ನನ್ನ ಜನರು ತಲೆ ತಗ್ಗಿಸುವಂತಹ ಯಾವ ಕೆಲಸವನ್ನೂ ನಾನು ಮಾಡಲ್ಲ; ಜಮೀರ್‌ ಖಾನ್

ಬೆಂಗಳೂರು: ನಾನು ರಾಜಕೀಯ ಜೀವನದಲ್ಲಿರುವವರೆಗೆ ನನ್ನ ಜನ ತಲೆತಗ್ಗಿಸುವಂತ ಯಾವ ಕೆಲಸವನ್ನೂ ಮಾಡುವುದಿಲ್ಲ ಎಂದು ಜಮೀರ್‌ ಅಹ್ಮದ್‌ ಖಾನ್ ಹೇಳಿದ್ದಾರೆ. ಈ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅವರು, ನನ್ನ ಆಸ್ತಿಯೆಂದರೆ ನನ್ನ ಜನ. ನಾನು ರಾಜಕೀಯ ಜೀವನದಲ್ಲಿರುವವರೆಗೆ ನನ್ನ ಜನ ತಲೆತಗ್ಗಿಸುವಂತ ಯಾವ ಕೆಲಸವನ್ನೂ ಮಾಡುವುದಿಲ್ಲ. ನನ್ನ ಆಸ್ತಿಯೂ ಅವರೇ ಎಂದು ಹೇಳಿಕೊಂಡಿದ್ದಾರೆ. ಇ.ಡಿ ದಾಳಿಯಿಂದ ಹಲವರ ಅನುಮಾನಗಳು ಪರಿಹಾರವಾದದ್ದೇ ನನಗೆ ಖುಷಿಯ ವಿಚಾರ ಎಂದಿರುವ ಜಮೀರ್, ನಾನು ಮನೆಯನ್ನು ಕಟ್ಟಿಸಿದ್ದೆ ದೊಡ್ಡ ಅಪರಾಧವೆಂಬಂತೆ ಬಿಂಬಿಸಲಾಗುತ್ತಿದೆ. ಈ ಕಾರಣಕ್ಕಾಗಿ ನನ್ನ ಮೇಲೆ ಇ.ಡಿ ದಾಳಿಯಾಯಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಇ.ಡಿ ಯವರು ಯಾವ ನಿರೀಕ್ಷೆಯಿಂದ ನನ್ನ ಮೇಲೆ ದಾಳಿ ಮಾಡಿದ್ದರೋ ಆ ಎಲ್ಲಾ ನಿರೀಕ್ಷೆಗಳು ಹುಸಿಯಾಗಿವೆ ಎಂದಿರುವ ಜಮೀರ್, ದೇಶದ ವಿವಿಧ ರಾಜ್ಯಗಳ ಪ್ರಬಲ ಮುಸ್ಲಿಂ ನಾಯಕರ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಅವರಿಗೆ ಕಿರುಕುಳ ನೀಡುವ ಪ್ರಯತ್ನ ನಡೆಯುತ್ತಿದೆ. ಇಂತಹ ಷಡ್ಯಂತ್ರದ ಭಾಗವಾಗಿ ನನ್ನ ಮೇಲೂ ಹಲವು ರೀತಿ ದಾಳಿಗಳಾಗುತ್ತಿವೆ. ಆದರೆ ಇದ್ಯಾವುದಕ್ಕೂ ನಾನು ಹೆದರುವುದಿಲ್ಲ ಎಂದು ಸವಾಲು ಹಾಕಿದ್ದಾರೆ. ಶಾಸಕ ಅವರು ಸಹಾಯ ಕೇಳಿ ಬಂದವರಿಗೆ ಸ್ಥಳದಲ್ಲೇ ನೋಟಿನ ಕಂತೆ ಕೊಡುತ್ತಿದ್ದದ್ದು ಇ.ಡಿ ಅಧಿಕಾರಿಗಳು ಕೆಂಗಣ್ಣಿನಿಂದ ನೋಡುವಂತೆ ಮಾಡಿತ್ತು. ಅಲ್ಲದೇ ಜಮೀರ್ ಅವರು ಐಷಾರಾಮಿ ಮನೆ ಕಟ್ಟಿರುವುದರ ಹಿಂದಿನ ಆರ್ಥಿಕ ಮೂಲದ ಬಗ್ಗೆ ತನಿಖೆ ನೀಡುವಂತೆ ಇ.ಡಿ ಅಧಿಕಾರಿಗಳಿಗೆ ಯಾರೋ ದೂರು ನೀಡಿದ್ದರು. ಪರಿಣಾಮ ಜಮೀರ್ ಮನೆ, ಕಚೇರಿಗೆ ಕೆಲ ದಿನಗಳ ಹಿಂದೆ ದಾಳಿ ನಡೆಸಿದ್ದ ಇ.ಡಿ ಅಧಿಕಾರಿಗಳು ನಿರಂತರವಾಗಿ ಇಪ್ಪತ್ತನಾಲ್ಕು ಗಂಟೆಗಳ ಕಾಲ ಶೋಧ ನಡೆಸಿ ಹಿಂದಿರುಗಿದ್ದರು.


from India & World News in Kannada | VK Polls https://ift.tt/3821DXm

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...