ಹೌದು, ಇದು ಆರ್‌ಎಸ್‌ಎಸ್‌ ಶಿಕ್ಷಣ ನೀತಿ ಏನೀಗ?: ಬೊಮ್ಮಾಯಿ ತಿರುಗೇಟು

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯು ಭವಿಷ್ಯದಲ್ಲಿ ಉತ್ತಮ ರಾಷ್ಟ್ರ ನಿರ್ಮಾಣಕ್ಕೆ ಬುನಾದಿಯಾಗಲಿದೆ ಎಂದು ಸಿಎಂ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ವಿಧಾನಮಂಡಲ ಅಧಿವೇಶನದ ವೇಳೆ ಶುಕ್ರವಾರ ಚರ್ಚೆಗೆ ಆಗ್ರಹಿಸಿ ಧರಣಿ ಆರಂಭಿಸಿದ ಕಾಂಗ್ರೆಸ್‌ ಸದಸ್ಯರು ಬಿಜೆಪಿ ಹಾಗೂ ವಿರುದ್ಧ ಘೋಷಣೆ ಕೂಗುತ್ತಿದ್ದರು. ಗದ್ದಲದ ನಡುವೆಯೇ ರಾಷ್ಟ್ರೀಯ ಶಿಕ್ಷಣ ನೀತಿಯ ಅಗತ್ಯತೆಯನ್ನು ಬೊಮ್ಮಾಯಿ ಪ್ರತಿಪಾದಿಸಿದರು. ಹೌದು, ಇದು ಆರ್‌ಎಸ್‌ಎಸ್‌ ಶಿಕ್ಷಣ ನೀತಿ. ರಾಷ್ಟ್ರೀಯ ಸ್ವಯಂ ಸೇವಕ ಶಿಕ್ಷಣ ನೀತಿ ಎಂದೇ ಹೇಳಿ ಪರವಾಗಿಲ್ಲ. ರಾಷ್ಟ್ರೀಯತೆಯನ್ನು ಪ್ರತಿಪಾದಿಸುವ ರಾಷ್ಟ್ರ ನಿರ್ಮಾಣಕ್ಕೆ ಆರ್‌ಎಸ್‌ಎಸ್‌ ಬದ್ಧವಾಗಿದೆ. ನೂತನ ಶಿಕ್ಷಣ ನೀತಿಯು ಭವಿಷ್ಯದಲ್ಲಿ ಉತ್ತಮ ರಾಷ್ಟ್ರ ನಿರ್ಮಾಣಕ್ಕೆ ಬುನಾದಿಯಾಗಲಿದೆ. ಯುವಕರ ಭವಿಷ್ಯಕ್ಕೂ ಒಳ್ಳೆಯದಿದೆ ಎಂದು ಗಟ್ಟಿ ಧ್ವನಿಯಲ್ಲಿ ಸಮರ್ಥಿಸಿದರು. ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಈ ನೀತಿ ಜಾರಿಗೊಳಿಸಿದ್ದೇವೆ. ಇದನ್ನು ನೀವು ಆರ್‌ಎಸ್‌ಎಸ್‌ ಶಿಕ್ಷಣ ನೀತಿ ಎಂದರೂ ನಮಗೆ ಬೇಸರವಿಲ್ಲ. ಆರ್‌ಎಸ್‌ಎಸ್‌ ರಾಷ್ಟ್ರ ಸೇವೆಗೆ ಸಮರ್ಪಿತವಾಗಿರುವ ಸಂಸ್ಥೆ. ಆರ್‌ಎಸ್‌ಎಸ್‌ ಶಿಕ್ಷಣ ನೀತಿ ಎಂದು ಹೇಳಿದರೆ ಅದನ್ನು ಹೆಮ್ಮೆಯಿಂದ ಸ್ವೀಕರಿಸುತ್ತೇವೆ ಎಂದು ನುಡಿದರು. ಹಿಂದಿ ಹೇರಿಕೆಗೆ ಅವಕಾಶವಿಲ್ಲನೂತನ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಹಿಂದಿ ಭಾಷೆ ಬಲವಂತವಾಗಿ ಹೇರಿಕೆಗೆ ಅವಕಾಶವಿಲ್ಲ. ಸ್ಥಳೀಯ ಭಾಷೆಗೆ ಮೊದಲ ಆದ್ಯತೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಪರಿಷತ್‌ಗೆ ಸ್ಪಷ್ಟಪಡಿಸಿದ್ದಾರೆ. ಎನ್‌ಇಪಿ ಕುರಿತು ಬಿ.ಕೆ.ಹರಿಪ್ರಸಾದ್‌ ಮತ್ತಿತರರು ಪ್ರಸ್ತಾಪಕ್ಕೆ ಉತ್ತರಿಸಿದ ಅವರು, 'ಹಿಂದಿ ಹೇರಿಕೆ ಶಂಕೆ ಸರಿಯಲ್ಲ. ಮೊದಲಿನಿಂದಲೂ ಹಿಂದಿ ಹೇರಿಕೆ ಮಾಡುತ್ತಿರುವುದು ಕಾಂಗ್ರೆಸ್‌ ಪಕ್ಷವೇ. ಅದು 1968 ಮತ್ತು 1986ರ ನೀತಿಗಳಲ್ಲಿ ಹಿಂದಿಯನ್ನು ಕಡ್ಡಾಯಗೊಳಿಸಿತ್ತು' ಎಂದು ಆರೋಪಿಸಿದ್ದಾರೆ. 