ಖಾತೆ ಕ್ಯಾತೆ: ಮುಂದುವರಿದ ಮುನಿಸು; ಆನಂದ್ ಸಿಂಗ್ ಮುಂದಿನ ನಡೆ ಏನು?

ಬೆಂಗಳೂರು: ಖಾತೆ ಬಗ್ಗೆ ಅಸಮಾಧಾನ ಹೊಂದಿರುವ ಮುನಿಸು ಮುಂದುವರಿದಿದೆ. ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಜೊತೆಗಿನ ಸಂಧಾನ ಕೂಡಾ ಯಶಸ್ವಿಯಾಗಿಲ್ಲ. ಖಾತೆ ಬದಲಾವಣೆ ಮಾಡಿಯೇ ತೀರಬೇಕು ಎಂದು ಪಟ್ಟು ಹಿಡಿದಿರುವ ಆನಂದ್ ಸಿಂಗ್ ಅಧಿಕಾರವನ್ನು ವಹಿಸಿಕೊಳ್ಳದೆ ಮುನಿಸು ಮುಂದುವರಿಸಿದ್ದಾರೆ. ಅರಣ್ಯ ಅಥವಾ ಇಂಧನ ಖಾತೆಗೆ ಆನಂದ್ ಸಿಂಗ್ ಪಟ್ಟು ಹಿಡಿದಿದ್ದಾರೆ. ಆದರೆ ಖಾತೆ ಬದಲಾವಣೆ ಮಾಡಿದರೆ ಇದು ಮತ್ತಷ್ಟು ಸಮಸ್ಯೆಗಳಿಗೆ ಕಾರಣವಾಗಬಹುದು ಎಂಬುವುದು ಸಿಎಂ ಬಸವರಾಜ ಬೊಮ್ಮಾಯಿ ಯೋಚನೆಯಾಗಿದೆ. ಆದರೆ ಸಿಂಗ್ ಪಟ್ಟು ಸಡಿಲಿಸುತ್ತಿಲ್ಲ. ಇದು ಸಿಎಂ ಬೊಮ್ಮಾಯಿಗೆ ಹೊಸ ತಲೆನೋವನ್ನು ಸೃಷ್ಟಿಸಿದೆ. ಆನಂದ್ ಸಿಂಗ್ ಸಚಿವ ಸ್ಥಾನ ಸಿಕ್ಕಿದ ಬಳಿಕ ತಮ್ಮ ಇಲಾಖೆಯ ಅಧಿಕಾರವನ್ನು ಸ್ವೀಕಾರ ಮಾಡಿಲ್ಲ. ಯಾವುದೇ ಸಭೆಯನ್ನು ನಡೆಸಿಲ್ಲ. ನಾನು ಸಮ್ಮಿಶ್ರ ಸರ್ಕಾರದಲ್ಲಿ ತ್ಯಾಗ ಮಾಡಿ ಸರ್ಕಾರ ರಚನೆಗೆ ಕಾರಣಕರ್ತನಾಗಿದ್ದೇನೆ. ಆ ಸಂದರ್ಭದಲ್ಲಿ ಸಾಕಷ್ಟು ಪಾಡು ಪಟ್ಟಿದ್ದೇನೆ. ಈ ನಿಟ್ಟಿನಲ್ಲಿ ನಮ್ಮ ನಿರೀಕ್ಷೆಗಳನ್ನು ಈಡೇರಿಸಬೇಕು ಎಂಬುವುದು ಆನಂದ್ ಸಿಂಗ್ ವಾದವಾಗಿದೆ. ಆದರೆ ಖಾತೆ ಬದಲಾವಣೆ ಮಾಡಿದರೆ ಇತರರು ತಮ್ಮ ಬೇಡಿಕೆಗಳನ್ನು ಮುಂದಿಡುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಖಾತೆ ಬದಲಾವಣೆ ಮಾಡಲು ಸಾಧ್ಯವಿಲ್ಲ. ಕೊಟ್ಟ ಖಾತೆಯನ್ನು ನಿಭಾಯಿಸಿ ಮುಂದಿನ ದಿನಗಳಲ್ಲಿ ನೋಡೋಣ ಎಂಬ ಮನವಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಇದನ್ನು ಒಪ್ಪುವ ಸ್ಥಿತಿಯಲ್ಲಿ ಆನಂದ್ ಸಿಂಗ್ ಇಲ್ಲ. ಯಾವುದೇ ಕಾರಣಕ್ಕೂ ಪಟ್ಟು ಸಡಿಲಿಸಲ್ಲ ಎಂದಿದ್ದಾರೆ. ಈ ನಿಟ್ಟಿನಲ್ಲಿ ಆನಂದ್ ಸಿಂಗ್ ಮುಂದಿನ ನಡೆ ಏನು ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ. ಈ ನಡುವೆ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ಭೇಟಿ ನೀಡಿ ವರಿಷ್ಠರ ಜೊತೆಗೆ ಮಾತುಕತೆಯನ್ನು ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಆನಂದ್ ಸಿಂಗ್ ವಿಚಾರವೂ ಚರ್ಚೆ ನಡೆಯಲಿದೆ. ವರಿಷ್ಠರ ಮೂಲಕ ಸಂಧಾನ ಪ್ರಯತ್ನವೂ ನಡೆಯುವ ಸಾಧ್ಯತೆ ಇದೆ. ಆದರೆ ಇದಕ್ಕೆಲ್ಲಾ ಆನಂದ್ ಸಿಂಗ್ ಸಮ್ಮತಿ ಸೂಚಿಸುತ್ತಾರಾ ಎಂಬುವುದು ಮಾತ್ರ ಕುತೂಹಲಕ್ಕೆ ಗ್ರಾಸವಾಗಿದೆ.


from India & World News in Kannada | VK Polls https://ift.tt/3sBPguA

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...