಾಯಣ ಹೇಳಿದರು. ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಜನರಿಗೆ ಅನಿಶ್ಚಿತತೆ ಇದೆ. ಯಾರಿಗೂ ಆತಂಕ ಬೇಡ. ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದರು. ಬಿಬಿಎಂಪಿ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುತ್ತಿದೆ. ಲಸಿಕೆ ಕಾರ್ಯ ಉತ್ತಮವಾಗಿ ನಡೆಯುತ್ತಿದೆ. ಅಷ್ಟೇ ಅಲ್ಲದೆ ಬೆಡ್ಗಳ ಕೊರತೆಯಿಲ್ಲ. ಆಕ್ಸಿಜನ್ ಕೊರತೆಯಾಗದಂತೆ ಕ್ರಮ ತೆಗೆದುಕೊಂಡಿದ್ದೇವೆ ಎಂದರು. ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನೆ ಮಾಡಲಾಗುತ್ತಿದೆ. ವೈದ್ಯಕೀಯ ಕೊರತೆಗಳನ್ನು ಸರ್ಕಾರ ನೀಗಿಸಿಕೊಂಡಿದೆ. ಸಿಬ್ಬಂದಿ ಕೊರತೆ ಕೂಡ ಬಗೆಹರಿಸಿದ್ದೇವೆ. ಮೂರನೇ ಅಲೆ ಎದುರಿಸಲು ಸರ್ಕಾರ ಸರ್ವ ರೀತಿಯಲ್ಲಿ ತಯಾರಾಗುತ್ತಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಸರ್ಕಾರಿ ನಿವಾಸ ಪಡೆಯುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅಶ್ವಥ್ ನಾರಾಯಣ, ಸಿಎಂಗೆ ತಮ್ಮ ಮನೆಯಿಂದ ಕೆಲಸ ನಿರ್ವಹಣೆ ಕಷ್ಟವಾಗುತ್ತಿದೆ. ಸಾರ್ವಜನಿಕರು ಮನೆ ಮುಂದೆ ಸೇರುತ್ತಿದ್ದಾರೆ. ಹಾಗಾಗಿ ರೋಡ್ ಬ್ಲಾಕ್ ಆಗುತ್ತಿದೆ. ನಾನಿದ್ದ ಸರ್ಕಾರಿ ಮನೆಗೆ ಸಿಎಂ ಬರುತ್ತಿದ್ದಾರೆ. ಹಾಗಾಗಿ ನನಗೆ ಬೇರೆ ನಿವಾಸ ಹಂಚಿಕೆ ಆಗುತ್ತದೆ ಎಂದರು.
from India & World News in Kannada | VK Polls https://ift.tt/3AVCMB6