: ಮಂಗಳೂರಿನ ನಿವಾಸಿಯೊಬ್ಬರು ಅಫ್ಘಾನಿಸ್ತಾನದಿಂದ ಸುರಕ್ಷಿತರಾಗಿ ತಮ್ಮ ಹುಟ್ಟೂರಿಗೆ ಮರಳಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಮೇಲುಗೈ ಸಾಧಿಸುತ್ತಿದ್ದಂತೆಯೇ ಮುನ್ನೆಚ್ಚರಿಕಾ ಕ್ರಮವಾಗಿ ಭಾರತ ಸರ್ಕಾರವು ತನ್ನ ಪ್ರಜೆಗಳನ್ನು ಏರ್ಲಿಫ್ಟ್ ಮಾಡುತ್ತಿದೆ. ಈ ಪೈಕಿ, ಮಂಗಳೂರಿನ ಉಳ್ಳಾಲ ನಿವಾಸಿ ಮೆಲ್ವಿನ್ ಎಂಬುವರೂ ಕೂಡಾ ತಮ್ಮ ಊರಿಗೆ ವಾಪಸ್ಸಾಗಿದ್ದಾರೆ. ಅಫ್ಘನ್ನಲ್ಲಿ ಸಿಲುಕಿಕೊಂಡ ಭಾರತೀಯರ ಪೈಕಿ ಮೂಲದ ಕೆಲವು ಮಂದಿಯೂ ಕೂಡಾ ವಿವಿಧ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದರು. ಅವರನ್ನು ಆಯಾ ಕಂಪನಿಗಳು ಅವರ ಹುಟ್ಟೂರಿಗೆ ಸ್ಥಳಾಂತರ ಮಾಡುವ ಕಾರ್ಯ ನಡೆಸುತ್ತಿದೆ. ಕಾಬೂಲ್ನಿಂದ ಭಾರತೀಯ ವಾಯುಸೇನೆ ಮಾಡಿದವರಲ್ಲಿ ಉಳ್ಳಾಲದ ಉಳಿಯ ನಿವಾಸಿ ಮೆಲ್ವಿನ್ ಕೂಡಾ ಒಬ್ಬರಾಗಿದ್ದು, ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ್ದಾರೆ. ಇವರು ಕಾಬೂಲ್ನ ನ್ಯಾಟೋ ಪಡೆಯ ಮಿಲಿಟರಿ ಬೇಸ್ ಕ್ಯಾಂಪ್ನ ಆಸ್ಪತ್ರೆಯಲ್ಲಿ ಇಲೆಕ್ಟ್ರಿಕಲ್ ಮೈಂಟೆನೆನ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಭಾರತೀಯ ರಾಯಭಾರಿ ಕಚೇರಿಯಲ್ಲಿದ್ದ ಸಿಬ್ಬಂದಿಗಳನ್ನು, ಸೆಕ್ಯುರಿಟಿ ತಂಡವನ್ನು ಕರೆತರಲು ತೆರಳಿದ್ದ ವಾಯಸೇನೆಯ ಸಿ 17 ವಿಮಾನದಲ್ಲಿ ಮೆಲ್ವಿನ್ ಹಾಗೂ ಅವರ ಸಂಸ್ಥೆಯಲ್ಲಿ ಕೆಲಸ ಮಾಡುವ 7 ಜನರ ಸಹಿತ ಒಟ್ಟು 160 ಮಂದಿಯನ್ನು ಮಂಗಳವಾರ ಬೆಳಗ್ಗೆ 5 ಗಂಟೆಗೆ ಕಾಬೂಲ್ನಿಂದ ಗುಜರಾತ್ನ ಜಾಮ್ನಗರದಲ್ಲಿರುವ ವಾಯುಸೇನೆ ನೆಲೆಗೆ ಕರೆತರಲಾಯ್ತು. ಜಾಮ್ ನಗರದಿಂದ ದಿಲ್ಲಿ ಮೂಲಕ ಬೆಂಗಳೂರು ಮಾರ್ಗವಾಗಿ ಬುಧವಾರ ರಾತ್ರಿ ಮೆಲ್ವಿನ್ ಅವರು ಉಳ್ಳಾಲದ ತಮ್ಮ ಮನೆಗೆ ಸುರಕ್ಷಿತವಾಗಿ ವಾಪಸ್ಸಾಗಿದ್ದು, ಕುಟುಂಬಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
from India & World News in Kannada | VK Polls https://ift.tt/3D34TQv