ಸಿಂದಗಿ ಉಪಚುನಾವಣೆಗೆ ವಿಜಯೇಂದ್ರ ಸ್ಪರ್ಧೆ? ಕಮಲ ಪಾಳಯದಲ್ಲಿ ನಡೀತಿದೆ ಗೆಲುವಿನ ಲೆಕ್ಕಾಚಾರ!

ಸಿಂದಗಿ: ಮಾಜಿ ಸಚಿವ ದಿ.ಎಂ.ಸಿ.ಮನಗೂಳಿ ಅವರ ನಿಧನದಿಂದ ತೆರವಾದ ಸಿಂದಗಿ ಮತಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಗೆ ಬಿಜೆಪಿಯಿಂದ ಮಾಜಿ ಸಿಎಂ ಯಡಿಯೂರಪ್ಪನವರ ಪುತ್ರ, ಬಿಜೆಪಿಯ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಸ್ಪರ್ಧಿಸಲಿದಾರೆಯೇ.ಹೀಗೊಂದು ಚರ್ಚೆ ವಿಜಯಪುರ ಜಿಲ್ಲೆಯಲ್ಲಿ ಜೋರಾಗಿ ನಡೆದಿದೆ. ಕಾಂಗ್ರೆಸ್‌ ಈಗಾಗಲೇ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಮನಗೂಳಿ ಅವರ ಪುತ್ರ ಅಶೋಕ ಮನಗೂಳಿ ಕಾಂಗ್ರೆಸ್‌ ಅಭ್ಯರ್ಥಿ ಎಂದು ಹೇಳಿದೆ. ಆದರೆ ಇನ್ನೂ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಆದರೆ ಈ ಹಿಂದೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೆಸರು ಕೇಳಿಬಂದಿತ್ತು. ಜತೆಗೆ ಸ್ಥಳೀಯ ನಾಯಕರು ಸ್ಪರ್ಧೆಗೆ ಒಲವು ತೋರಿದ್ದು, ಆ ನಿಟ್ಟಿನಲ್ಲಿ ಸುತ್ತಾಟ ಜೋರಾಗಿ ನಡೆಸಿದ್ದಾರೆ. ಆದರೆ ಈಗ ವಿಜಯೇಂದ್ರ ಹೆಸರು ಕೇಳಿಬರುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಡಿಸಿಎಂ ಹುದ್ದೆ ಆಕಾಂಕ್ಷಿ ಎನ್ನಲಾಗಿದೆ. ಶೀಘ್ರವೇ ಸಿಂದಗಿಗೆ ಚುನಾವಣೆ ಘೋಷಣೆಯಾಗಲಿದ್ದು, ಅಲ್ಲಿಂದ ವಿಜಯೇಂದ್ರ ಸ್ಪರ್ಧೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ಅಷ್ಟಕ್ಕೂ ವಿಜಯೇಂದ್ರ ಅವರಾಗಲಿ, ಯಡಿಯೂಪ್ಪನವರಾಗಲಿ, ಪಕ್ಷದ ನಾಯಕರಾಗಲಿ ಯಾರೂ ವಿಜಯೇಂದ್ರ ಸ್ಫರ್ಧೆ ಮಾಡುತ್ತಾರೆಂದು ಎಲ್ಲೂ ಹೇಳಿಲ್ಲ. ಅವರ ಹೆಸರು ಮುಂಚೂಣಿಗೆ ಬಂದಿದ್ದರಿಂದ ಯಾರು ಈ ಹೆಸರು ಹುಟ್ಟು ಹಾಕಿದವರು ಎನ್ನುವುದು ಹುಡುಕಾಟ ಬಿಜೆಪಿ ಪಾಳೆಯದಲ್ಲಿಯೇ ಶುರುವಾಗಿದೆ. ಬಿಜೆಪಿ ಮಾಜಿ ಶಾಸಕ, ಉಪಚುನಾವಣೆ ಆಕಾಂಕ್ಷಿ ರಮೇಶ ಭೂಸನೂರ ವಿರೋಧಿ ಬಣ ಈ ಹೆಸರು ಹರಿಬಿಟ್ಟಿರಬಹುದು. ಇಲ್ಲವೇ ವಿಜಯೇಂದ್ರ ಬೀಗರ ಸಮುದಾಯದಿಂದ ಈ ಸುದ್ದಿ ಹೊರಬಂದಿರಲೂಬಹುದು ಎಂದು ಭೂಸನೂರ ಬೆಂಬಲಿಗರು ಹೇಳುತ್ತಿದ್ದಾರೆ.


from India & World News in Kannada | VK Polls https://ift.tt/2WDu5fJ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...