ಕ್ಯಾಬ್‌ನಲ್ಲಿ ನಿದ್ದೆಗೆ ಜಾರಿದ ಯುವತಿಯ ಮೇಲೆ ಡ್ರೈವರ್‌ನಿಂದಲೇ ಅತ್ಯಾಚಾರ! ಬೆಂಗಳೂರಲ್ಲಿ ಆತಂಕಕಾರಿ ಘಟನೆ

ಬೆಂಗಳೂರು: ಮೈಸೂರಿನಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಘಟನೆ ಮಾಸುವ ಮುನ್ನವೇ, ಯುವತಿಯೊಬ್ಬಳನ್ನು ಕ್ಯಾಬ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ಚಾಲಕನನ್ನು ಜೆ.ಬಿ. ನಗರ ಪೊಲೀಸರು ಬಂಧಿಸಿದ್ದಾರೆ. ಆವಲಹಳ್ಳಿ ನಿವಾಸಿ ದೇವರಾಜುಲು (25) ಬಂಧಿತ ಆರೋಪಿಯಾಗಿದ್ದು, ಕ್ಯಾಬ್‌ನಲ್ಲಿ ಪ್ರಯಾಣಿಸುವಾಗ ನಿದ್ರೆಗೆ ಜಾರಿದ ಸಮಯದಲ್ಲಿ ಕಾಮುಕ ಚಾಲಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿ ಜಾರ್ಖಂಡ್‌ ಮೂಲದ ಯುವತಿ ದೂರು ನೀಡಿದ್ದಾರೆ. ಯುವತಿ ನೀಡಿದ ದೂರಿನ ಆಧಾರದ ಮೇರೆಗೆ ಆರೋಪಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೂರ್ವ ವಿಭಾಗದ ಡಿಸಿಪಿ ಡಾ. ಎಸ್‌.ಡಿ. ಶರಣಪ್ಪ ತಿಳಿಸಿದ್ದಾರೆ. ಸಂತ್ರಸ್ತ ಯುವತಿ ಕಳೆದ ಮೂರು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದು, ಮುರುಗೇಶ್‌ ಪಾಳ್ಯದ ಅಪಾರ್ಟ್‌ಮೆಂಟ್‌ನಲ್ಲಿ ನೆಲೆಸಿದ್ದರು. ಪ್ರತಿಷ್ಠಿತ ಹೋಟೆಲ್‌ವೊಂದರಲ್ಲಿ ಯುವತಿ ಮ್ಯಾನೇಜರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಯುವತಿ ಮಂಗಳವಾರ ರಾತ್ರಿ ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ಸ್ನೇಹಿತರ ಮನೆಗೆ ಹೋಗಿದ್ದಾರೆ. ತಡ ರಾತ್ರಿವರೆಗೆ ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ್ದರು. ಬಳಿಕ ಒಬ್ಬಳೇ ಮುರುಗೇಶ್‌ ಪಾಳ್ಯದಲ್ಲಿರುವ ತನ್ನ ಅಪಾರ್ಟ್‌ಮೆಂಟ್‌ಗೆ ತೆರಳಲು ಬುಧವಾರ ಬೆಳಗಿನ ಜಾವ 3.30ರ ಸುಮಾರಿಗೆ ಕ್ಯಾಬ್‌ ಬುಕ್‌ ಮಾಡಿದ್ದರು. ಹತ್ತು ನಿಮಿಷಕ್ಕೆ ಸ್ಥಳಕ್ಕೆ ಬಂದಿದ್ದ ಕ್ಯಾಬ್‌ ಚಾಲಕ ಯುವತಿಯನ್ನು ಹತ್ತಿಸಿಕೊಂಡಿದ್ದ. ಮದ್ಯದ ನಶೆಯಲ್ಲಿದ್ದ ಸಂತ್ರಸ್ತ ಯುವತಿ ಕಾರಿನ ಹಿಂಬದಿ ಸೀಟಿನಲ್ಲಿ ನಿದ್ರೆಗೆ ಜಾರಿದ್ದರು. ‘ನನಗೆ ಪ್ರಜ್ಞೆ ಬಂದಾಗ ಚಾಲಕ ನನ್ನ ಮೇಲೆ ಮಲಗಿದ್ದ. ಆತಂಕಗೊಂಡು ಕೂಗುತ್ತಾ ಆತನನ್ನು ತಳ್ಳಿ ಕ್ಯಾಬ್‌ನಿಂದ ಹೊರಗೆ ಓಡಿ ಬಂದೆ’ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ವಿಶೇಷ ತನಿಖಾ ತಂಡ ಆರೋಪಿಯನ್ನು ಆವಲಹಳ್ಳಿಯ ಆತನ ಮನೆಯಲ್ಲಿ ಬಂಧಿಸಿದೆ. ದೇವರಾಜುಲು ಎರಡು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದು, ಕಾರು ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ. ಸಂತ್ರಸ್ತೆ ಹಾಗೂ ಆರೋಪಿಯ ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ವೈದ್ಯರ ವರದಿಗಾಗಿ ಕಾಯಲಾಗುತ್ತಿದೆ. ಯುವತಿ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಅತ್ಯಾಚಾರ ಆರೋಪದಡಿ ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದರು. ನಿನ್ನೆಯಷ್ಟೇ ಸದನದಲ್ಲಿ ಅತ್ಯಾಚಾರ, ಕುರಿತಾದ ಗಂಭೀರ ವಿಚಾರದ ಕುರಿತು ಗಹನವಾದ ಚರ್ಚೆ ನಡೆದಿತ್ತು. ಅದರ ಬೆನ್ನಲ್ಲೇ ಮತ್ತೊಂದು ಅತ್ಯಾಚಾರ ಪ್ರಕರಣ ವರದಿಯಾಗಿದ್ದು, ಅದೂ ಬೆಂಗಳೂರಿನಂತಹ ದೇಶದ ಪ್ರತಿಷ್ಠಿತ ನಗರ, ರಾಜ್ಯ ರಾಜಧಾನಿಯಲ್ಲಿ ನಡೆದಿರೋದು ಒಂಟಿ ಹೆಣ್ಮಕ್ಕಳು ರಾತ್ರಿ ವೇಳೆ ಸಂಚರಿಸಲು ನಮ್ಮ ರಾಜ್ಯದಲ್ಲಿ ಸುರಕ್ಷಿತರೇ?, ಕ್ರಿಮಿನಲ್‌ಗಳ ಸಂಖ್ಯೆ ಹೆಚ್ಚಾಗುತ್ತಿದೆಯೇನೋ ಎನ್ನುವ ಆತಂಕ ಜನರಲ್ಲಿ ಪ್ರಶ್ನೆ ಮಾಡಿದೆ. ಈ ಮಧ್ಯೆ ಅತ್ಯಾಚಾರ, ಮಹಿಳಾ ದೌರ್ಜನ್ಯ ನಡೆಸುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡಬೇಕು, ಅದು ಇಂತಹ ದುಷ್ಕೃತ್ಯ ನಡೆಸುವ ದುಷ್ಕರ್ಮಿಗಳಿಗೆ ಪಾಠವಾಗಬೇಕು ಎಂದು ಅನೇಕರು ಒತ್ತಾಯಿಸಿದ್ದರೆ.


from India & World News in Kannada | VK Polls https://ift.tt/3hWPNmK

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...