ಎನ್‌ಇಪಿ ಅಂದರೆ 'ನಾಗ್ಪುರ ಶಿಕ್ಷಣ ನೀತಿ'; ಚರ್ಚಿಸದೆ ಜಾರಿಗೊಳಿಸಲು ಬಿಡುವುದಿಲ್ಲ ಎಂದ ಡಿಕೆ ಶಿವಕುಮಾರ್‌

ಬೆಂಗಳೂರು: ತರಾತುರಿಯಲ್ಲಿ ಜಾರಿಗೆ ತರಲು ಮುಂದಾಗಿರುವ ಎಂಬುದು ' ಅಲ್ಲ, ಅದು ನಾಗ್ಪುರ ಶಿಕ್ಷಣ ನೀತಿ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಕಟುವಾಗಿ ಟೀಕಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಜಿಲ್ಲಾವಾರು ಮುಖಂಡರ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿ ವಿಚಾರವಾಗಿ ಪಕ್ಷದ ನಿಲುವು ಹಾಗೂ ಪಕ್ಷದ ಸಂಘಟನೆ ಬಗ್ಗೆ ಮಾಹಿತಿ ನೀಡಿದರು. "ಸಂಸತ್ತಿನಲ್ಲಿ ಚರ್ಚೆ ಆಗದೇ ಇರುವ ನೀತಿಯನ್ನು ರಾಜ್ಯದಲ್ಲಿ ತರಲು ಹೊರಟಿರುವುದರ ವಿರುದ್ಧ ಕಾಂಗ್ರೆಸ್‌ ಪಕ್ಷ ಹೋರಾಟ ಮಾಡಲಿದೆ. ನೀವು ಏನೇ ತಿಪ್ಪರಲಾಗ ಹಾಕಿದರೂ ಅಧಿವೇಶನದಲ್ಲಿ ಚರ್ಚೆಯಾಗದೇ ಇದನ್ನು ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ," ಎಂದು ಖಡಕ್‌ ಆಗಿ ಹೇಳಿದರು. ''ಶಿಕ್ಷಣ ರಾಜ್ಯಗಳಿಗೆ ಸಂಬಂಧಿಸಿದ ವಿಚಾರ. ರಾಷ್ಟ್ರ ಮಟ್ಟದಲ್ಲಿ ನೀತಿ ನಿರೂಪಿಸಬೇಕು ನಿಜ. ಆದರೆ ಅದರ ಬಗ್ಗೆ ಎಲ್ಲ ಕಡೆಗಳಲ್ಲೂ ವ್ಯಾಪಕ ಚರ್ಚೆ ಆಗಬೇಕಲ್ಲವೇ? ರಾಷ್ಟ್ರಾದ್ಯಂತ, ಶಾಸನಸಭೆಗಳಲ್ಲಿ ಚರ್ಚೆಯನ್ನೇ ಮಾಡಿಲ್ಲ. ಸದನ ಸಮಿತಿ ರಚಿಸಿ, ರಾಜ್ಯದ ಉದ್ದಗಲಕ್ಕೂ ಜನರ ಅಭಿಪ್ರಾಯ ಪಡೆಯುವವರೆಗೂ ರಾಜ್ಯದಲ್ಲಿ ಇದರ ಜಾರಿಗೆ ನಾವು ಅವಕಾಶ ನೀಡುವುದಿಲ್ಲ,'' ಎಂದರು. "ಈ ನೀತಿಯಲ್ಲಿತ್ರಿಭಾಷಾ ಸೂತ್ರ ಪರಿಚಯಿಸುವ ಮೂಲಕ ಹಿಂಬಾಗಿಲಿನಿಂದ ಹಿಂದಿ ಭಾಷೆ ಹೇರಿಕೆಗೆ ಪ್ರಯತ್ನಿಸಲಾಗುತ್ತಿದೆ. ಇದೇ ನೀತಿಯನ್ನು ಮಧ್ಯಪ್ರದೇಶ, ಉತ್ತರ ಪ್ರದೇಶ, ಗುಜರಾತ್‌ನಲ್ಲಿ ಯಾಕೆ ಜಾರಿಗೆ ತರಲು ಪ್ರಯತ್ನಿಸುತ್ತಿಲ್ಲ. ಕೇರಳ ಹಾಗೂ ತಮಿಳುನಾಡಿನಲ್ಲಿ ಇದರ ವಿಚಾರದಲ್ಲಿ ಮಾತು ಕೂಡ ಆಡುವ ಸ್ಥಿತಿ ಇಲ್ಲ. ಕರ್ನಾಟಕದಲ್ಲೇಕೆ,'' ಎಂದು ಪ್ರಶ್ನಿಸಿದರು. "ಶಿಕ್ಷಣ ಸಚಿವರಿಗೆ ಸಾಮಾನ್ಯ ಪ್ರಜ್ಞೆಯೇ ಇಲ್ಲ ಎಂದು ಕಾಣುತ್ತದೆ. ಜಂಜಾಟದಲ್ಲಿರುವ ಸಿಎಂ ಗಮನ ಹರಿಸಿಲ್ಲ. ಎನ್‌ಇಪಿ ಜಾರಿಗೆ ತರಲು ಸರಕಾರ ಏನೇನು ಕ್ರಮಗಳನ್ನು ಕೈಗೊಂಡಿದೆ ಎಂಬುದನ್ನು ತಿಳಿಸಲಿ. ಈ ಬಗ್ಗೆ ಇರುವ ಆತಂಕ ಬಗೆಹರಿಯುವ ತನಕ ನೀತಿ ಜಾರಿಗೊಳಿಸುವುದನ್ನು ನಿಲ್ಲಿಸಬೇಕು. ಈ ಬಗ್ಗೆ ಸದನದಲ್ಲಿ ಧ್ವನಿ ಎತ್ತಲಾಗುವುದು,'' ಎಂದು ಎಚ್ಚರಿಕೆ ನೀಡಿದರು. ಪಕ್ಷ ಸಂಘಟನೆಗೆ ಸಭೆ ಇಂದು ಮತ್ತು ನಾಳೆ ಕಾಂಗ್ರೆಸ್‌ ಪಕ್ಷದ ಜಿಲ್ಲಾವಾರು ಅಧ್ಯಕ್ಷರುಗಳು, ಶಾಸಕರು, ಮಾಜಿ ಶಾಸಕರು, ಪರಾಜಿತ ಅಭ್ಯರ್ಥಿಗಳನ್ನು ಕರೆದು ಪಕ್ಷದ ಸಂಘಟನೆ, ಮುಂಬರುವ ಜಿಲ್ಲಾ ಹಾಗೂ ತಾಪಂ, ವಿಧಾನ ಪರಿಷತ್‌ ಚುನಾವಣೆ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಮುಂದೆ ಯಾವ ರೀತಿ ಸಜ್ಜಾಗಬೇಕು ಎಂಬುದರ ಬಗ್ಗೆ ಅವರ ಅಭಿಪ್ರಾಯ ಪಡೆದು, ಮಾರ್ಗದರ್ಶನ ನೀಡಲಾಗುತ್ತಿದೆ ಎಂದರು. ಅಕ್ಟೋಬರ್‌ ತಿಂಗಳಲ್ಲಿ ದಿನಕ್ಕೆ 2 ಗ್ರಾ.ಪಂ.ನಲ್ಲಿ ಪಕ್ಷದ ಸಭೆ ನಡೆಸಬೇಕು. ಅಲ್ಲಿ ಪ್ರತಿಭಟನೆ ಅಥವಾ ಕಾರ್ಯಕರ್ತರ ಸಭೆ ಮಾಡಬಹುದು. ಕಡ್ಡಾಯವಾಗಿ ತಿಂಗಳಲ್ಲಿ ನಿತ್ಯ ಗ್ರಾ.ಪಂ. ಮಟ್ಟದಲ್ಲಿ ಸಭೆಗಳನ್ನು ಮಾಡಬೇಕು. ಈ ಸಭೆಯಲ್ಲಿ ಎಲ್ಲ ನಾಯಕರು ಪಾಲ್ಗೊಳ್ಳಬೇಕು ಎಂದು ಸೂಚನೆ ನೀಡಿದ್ದೇವೆ ಎಂದರು. ಕರ್ನಾಟಕದ ಉಸ್ತುವಾರಿ ವಹಿಸಿರುವ ರಣದೀಪ್‌ ಸಿಂಗ್‌ ಸುರ್ಜೆವಾಲ ಅವರು ವಿಭಾಗೀಯ ಮಟ್ಟದ ಸಭೆ ಮಾಡಿದ್ದರು. ಅಲ್ಲಿ ಕೆಲವು ಸಲಹೆಗಳನ್ನು ನೀಡಿದ್ದಾರೆ ಎಂದರು. ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ: ''ವಿಧಾನ ಪರಿಷತ್‌ ಸೇರಿದಂತೆ ಮುಂಬರುವ ಮುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನಿಸಿದ್ದು, 10 ದಿನಗಳ ಕಾಲಾವಕಾಶ ನೀಡಿದ್ದೇವೆ. ಅಲ್ಲಿನ ನಾಯಕರ ಜತೆ ಚರ್ಚಿಸಿ ವಾಸ್ತವಾಂಶ ಹಾಗೂ ಅಭಿಪ್ರಾಯ ಪಡೆಯುತ್ತಿದ್ದೇನೆ. ಈ ತಿಂಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತೇವೆ,'' ಎಂದು ಡಿ.ಕೆ. ಶಿವಕುಮಾರ್‌ ನುಡಿದರು.


from India & World News in Kannada | VK Polls https://ift.tt/3BMPr9X

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...