ಲಖನೌ: ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರಕಾರವು ಝಾನ್ಸಿ ರೈಲು ನಿಲ್ದಾಣದ ಹೆಸರನ್ನು ‘ವೀರಾಂಗನಾ ಲಕ್ಷ್ಮೀಬಾಯಿ ರೈಲುನಿಲ್ದಾಣ’ ಎಂದು ಬದಲಿಸಲು ತೀರ್ಮಾನಿಸಿದೆ. ಈ ಸಂಬಂಧ ರೈಲ್ವೆ ಸಚಿವಾಲಯಕ್ಕೆ ಅಧಿಕೃತ ಪ್ರಸ್ತಾವನೆಯನ್ನೂ ಸಲ್ಲಿಸಿದೆ. ರೈಲ್ವೆ ಸಚಿವಾಲಯವು ಪ್ರಸ್ತಾವನೆಯನ್ನು ಅಂಚೆ ಇಲಾಖೆ ಮತ್ತು ಸರ್ವೆ ಆಫ್ ಇಂಡಿಯಾಕ್ಕೆ ರವಾನಿಸಿದ್ದು, ದಾಖಲೆಗಳನ್ನು ಪರಿಶೀಲಿಸಿ, ಈ ಹೆಸರಿನ ಯಾವುದೇ ನಿಲ್ದಾಣ ಅಥವಾ ಊರು ಇಲ್ಲ ಎನ್ನುವುದನ್ನು ಈ ಇಲಾಖೆಗಳು ದೃಢೀಕರಿಸಬೇಕು. ನಂತರ ರೈಲ್ವೆ ಸಚಿವಾಲಯದ ಶಿಫಾರಸು ಆಧರಿಸಿ ಗೃಹ ಸಚಿವಾಲಯವು ಹೆಸರು ಬದಲಾವಣೆ ಸಂಬಂಧ ಅಧಿಕೃತ ಅಧಿಸೂಚನೆ ಹೊರಡಿಸುತ್ತದೆ. ಕೆಲದಿನಗಳ ಹಿಂದಷ್ಟೇ ವಾರಾಣಸಿಯ ಮಂಡೂದಿಹ್ ರೈಲುನಿಲ್ದಾಣದ ಹೆಸರನ್ನು ಬನಾರಸ್ ಎಂದು ಬದಲಿಸಲಾಗಿದೆ. ಮುಘಲ್ಸರಾಯ್ ನಿಲ್ದಾಣಕ್ಕೆ 2018ರಲ್ಲಿ ಪಂಡಿತ ದೀನ್ದಯಾಳ್ ಉಪಾಧ್ಯಾಯ ರೈಲು ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ.
from India & World News in Kannada | VK Polls https://ift.tt/3Ab1cpA