ಬೆಂಗಳೂರು: ಗ್ಯಾಂಗ್ರೇಪ್ ಪ್ರಕರಣವನ್ನು ಸರಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ವಿಶೇಷ ತಂಡ ರಚಿಸಿ ತೀವ್ರಗತಿಯಲ್ಲಿ ತನಿಖೆ ನಡೆಸುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು. ದಿಲ್ಲಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅಪರಾಧಿಗಳು ಯಾರೇ ಇರಲಿ ಅವರನ್ನು ಕಾನೂನಾತ್ಮಕವಾಗಿ ಶಿಕ್ಷೆಗೆ ಒಳಪಡಿಸಬೇಕು,. ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದರು. ಅಲ್ಲದೇ ಗೃಹ ಸಚಿವರು ನೀಡಿದ ವಿವಾದಾತ್ಮಕ ಹೇಳಿಕೆಗೆ ನನ್ನ ಸಹಮತವಿಲ್ಲ. ಅವರಿಗೆ ಸ್ಪಷ್ಟೀಕರಣ ನೀಡಬೇಕೆಂದು ಹೇಳಿದ್ದೇನೆ. ಇಂತಹ ಘಟನೆಗಳನ್ನು ಸರಕಾರ ಗಂಭೀರವಾಗಿ ತೆಗೆದುಕೊಳ್ಳುತ್ತದೆ. ಅದಕ್ಕಾಗಿ ನಾನೇ ಹಿರಿಯ ಪೊಲೀಸರೊಂದಿಗೆ ಮಾತುಕತೆ ನಡೆಸಿ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ನೇರವಾಗಿ ನನಗೆ ವರದಿ ಮಾಡಬೇಕು ಎಂದು ಸೂಚಿಸಿದ್ದೇನೆ ಎಂದರು. ಇನ್ನು ಪ್ರಕರಣ ಸಂಬಂಧ ಮೈಸೂರು ನಗರ ಪೊಲೀಸ್ ಆಯುಕ್ತ, ಎಡಿಜಿಪಿ ಪ್ರತಾಪ್ರೆಡ್ಡಿ ಅವರೊಂದಿಗೆ ನೇರವಾಗಿ ಮಾತನಾಡಿದ್ದು, ದಿಲ್ಲಿಯಲ್ಲೇ ಇದ್ದ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೂ ನಿರ್ದಿಷ್ಟ ಸೂಚನೆ ನೀಡಿ ಕಳುಹಿಸಿದ್ದೇನೆ. ಅಧಿಕಾರಿಗಳು ತಮ್ಮ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಸಂತ್ರಸ್ತೆ ಹಾಗೂ ಪೋಷಕರೊಂದಿಗೆ ಹಿರಿಯ ಅಧಿಕಾರಿಗಳು ಮಾತನಾಡುತ್ತಿದ್ದಾರೆ. ಆ ಮಾಹಿತಿ ಆಧರಿಸಿ ಫೋನ್ ಸಂಪರ್ಕಗಳ ಮೇಲೆ ತನಿಖೆ ಮುಂದುವರಿಸಿದ್ದಾರೆ ಎಂದು ಹೇಳಿದರು.
from India & World News in Kannada | VK Polls https://ift.tt/3gyobUb