ತಹಸೀಲ್ದಾರ್‌ ಡಾ.ನಾಗವೇಣಿಗೆ ಸೀಮಂತ ಕಾರ್ಯ; ಉಡಿ ತುಂಬಿದ ಇಲಾಖೆಯ ಅಧಿಕಾರಿಗಳು

ಜಗಳೂರು: ಸದಾ ಕೆಲಸ ಕಾರ್ಯಗಳಿಂದ ಗಿಜಿಗುಡುತ್ತಿದ್ದ ತಹಶೀಲ್ದಾರ್ ಕಚೇರಿಯಲ್ಲಿ ನಿನ್ನೆ ಮಾತ್ರ ಸಂಭ್ರಮದ ವಾತಾವರಣ ಸೃಷ್ಟಿಯಾಗಿತ್ತು. ಅದಕ್ಕೆ ತಹಶೀಲ್ದಾರ್ ಡಾ. ನಾಗವೇಣಿ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸೀಮಂತ ಕಾರ್ಯ ಹಮ್ಮಿಕೊಂಡಿದ್ದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆಗಳ ಸಹಯೋಗದಲ್ಲಿ ಪಟ್ಟಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘’ ಮಾಸಾಚರಣೆಯಲ್ಲಿ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರು, ಕಾರ್ಯಕರ್ತೆಯರು ಹಾಗೂ ಆಯುಷ್ ವೈದ್ಯರು ಹೂ, ಹಣ್ಣು, ಸೀರೆ, ರವಿಕೆ, ಎಲೆ, ಅಡಿಕೆ, ಅರಿಶಿಣಗಳಿಂದ ಆತ್ಮೀಯವಾಗಿ ತಹಶೀಲ್ದಾರ್ ಅವರ ಉಡಿ ತುಂಬಿದರು. ಅರಿಶಿಣ ಹಾಗೂ ಕುಂಕುಮ ಹಚ್ಚಿ ಭಾವನಾತ್ಮಕವಾಗಿ ಸೀಮಂತ ಮಾಡಲಾಯಿತು. ಸರ್ಕಾರಿ ಕಾರ್ಯಕ್ರಮವಾದರೂ ಕುಟುಂಬದ ಸದಸ್ಯರಂತೆ ಆಪ್ತತೆಯಿಂದ ಉಡಿ ತುಂಬಿದ್ದು, ತಹಶೀಲ್ದಾರ್ ನಾಗವೇಣಿ ಅವರನ್ನು ಭಾವುಕರನ್ನಾಗಿಸಿತು. ಈ ವೇಳೆ ಮಾತನಾಡಿದ ತಹಸೀಲ್ದಾರ್‌ ಡಾ.ನಾಗವೇಣಿ, ಗರ್ಭಿಣಿಯರಿಗೆ ಅಪೌಷ್ಟಿಕತೆ ಉಂಟಾಗದಂತೆ ಹಸಿರು ತರಕಾರಿ ಸೊಪ್ಪು ಸೇರಿ ಕಬ್ಬಿಣಾಂಶವುಳ್ಳ ಪದಾರ್ಥಗಳನ್ನು ಪೂರೈಸಬೇಕು. ಕೊರೊನಾ 3ನೇ ಅಲೆಯು ತೀವ್ರ ತೆರನಾಗಿದ್ದು ಹೆಚ್ಚಾಗಿ ಮಕ್ಕಳಿಗೆ ಸೋಂಕು ತಗುಲಲಿದೆ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕೊವ್ಯಾಕ್ಸಿನ್‌ ಚುಚ್ಚುಮದ್ದು ಹಾಕಿಸಿಕೊಳ್ಳಲು ಜನರು ಹಿಂದೇಟು ಹಾಕುತ್ತಿದ್ದು ಮೂಢ ನಂಬಿಕೆಗಳಿಗೆ ಬಲಿಯಾಗಬಾರದು. ಪ್ರತಿಯೊಬ್ಬರೂ ಕೊವ್ಯಾಕ್ಸಿನ್‌ ಹಾಕಿಸಿಕೊಂಡು ಕೊರೋನಾದಿಂದ ಮುಕ್ತರಾಗಬೇಕು ಎಂದರು. ಈ ಹಿಂದೆ ಮೂಢ ನಂಬಿಕೆಗಳಿಂದ ಗರ್ಭಿಣಿಯರಿಗೆ ಸೀಮಂತ ಅಚರಣೆ ಮಾಡುತ್ತಿರಲಿಲ್ಲ. ಆದರೆ ಇಂದಿನ ದಿನಮಾನಗಳಲ್ಲಿ ಇಲಾಖಾ ಕಾರ್ಯಕ್ರಮಗಳಿಂದ ಜಾಗೃತರಾದ ಕುಟುಂಬ ವರ್ಗದವರು ಸೀಮಂತ ಮಾಡುವಲ್ಲಿ ಮುಂದಾಗಿದ್ದು, ಪೋಷಣ್‌ ಅಭಿಯಾನದಲ್ಲಿ ನನಗೆ ಸೀಮಂತ ಮಾಡಿದ್ದು ಹರ್ಷವನ್ನುಂಟು ಮಾಡಿದೆ. ಎಲ್ಲಾ ಬಾಣಂತಿಯರಿಗೂ ಸರಕಾರವೇ ಮನೆ ಬಾಗಿಲಿಗೆ ಪೌಷ್ಟಿಕಾಂಶಯುಕ್ತ ಪದಾರ್ಥಗಳನ್ನು ತಲುಪಿಸುತ್ತಿದ್ದು ಗರ್ಭಿಣಿಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೀರೇಂದ್ರ ಕುಮಾರ್‌, ತಾಲೂಕು ಆರೋಗ್ಯಾಧಿಕಾರಿ ಡಾ.ನಾಗರಾಜ್‌, ಪಪಂ ಮುಖ್ಯಾಧಿಕಾರಿ ಲೋಕ್ಯಾನಾಯ್ಕ್‌, ಮೇಲ್ವೀಚಾರಕಿ ಟಿ.ಶಾಂತಮ್ಮ, ಅನುರಾಧ, ಶಾಂತಲಕ್ಷ್ಮೀ, ಆಯುಷ್ಯ ಇಲಾಖೆಯ ಡಾ.ಶ್ವೇತಾ, ಈಶ್ವರ್‌, ಧರ್ಮಣ್ಣ, ಹಾಲಮ್ಮ, ಪದ್ಮ, ಭರಮಕ್ಕ, ಶೃತಿ, ಲೀಲಾವತಿ ಇತರರು ಇದ್ದರು.


from India & World News in Kannada | VK Polls https://ift.tt/3yGlK8u

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...