ಅರ್ಕಾವತಿ ನದಿ ಶುದ್ಧೀಕರಣಕ್ಕೆ 20 ಕೋಟಿ ಯೋಜನೆ; ಕಾಮಗಾರಿ ಕೈಗೆತ್ತಿಕೊಳ್ಳಲು ಗುತ್ತಿಗೆದಾರರ ಹಿಂದೇಟು!

ಆರ್‌.ಶ್ರೀಧರ್‌ ರಾಮನಗರ: ನಗರದ ಅಷ್ಟೂ ಕೊಳೆಯನ್ನು ತನ್ನೊಡಲಲ್ಲಿ ಹೊತ್ತು ಸಾಗುತ್ತಿರುವ ಅರ್ಕಾವತಿ ನದಿ ಪುನಶ್ಚೇತನಕ್ಕೆ ಕೊನೆಗೂ ಕಾಲ ಕೂಡಿ ಬಂದಿದೆ. ನದಿ ಶುದ್ಧೀಕರಣಕ್ಕೆ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ 20.50 ಕೋಟಿ ರೂ.ಗಳ ಸಮಗ್ರ ಯೋಜನೆ ಸಿದ್ಧಪಡಿಸಿದೆ. ನಗರದಲ್ಲಿ ಉತ್ಪತ್ತಿಯಾಗುವ ಕಲುಷಿತ ನೀರು ಅರ್ಕಾವತಿ ನದಿ ಸೇರದಂತೆ ತಡೆಯುವುದು ಯೋಜನೆ ಮುಖ್ಯ ಉದ್ದೇಶ. 17 ಕಲುಷಿತ ನದಿಗಳಲ್ಲೊಂದು:ಒಂದೊಮ್ಮೆ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಜೀವನಾಡಿಯಾಗಿದ್ದ ಅರ್ಕಾವತಿ ಇಂದು ರಾಜ್ಯದ 17 ಕಲುಷಿತ ನದಿಗಳಲ್ಲಿಒಂದು ಎಂಬ ಕುಖ್ಯಾತಿಗೆ ಪಾತ್ರವಾಗಿದೆ. ಈ ಅಪಖ್ಯಾತಿಯಿಂದ ನದಿಯನ್ನು ಮುಕ್ತಗೊಳಿಸುವ ನಿಟ್ಟಿನಲ್ಲಿ ನದಿಗೆ ನಗರ ಪ್ರದೇಶಗಳ ಕಲುಷಿತ ನೀರು ಸೇರದಂತೆ ತಡೆಯಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಕಟ್ಟುನಿಟ್ಟಿನ ಆದೇಶ ನೀಡಿದೆ. ಈ ದಿಸೆಯಲ್ಲಿ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಮಗ್ರ ಯೋಜನೆಯೊಂದನ್ನು ಸಿದ್ಧಪಡಿಸಿದ್ದು, ಈ ಯೋಜನೆಗೆ ಕೇಂದ್ರ ಸರಕಾರದ ಅನುಮೋದನೆಯೂ ದೊರೆತಿದೆ. ಗುತ್ತಿಗೆದಾರರ ಹಿಂದೇಟು:ನದಿ ಶುದ್ಧೀಕರಣ ಯೋಜನೆಯಲ್ಲಿ ಹಲವು ಕಠಿಣ ಷರತ್ತುಗಳನ್ನು ವಿಧಿಸಲಾಗಿದೆ. ಶುದ್ಧೀಕರಣ ಯೋಜನೆಯನ್ನು ನಿರ್ದಿಷ್ಟ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಐದು ವರ್ಷಗಳ ಕಾಲ ಯೋಜನೆಯ ನಿರ್ವಹಣೆಯನ್ನೂ ಗುತ್ತಿಗೆದಾರರೇ ನಿರ್ವಹಿಸಬೇಕು ಎಂಬ ಷರತ್ತು ವಿಧಿಸಲಾಗಿದೆ. ಅರ್ಕಾವತಿ ನದಿ ಪಾತ್ರದಲ್ಲಿ ಆರು ನಗರಗಳಿವೆ. ಈ ನಗರಗಳ ಅಷ್ಟೂ ಕಲುಷಿತ ನೀರು ನದಿ ಸೇರುತ್ತಿದೆ. ಈ ನಗರಗಳ ಒಂದೇ ಒಂದು ಹನಿ ಕಲುಷಿತ ನೀರು ನದಿಗೆ ಸೇರದಂತೆ ತಡೆಯಬೇಕಿದೆ. ಈ ಹಿನ್ನೆಲೆಯಲ್ಲಿ ಈ ಹಿಂದೆ ಕರೆದಿದ್ದ ಟೆಂಡರ್‌ಗಳಲ್ಲಿ ಯಾರೊಬ್ಬರೂ ಪಾಲ್ಗೊಳ್ಳದೇ ಇದ್ದುದರಿಂದ ರದ್ದುಗೊಂಡಿತ್ತು. ಈಗ ರಾಮನಗರಕ್ಕೆ ಪ್ರತ್ಯೇಕವಾಗಿ ಟೆಂಡರ್‌ ಕರೆಯಲಾಗಿದ್ದು, ಅದರಲ್ಲಿ ಇಬ್ಬರು ಗುತ್ತಿಗೆದಾರರು ಭಾಗವಹಿಸಿದ್ದಾರೆ. ಶೀಘ್ರವೇ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಏನಿದು ಯೋಜನೆ?:ಈ ಯೋಜನೆಯಲ್ಲಿ ನಗರದಲ್ಲಿನ ನಾಲ್ಕು ವೆಟ್‌ ವೆಲ್‌ಗಳು ಮತ್ತು ಎಸ್‌ಟಿಪಿ (ಸಿವೇಜ್‌ ಟ್ರೀಟ್‌ ಮೆಂಟ್‌ ಪ್ಲಾಂಟ್‌ )ಗೆ ಹೊಸ ಮೋಟಾರ್‌ ಪಂಪ್‌ ಸೆಟ್‌ ಅಳಧಿವಡಿಕೆ ಹಾಗೂ ಮ್ಯಾನ್‌ ಹೋಲ್‌, ಯುಜಿಡಿ ಲೈನ್‌ ಕಡಿತಗೊಂಡಿದ್ದರೆ ದುರಸ್ಥಿ ಪಡಿಸಿ ನಿರ್ವಹಣೆ ಮಾಡಲಾಗುತ್ತದೆ. ನಗರ ವ್ಯಾಪ್ತಿಯಲ್ಲಿ ಕಲುಷಿತ ನೀರು ಅರ್ಕಾವತಿ ನದಿ ಸೇರುವುದನ್ನು ತಪ್ಪಿಸಲು 20.50 ಕೋಟಿ ವೆಚ್ಚದ ಯೋಜನೆ ತಯಾರಿಸಲಾಗಿದೆ. ಈಗಾಗಲೇ ಎರಡು ಬಾರಿ ಕರೆದಿದ್ದ ಟೆಂಡರ್‌ ಗಳಲ್ಲಿ ಗುತ್ತಿಗೆದಾರರು ಭಾಗಿಯಾಗಲಿಲ್ಲ. ಈಗ ಮೂರನೇ ಬಾರಿಗೆ ಕರೆದಿರುವ ಟೆಂಡರ್‌ ನಲ್ಲಿ ಇಬ್ಬರು ಗುತ್ತಿಗೆದಾರರು ಪಾಲ್ಗೊಂಡಿದ್ದು, ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡ ತಕ್ಷಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. - ಗಂಗಾಧರ್‌ , ಎಇಇ,


from India & World News in Kannada | VK Polls https://ift.tt/3uc5KdS

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...