ಲಾಬಿ ನಡೆಸಿದರೂ ಒಲಿಯದ ಹುದ್ದೆ: ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಕುಮಾರಸ್ವಾಮಿಗೆ ನಿರಾಸೆ

ಚಿಕ್ಕಮಗಳೂರು: ರಾಜ್ಯದಲ್ಲಿ ಸಚಿವ ಸಂಪುಟ ರಚನೆ ಚಟುವಟಿಕೆ ಬಿರುಸುಗೊಂಡಿದ್ದು, ಮುಖ್ಯಮಂತ್ರಿ ಅವರ ಸಂಪುಟಕ್ಕೆ ಸೇರ್ಪಡೆಯಾಗುವವರ ಹೆಸರು ಖಚಿತವಾಗಿದೆ. ಸಚಿವಾಕಾಂಕ್ಷಿಯಾಗಿದ್ದ ಅನೇಕ ಶಾಸಕರಿಗೆ ಭಾರಿ ನಿರಾಸೆಯಾಗಿದೆ. ಈ ಬಾರಿಯಾದರೂ ಸಂಪುಟಕ್ಕೆ ಸೇರಿಕೊಳ್ಳಬಹುದು ಎಂಬ ನಿರೀಕ್ಷೆಯೊಂದಿಗೆ ದೆಹಲಿಗೂ ತೆರಳಿ ಲಾಬಿ ನಡೆಸಿದ್ದ ಕ್ಷೇತ್ರದ ಬಿಜೆಪಿ ಶಾಸಕ ಅವರೂ ನಿರಾಸೆಗೆ ಒಳಗಾದ ಶಾಸಕರ ಪಟ್ಟಿಯಲ್ಲಿದ್ದಾರೆ. ತಮಗೆ ಸಂಪುಟದಲ್ಲಿ ಸ್ಥಾನ ದೊರಕುತ್ತಿಲ್ಲ ಎಂಬ ಬೇಸರವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹೊರಹಾಕಿದ್ದಾರೆ. ಪಕ್ಷದ ನಾಯಕರು ಹಾಗೂ ಹೈಕಮಾಂಡ್ ವಿರುದ್ಧ ನೇರವಾಗಿ ಅಸಮಾಧಾನ ವ್ಯಕ್ತಪಡಿಸದೆ ಇದ್ದರೂ, ಪರೋಕ್ಷವಾಗಿ ನೋವು ಹಂಚಿಕೊಂಡಿದ್ದಾರೆ. ಸಚಿವ ಸಂದರ್ಭದಲ್ಲಿ ತಮ್ಮನ್ನು ಪರಿಗಣಿಸುವ ಭರವಸೆಯನ್ನು ಬೊಮ್ಮಾಯಿ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದಲ್ಲಿ ನನ್ನನ್ನು ಕರೆಸಿ ಇಂದಿನ ಸಂಪುಟದಲ್ಲಿ ಜಿಲ್ಲೆಗೆ ಯಾವುದೇ ಸಚಿವ ಸ್ಥಾನ ನೀಡಲಾಗುತ್ತಿಲ್ಲ ಎಂದು ತಿಳಿಸಿದ್ದು, ಸರ್ಕಾರಕ್ಕೆ ನನ್ನ ಬೆಂಬಲವನ್ನು ಕೋರಿದರು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಹಾಗೆಯೇ ನನ್ನ ಕ್ಷೇತ್ರಕ್ಕೆ ಹಾಗೂ ಚಿಕ್ಕಮಗಳೂರು ಜಿಲ್ಲೆ ಅಭಿವೃದ್ಧಿಗೆ ಪ್ರಾಶಸ್ತ್ಯ ನೀಡುವುದಾಗಿಯೂ, ಮುಂದಿನ ಕೆಲ ದಿನಗಳಲ್ಲಿ ಸಂಪುಟ ವಿಸ್ತರಣೆ ನಡೆಯುವ ಸಂದರ್ಭದಲ್ಲಿ ನನ್ನನ್ನು ಪರಿಗಣಿಸುವುದಾಗಿಯೂ ಭರವಸೆ ನೀಡಿದ್ದಾರೆ. ಭರವಸೆ ನೀಡಿದ ಮಾನ್ಯ ಮುಖ್ಯಮಂತ್ರಿಗಳಿಗೆ, ನನಗಾಗಿ ಪ್ರಾರ್ಥನೆ ಸಲ್ಲಿಸಿ ನಿರೀಕ್ಷೆ ಇಟ್ಟುಕೊಂಡಿದ್ದ ಕ್ಷೇತ್ರದ ಜನತೆಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಸರ್ಕಾರ ಅತ್ಯಂತ ಸುಭದ್ರವಾಗಿ ಕೆಲಸ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ, ಹಾಗೂ ಕ್ಷೇತ್ರದ ಅಭಿವೃದ್ಧಿ ಮಾಡುತ್ತಾ ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸೋಣ. ನನ್ನ ಮೇಲಿನ ನಿಮ್ಮ ಪ್ರೀತಿಗೆ ನಿಮ್ಮೆಲ್ಲರಿಗೂ ಮತ್ತೊಮ್ಮೆ ಆಭಾರಿಯಾಗಿದ್ದೇನೆ ಎಂದು ಹೇಳಿದ್ದಾರೆ. ಕುಮಾರಸ್ವಾಮಿ ಅವರಿಗೆ ಈ ಬಾರಿ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ, ರಾಜ್ಯ ಸಂಪುಟದಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಸಚಿವ ಸ್ಥಾನ ದೊರಕಿಲ್ಲ.


from India & World News in Kannada | VK Polls https://ift.tt/3Cedbop

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...