ಬೆಂಗಳೂರು: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ರಾಜಸ್ತಾನದ ವಿಶ್ರಾಂತ ರಾಜ್ಯಪಾಲರಾದ ಕಲ್ಯಾಣ್ ಸಿಂಗ್ ಅವರ ನಿಧನಕ್ಕೆ ಉನ್ನತ ಶಿಕ್ಷಣ, ಐಟಿ-ಬಿಟಿ-ವಿಜ್ಞಾನ-ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಎರಡು ಸಲ ಕಾರ್ಯ ನಿರ್ವಹಿಸಿದ್ದ ಅವರು ದಲಿತ ಮತ್ತು ಹಿಂದುಳಿದವರ ರಾಜಕೀಯ ಶಕ್ತಿಯಾಗಿದ್ದರು. ನಂಬಿದ ಸಿದ್ಧಾಂತಕ್ಕಾಗಿ ಅಧಿಕಾರವನ್ನೂ ಲೆಕ್ಕಿಸದ ವ್ಯಕ್ತಿಯಾಗಿದ್ದರು. ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಉತ್ತರ ಪ್ರದೇಶದ ರಾಜಕಾರಣ ಮಹತ್ತರ ತಿರುವು ಪಡೆಯಿತಲ್ಲದೆ, ರಾಮಮಂದಿರ ಚಳವಳಿಗೆ ಹೊಸ ದಿಕ್ಕು ತೋರಿಸಿತು. ಕಲ್ಯಾಣ ಸಿಂಗ್ ಅವರು ಭಾರತೀಯ ಜನತಾ ಪಕ್ಷದ ದೊಡ್ಡ ನಾಯಕರಾಗಿದ್ದರು. ಮಾತ್ರವಲ್ಲ, ಶೋಷಿತ ಸಮುದಾಯದ ದನಿಯಾಗಿದ್ದರು. ಆ ರಾಜ್ಯದಲ್ಲಿ ರಾಜಕೀಯ ಪ್ರಾತಿನಿಧ್ಯವೇ ಕಾಣದಿದ್ದ ತಳ ಸಮುದಾಯದ ಪಾಲಿಗೆ ಆಶಾಕಿರಣವಾಗಿದ್ದರು. ಹಿರಿಯರಾದ ಕಲ್ಯಾಣ್ ಸಿಂಗ್ ಅವರ ಅಗಲಿಕೆ ನೋವುಂಟು ಮಾಡಿದೆ. ಪಕ್ಷಕ್ಕೆ ದೊಡ್ಡ ನಷ್ಟವಾಗಿದೆ. ಆ ಹಿರಿಯ ಚೇತನಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ನಿಧನವನ್ನೂ ಭರಿಸುವ ಶಕ್ತಿ ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಭಗವಂತ ದಯಪಾಲಿಸಲಿ ಎಂದು ಡಾ.ಅಶ್ವತ್ಥನಾರಾಯಣ ಅವರು ಭಗವಂತನಲ್ಲಿ ಪ್ರಾರ್ಥನೆ ಮಾಡಿದ್ದಾರೆ.
from India & World News in Kannada | VK Polls https://ift.tt/3DaonTE