ಬೆಂಗಳೂರು: ಸದನದ ಬಾವಿಗಿಳಿದ ಬಿಜೆಪಿ ಶಾಸಕರು ಆಡಳಿತ ಪಕ್ಷದ ವಿರುದ್ಧವೇ ಪ್ರತಿಭಟನೆ ಮಾಡಿ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದ ಘಟನೆ ವಿಧಾನಮಂಡಲ ಕಲಾಪದಲ್ಲಿ ನಡೆದಿದೆ. ಪಂಚಮಸಾಲಿ ಸಮುದಾಯದ ಮೀಸಲಾತಿ ಬಗ್ಗೆ ಸರ್ಕಾರದ ನಿಲುವು ಘೋಷಣೆ ವಿಚಾರವಾಗಿ ಆಡಳಿತ ಪಕ್ಷದ ಶಾಸಕರಾದ ಹಾಗೂ ಅರವಿಂದ ಬೆಲ್ಲದ ಧರಣಿ ನಡೆಸಿದ ಘಟನೆ ನಡೆಯಿತು. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಕಾನೂನು ಸಚಿವರು ವಿಧಾನ ಪರಿಷತ್ನಲ್ಲಿರುವ ಕಾರಣ ಅವರು ಸದನಕ್ಕೆ ಬಂದ ಬಳಿಕ ಉತ್ತರ ಕೊಡಿಸುವುದಾಗಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೀಡಿದ ಉತ್ತರಕ್ಕೆ ಸಮಾಧಾನಗೊಳ್ಳದ ಬಸನಗೌಡ ಪಾಟೀಲ್ ಯತ್ನಾಳ್ ಸದನದ ಬಾವಿಗಿಳಿದು ಧರಣಿ ನಡೆಸಿದರು. ಯತ್ನಾಳ್ ಪ್ರತಿಭಟನೆಗೆ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಸಾಥ್ ನೀಡಿದರು. ಇವರ ಜೊತೆ ಎಸ್ ಟಿ ಮೀಸಲಾತಿ ವಿಚಾರವಾಗಿ ಬಿಜೆಪಿ ಶಾಸಕರ ಜೊತೆ ಕಾಂಗ್ರೆಸ್ ಶಾಸಕ ಗಣೇಶ್ ಸದನದ ಬಾವಿಗಿಳಿದು ಧರಣಿಗೆ ಮುಂದಾದರು. ಈ ವೇಳೆ ಮಧ್ಯಪ್ರವೇಶ ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಿಸಿ ಪಾಟೀಲ್ ಉತ್ತರ ಕೊಡ್ತೀನಿ ಎಂದು ಹೇಳಿದ್ದಾರೆ. ಒಂದೋ ಅವರ ಉತ್ತರ ಕೇಳ್ಬೇಕು. ಈಗ ಸಿಎಂ ಇಲ್ಲ, ಅವರು ಬರುವ ತನಕ ಕಾಯಬೇಕು. ಸದನದ ಸಮಯ ಯಾಕೆ ಹಾಳು ಮಾಡುತ್ತೀರಿ? ಈಗ ಸುಮ್ನೆ ನಿಮ್ಮ ಸ್ಥಳದಲ್ಲಿ ಹೋಗಿ ಕೂತ್ಕೊಳ್ಳಿ ಎಂದು ಹೇಳಿದರು. ವಿಪಕ್ಷ ನಾಯಕ ಹಾಗೂ ಸ್ಪೀಕರ್ ಕಾಗೇರಿ ಸೂಚನೆಯ ಬಳಿಕ ಶಾಸಕರು ಧರಣಿ ವಾಪಸ್ ಪಡೆದು ತಮ್ಮ ಸ್ಥಳಕ್ಕೆ ತೆರಳಿದರು. ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಶಾಸಕ ರಾಜೂಗೌಡ ಗರಂಇದೇ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಶಾಸಕ ರಾಜೂಗೌಡ ಕೂಡಾ ಗರಂ ಆದ ಘಟನೆ ನಡೆಯಿತು. ‘ನಮಗೆ ಏಕೆ ಇಷ್ಟೊಂದು ಸತಾಯಿಸ್ತಾ ಇದೀರಿ? ರಾಮನ ಹೆಸರು ಹೇಳಿ ಅಧಿಕಾರಕ್ಕೆ ಬರೋದು ಗೊತ್ತಿದೆ. ರಾಮನನ್ನ ಬೆಳಕಿಗೆ ತಂದ ವಾಲ್ಮೀಕಿ ಜನಾಂಗದ ಬಗ್ಗೆ ಏಕೆ ಇಷ್ಟು ನಿರ್ಲಕ್ಷ್ಯ ಎಂದು ತಮ್ಮದೇ ಸರ್ಕಾರವನ್ನು ಪ್ರಶ್ನಿಸಿದರು. 7.5%ರಷ್ಟು ಮೀಸಲಾತಿ ಕೊಡಬೇಕು, ನ್ಯಾಯಮೂರ್ತಿ ನಾಗಮೋಹನ್ ದಾಸ್ ಶಿಫಾರಸ್ಸಿನಂತೆ ಅನುಷ್ಠಾನ ಮಾಡಬೇಕು. ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದಂತೆ ಮೀಸಲಾತಿ ಬಗ್ಗೆ ಸರ್ಕಾರ ನಿರ್ಧಾರ ಮಾಡಬೇಕು ಅಂತಾ ಆಗ್ರಹಿಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಮೀಸಲಾತಿ ವಿಚಾರದ ಬಗ್ಗೆ ನಾಳೆ ಮುಖ್ಯಮಂತ್ರಿ ಉತ್ತರ ಕೊಡ್ತಾರೆ ಎಂದು ಬಿಜೆಪಿ ಶಾಸಕ ರಾಜೂಗೌಡ ಅವರನ್ನು ಸಮಾಧಾನ ಪಡಿಸಿದರು.
from India & World News in Kannada | VK Polls https://ift.tt/3i1MGKe