ಬೆಂಗಳೂರು:ಕೋವಿಡ್ ಆತಂಕದ ನಡುವೆಯೂ ರಾಜ್ಯದಾದ್ಯಂತ ಶಾಲಾ- ಕಾಲೇಜುಗಳಲ್ಲಿ ಭೌತಿಕ ತರಗತಿಗಳು ಆರಂಭಗೊಂಡಿವೆ. ಸುಮಾರು ಒಂದುವರೆ ವರ್ಷದ ಬಳಿಕ ಆನ್ಲೈನ್ ತರಗತಿಯಿಂದ ವಿದ್ಯಾರ್ಥಿಗಳು ಮುಕ್ತಿ ಪಡೆದಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬಲು ಹಾಗೂ ಶಾಲಾ ಕಾಲೇಜುಗಳ ಆವರಣ ಪರಿಶೀಲನೆ ನಡೆಸಲು ಸಿಎಂ ಅವರು ಸೋಮವಾರ ಮಲ್ಲೇಶ್ವರಂ ಬಡಾವಣೆಯ ನಿರ್ಮಲ ರಾಣಿ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಲ್ಲೇಶ್ವರಂ ಬಡಾವಣೆಯ ನಿರ್ಮಲ ರಾಣಿ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಅಷ್ಟೇ ಅಲ್ಲದೆ, ವಿದ್ಯಾರ್ಥಿಗಳ ಅನುಭವವನ್ನು ಆಲಿಸಿದರು. ವಿದ್ಯಾರ್ಥಿಗಳು ಶಾಲೆಗೆ ಬರುವುದರಿಂದ ಕಲಿಕಾ ಕ್ರಮದಲ್ಲಿ ಆಗುವ ಬದಲಾವಣೆಗಳ ಕುರಿತು ಸಿಎಂ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು. ನಿಯಂತ್ರಣ ಹಿನ್ನೆಲೆಯಲ್ಲಿ ಕೈಗೊಳ್ಳಲಾಗಿರುವ ಸಿದ್ಧತೆಗಳನ್ನು ಇದೇ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಪರಿಶೀಲಿಸಿದರು. ಯಾವುದೇ ಆತಂಕ ಇಲ್ಲದೆ ಕಾಲೇಜಿಗೆ ಬನ್ನಿ ಎಂದು ಅವರು ವಿದ್ಯಾರ್ಥಿಗಳಿಗೆ ಆಹ್ವಾನಿಸಿದರು. ಕಾಲೇಜು ಆವರಣದಲ್ಲಿ ಸಿಎಂ ಸಸಿ ನೆಟ್ಟು ನೀರು ಹಾಕಿದರು. ಡಾ. ಅಶ್ವಥ್ ನಾರಾಯಣ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್, ಉನ್ನತ ಶಿಕ್ಷಣ ಸಚಿವರಾದ ಅಶ್ವಥನಾರಾಯಣ ಉಪಸ್ಥಿತರಿದ್ದರು. ಕೋವಿಡ್ ಮೂರನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಶಾಲೆ ಆರಂಭದ ಬಗ್ಗೆ ಸಾಕಷ್ಟು ಅನುಮಾನಗಳು ಇದ್ದವು. ಆದರೆ ಸರ್ಕಾರ ಎಲ್ಲ ರೀತಿಯ ಮುನ್ನೆಚ್ಚರಿಕೆಗಳನ್ನು ವಹಿಸಿಕೊಂಡು ಶಾಲೆ ಕಾಲೇಜು ಆರಂಭ ಮಾಡಿದೆ. ಕೋವಿಡ್ ಕಾರಣದಿಂದಾಗಿ ಶಾಲೆಗಳು ಮುಚ್ಚಿರುವ ಪರಿಣಾಮ ವಿದ್ಯಾರ್ಥಿಗಳ ಶೈಕ್ಷಣಿಕ ಕಲಿಕೆಗೆ ಸಾಕಷ್ಟು ಅಡ್ಡಿ ಆಗಿದೆ. ಈ ನಿಟ್ಟಿನಲ್ಲಿ ಶಾಲೆಗಳನ್ನು ಆರಂಭಿಸಬೇಕು ಎಂಬ ಒತ್ತಡ ಹೆಚ್ಚಾಗುತ್ತಿದೆ. ಸದ್ಯ ಪರಿಸ್ಥಿತಿ ಪರಿಶೀಲನೆ ನಡೆಸಿ ಮುಂದಿನ ದಿನಗಳಲ್ಲಿ ಇತರ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.
from India & World News in Kannada | VK Polls https://ift.tt/3jaUdaS