'ಎನ್‌ಇಪಿ ಜಾರಿ ನಂತರ ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆಯನ್ನು ತೆಗೆದುಹಾಕುತ್ತಿಲ್ಲ. ಮೊದಲಿಗಿಂತ ಹೆಚ್ಚು ಬಲವರ್ಧನೆಗೊಳಿಸಲಾಗುವುದು. ಎನ್‌ಇಪಿ ಸಂವಿಧಾನ ವಿರೋಧಿಯಲ್ಲ. ಅಂತಹ ಯಾವುದೇ ಅಂಶವಿಲ್ಲ. ವಿಶೇಷ ಶಿಕ್ಷಣ ವಲಯಗಳನ್ನು ರಚಿಸುವ ಮೂಲಕ ಶೈಕ್ಷಣಿಕವಾಗಿ ಹಿಂದುಳಿದ ರಾಯಚೂರು ಮತ್ತು ಯಾದಗಿರಿ ಮೊದಲಾದ ಆಶೋತ್ತರ ಜಿಲ್ಲೆಗಳಿಗೆ ಒತ್ತು ನೀಡಲಾಗುವುದು' ಎಂದು ಅವರು ಹೇಳಿದ್ದಾರೆ. ಶೇ.100 ರಷ್ಟು ಜಿಇಆರ್‌ ಗುರಿ ' ಮೂಲಕ 2030ರ ವೇಳೆಗೆ ಶೇ 100ರಷ್ಟು ನೋಂದಣಿ ಗುರಿ ಸಾಧಿಸುವ ಉದ್ದೇಶವಿದೆ. ಆ ನಿಟ್ಟಿನಲ್ಲಿ ಎಲ್ಲ ಪ್ರಯತ್ನ ನಡೆದಿದೆ. ಹಿಂದುಳಿದ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಾಲಿ ಇರುವ ಎಲ್ಲ ಯೋಜನೆಗಳನ್ನು ಮುಂದುವರಿಸಲಾಗುವುದು' ಎಂದು ಅವರು ತಿಳಿಸಿದ್ದಾರೆ. ಪರಿಷತ್‌ ಕಲಾಪದಲ್ಲಿಏಳು ವಿಧೇಯಕಗಳಿಗೆ ಅನುಮೋದನೆ ದೊರಕಿತು. ಅವುಗಳೆಂದರೆ, ಕರ್ನಾಟಕ ಸರಕು ಮತ್ತು ಇತರೆ ಸೇವೆಗಳ ತಿದ್ದುಪಡಿ ವಿಧೇಯಕ, ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ತಿದ್ದುಪಡಿ ವಿಧೇಯಕ, ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ ತಿದ್ದುಪಡಿ ವಿಧೇಯಕ, ಕರ್ನಾಟಕ ಪುರಸಭೆಗಳು ಮತ್ತು ಇತರೆ ಕಾನೂನುಗಳ ತಿದ್ದುಪಡಿ ವಿಧೇಯಕ, ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ತಿದ್ದುಪಡಿ ವಿಧೇಯಕ, ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ ಮತ್ತು ಕರ್ನಾಟಕ ಪೊಲೀಸ್‌ ತಿದ್ದುಪಡಿ ವಿಧೇಯಕ. ಈ ಪೈಕಿ ಆನ್‌ಲೈನ್‌ ಲಾಟರಿ, ಜೂಜು ನಿಷೇಧಿಸುವ ಪೊಲೀಸ್‌ ತಿದ್ದುಪಡಿ ವಿಧೇಯಕ ಹೊರತುಧಿಪಡಿಸಿದರೆ ಉಳಿದ ವಿಧೇಯಕಗಳಿಗೆ ಯಾವುದೆ ಚರ್ಚೆ ಇಲ್ಲದೆ ವಿಧಾನಸಭೆಯಲ್ಲಿಅಂಗೀಕೃತವಾದ ರೂಪದಲ್ಲಿಯೇ ಅನುಮೋದನೆ ನೀಡಲಾಯಿತು.


from India & World News in Kannada | VK Polls https://ift.tt/3AJSVd3

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...