Supreme Court ಪದೋನ್ನತಿ: 3 ಮಹಿಳೆಯರು ಸೇರಿ 9 ನ್ಯಾಯಮೂರ್ತಿಗಳ ನೇಮಕಕ್ಕೆ ಸರ್ಕಾರ ಒಪ್ಪಿಗೆ

ಹೊಸದಿಲ್ಲಿ: ಕರ್ನಾಟಕದ ನ್ಯಾ. ಸೇರಿದಂತೆ ಕೊಲಿಜಿಯಂ ಶಿಫಾರಸು ಮಾಡಿದ್ದ ಎಲ್ಲ ಒಂಬತ್ತು ನ್ಯಾಯಮೂರ್ತಿಗಳ ಪದೋನ್ನತಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಹೆಸರುಗಳನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅನುಮತಿಗಾಗಿ ರವಾನಿಸಲಾಗಿದೆ. ಒಂಬತ್ತು ನ್ಯಾಯಮೂರ್ತಿಗಳ ಪದೋನ್ನತಿಯು ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಇತಿಹಾಸ ಸೃಷ್ಟಿಗೆ ಸಾಕ್ಷಿಯಾಗುತ್ತಿದೆ. ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿರುವ ಬಿವಿ ನಾಗರತ್ನ ಅವರು ತಾವು ನಿವೃತ್ತರಾಗುವ ಕೆಲವು ತಿಂಗಳ ಮುನ್ನ ಸುಪ್ರೀಂಕೋರ್ಟ್ ಮುಖ್ಯ ಆಗುವ ಸಾಧ್ಯತೆ ಇದೆ. ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ನ್ಯಾಯಮೂರ್ತಿಯೊಬ್ಬರು ಸಿಜೆಐ ಆಗುವ ಅವಕಾಶ ಪಡೆಯಲಿದ್ದಾರೆ. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಎಸ್ ಒಕಾ ಕೂಡ ಸುಪ್ರೀಂಕೋರ್ಟ್‌ಗೆ ತೆರಳಲಿದ್ದಾರೆ. ಮೂವರು ಮಹಿಳಾ ನ್ಯಾಯಮೂರ್ತಿಗಳನ್ನು ಒಮ್ಮೆಲೆ ಸುಪ್ರೀಂಕೋರ್ಟ್‌ಗೆ ನೇಮಿಸುತ್ತಿರುವುದು ಕೂಡ ಅಪರೂಪದ ನಿದರ್ಶನವಾಗಿದೆ. ಸುಪ್ರೀಂಕೋರ್ಟ್ ಒಟ್ಟು 34 ನ್ಯಾಯಮೂರ್ತಿಗಳನ್ನು ಹೊಂದುವ ಅವಕಾಶವಿದ್ದು, ಪ್ರಸ್ತುತ 25 ನ್ಯಾಯಮೂರ್ತಿಗಳಿದ್ದಾರೆ. ಒಂಬತ್ತು ಹೊಸ ನ್ಯಾಯಮೂರ್ತಿಗಳು ಪ್ರಮಾಣವಚನ ಸ್ವೀಕರಿಸಿದ ಬಳಿಕ ಒಂದು ಸ್ಥಾನ ಮಾತ್ರ ಖಾಲಿ ಉಳಿಯಲಿದೆ. ಸಿಜೆಐ ಎನ್‌ವಿ ರಮಣ ನೇತೃತ್ವದ ಸುಪ್ರೀಂಕೋರ್ಟ್ ಶಿಫಾರಸು ಮಾಡಿದ್ದ ಎಲ್ಲ ಒಂಬತ್ತು ಹೆಸರುಗಳನ್ನು ಕೂಡ ಕೇಂದ್ರ ಸರ್ಕಾರ ಅಂಗೀಕರಿಸಿರುವುದು ಕೂಡ ಇದೇ ಮೊದಲು ಎನ್ನಲಾಗಿದೆ. ದೇಶದ ವಿವಿಧ ಹೈಕೋರ್ಟ್‌ಗಳ ಎಂಟು ಮಂದಿ ನ್ಯಾಯಮೂರ್ತಿಗಳು ಹಾಗೂ ಸುಪ್ರೀಂಕೋರ್ಟ್ ಬಾರ್‌ನಲ್ಲಿನ ಒಬ್ಬ ಹಿರಿಯ ವಕೀಲರನ್ನು ಹೆಸರಿಸಲಾಗಿತ್ತು. ಪಡೆದ ನ್ಯಾಯಮೂರ್ತಿಗಳುಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ, ಗುಜರಾತ್ ಹೈಕೋರ್ಟ್‌ನ ವಿಕ್ರಮ್ ನಾಥ್, ಸಿಕ್ಕಿಂ ಹೈಕೋರ್ಟ್‌ನ ಜಿತೇಂದ್ರ ಕುಮಾರ್ ಮಹೇಶ್ವರಿ ಮತ್ತು ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಿಮಾ ಕೊಹ್ಲಿ, ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಬಿವಿ ನಾಗರತ್ನ, ಕೇರಳ ಹೈಕೋರ್ಟ್‌ನ ಸಿ.ಟಿ ರವಿಕುಮಾರ್, ಮದ್ರಾಸ್ ಹೈಕೋರ್ಟ್‌ನ ಎಂಎಂ ಸುಂದರೇಶ್ ಮತ್ತು ಗುಜರಾತ್ ಹೈಕೋರ್ಟ್‌ ನ್ಯಾಯಮೂರ್ತಿ ಬೆಲಾ ತ್ರಿವೇದಿ ಮತ್ತು ಹಿರಿಯ ವಕೀಲ ಹಾಗೂ ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿಎಸ್ ನರಸಿಂಹ.


from India & World News in Kannada | VK Polls https://ift.tt/3ykgWFJ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...