ಬೆಂಗಳೂರು: ರೇಪ್ ಆಗಿರೋದು ಮೈಸೂರಿನಲ್ಲಿ. ಆದರೆ ಈ ಕಾಂಗ್ರೆಸ್ಸಿನವರು ನನ್ನನ್ನು ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಬೇಜವಾಬ್ದಾರಿ ಹೇಳಿಕೆ ನೀಡುವ ಮೂಲಕ ಗೃಹ ಸಚಿವ ವಿವಾದಾಕ್ಕೆ ಸಿಲುಕಿದ್ದಾರೆ. ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ನವರು ಈ ಘಟನೆಯಿಂದ ರಾಜಕೀಯ ಲಾಭ ಗಳಿಸಲು ಯತ್ನಿಸುತ್ತಿದ್ದಾರೆ. ಅತ್ಯಾಚಾರ ಆಗಿದ್ದು ಅಲ್ಲಿ, ಆದರೆ ಕಾಂಗ್ರೆಸ್ನವರು ನನ್ನನ್ನು ರೇಪ್ ಮಾಡ್ತಿದ್ದಾರೆ ಎಂದು ನೀಡಿದ್ದು, ಅಲ್ಲಿ ಆಗಿರುವುದು ಅಮಾನುಷವಾದ ಕೆಲಸ. ಅದನ್ನು ಮಾನವೀಯ ದೃಷ್ಟಿಯಿಂದ ನೋಡಿ, ಡಿಟೆಕ್ಟ್ ಮಾಡಿ ಅನ್ನಬೇಕು. ಕಾಂಗ್ರೆಸ್ನವರು ಹಾಗೆ ಮಾಡದೇ ನನ್ನ ಮೇಲೆ ಹರಿಹಾಯುತ್ತಿದ್ದಾರೆ. ಈ ಪ್ರಕರಣದಲ್ಲೂ ರಾಜಕೀಯ ಮಾಡಲು ಹೋಗಬಾರದು ಎಂದು ಗೃಹ ಸಚಿವರು ಹೇಳಿದ್ದಾರೆ. ಆ ಯುವಕ, ಯುವತಿ ಸಂಜೆ 7.30ರ ವೇಳೆಗೆ ನಿರ್ಜನ ಪ್ರದೇಶಕ್ಕೆ ಹೋಗಬಾರದಿತ್ತು ಎಂದೂ ಹೇಳಿರುವ ಆರಗ ಜ್ಞಾನೇಂದ್ರ, ಆದರೆ ಹೋಗಬೇಡಿ ಅಂತಾ ತಡೆಯೋದಕ್ಕೂ ಆಗೋದಿಲ್ಲ. ಸದ್ಯಕ್ಕೆ ಯುವಕ,ಯುವತಿ ಶಾಕ್ನಲ್ಲಿ ಇದ್ದಾರೆ. ಅವರ ಸಂಪೂರ್ಣ ಸ್ಟೇಟ್ ಮೆಂಟ್ ಪಡೆಯಲು ಆಗಿಲ್ಲ. ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಎಂದು ಸಹ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
from India & World News in Kannada | VK Polls https://ift.tt/3mzBJ5L