ಬೆಂಗಳೂರು: ಜೆಡಿಎಸ್ಗೆ ಸಡ್ಡು ಹೊಡೆಯಲು ಮುಖಂಡರು ಹೊಸ ತಂತ್ರ ರೂಪಿಸುತ್ತಿದ್ದಾರೆ. ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಈಗಾಲೇ ತಯಾರಿ ಆರಂಭಿಸಿದ್ದು, ಮತ ಸೆಳೆಯಲು ಯೋಜನೆ ರೂಪಿಸುತ್ತಿದೆ. ಈ ನಿಟ್ಟಿನಲ್ಲಿ ಒಕ್ಕಲಿಗ ಸಮುದಾಯದ ನಾಯಕರ ಸಭೆಯನ್ನು ನಡೆಸಲಾಗಿದೆ. ಬುಧವಾರ ರಾತ್ರಿ ಬೆಂಗಳೂರಿನಲ್ಲಿ ಸಭೆ ನಡೆದಿದ್ದು, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸೂಚನೆಯಂತೆ ಕಾಂಗ್ರೆಸ್ ಹಿರಿಯ ಶಾಸಕ ಕೃಷ್ಣ ಬೈರೇಗೌಡ, ಸಂಸದ , ಚೆಲುವರಾಯಸ್ವಾಮಿ ನೇತೃತ್ವದಲ್ಲಿ ಸಭೆ ನಡೆದಿದೆ. ಶಾಸಕ ಡಾ.ರಂಗನಾಥ್, ಮಾಜಿ ಸಚಿವ ಕೃಷ್ಣಪ್ಪ, ಮಾಜಿ ಸಂಸದ ಮುದ್ದ ಹನುಮೇಗೌಡ, ನರೇಂದ್ರ, ಶರತ್ ಬಚ್ಚೇಗೌಡ, ಮಾಜಿ ಸಂಸದ ನಾರಾಯಣಸ್ವಾಮಿ, ಮಾಜಿ ಶಾಸಕ ಮಾಗಡಿ ಬಾಲಕೃಷ್ಣ ಸೇರಿ ಹಲವರು ಭಾಗಿಯಾಗಿದ್ದಾರೆ. ಜೆಡಿಎಸ್ನ ಒಕ್ಕಲಿಗ ಮತ ಬ್ಯಾಂಕ್ ಒಡೆಯಲು ಕಾಂಗ್ರೆಸ್ ಯೋಜನೆ ರೂಪಿಸಿದ್ದು ಈ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ. ಇಲ್ಲಿಯವರೆಗೆ ಒಕ್ಕಲಿಗ ಸಮುದಾಯದ ಮತಗಳು ಪಾಲಾಗಿವೆ. ಬಹುತೇಕ ಸಮುದಾಯ ಜೆಡಿಎಸ್ ಪರವಾಗಿ ನಿಂತಿದೆ. ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಒಕ್ಕಲಿಗ ಸಮುದಾಯದ ಮುಖಂಡರು ಇದ್ದರೂ ಸಮುದಾಯದ ಮತಗಳನ್ನು ಸೆಳೆಯಲು ಅವರಿಗೆ ಸಾಧ್ಯವಾಗಿಲ್ಲ. ಸಮುದಾಯದ ಜನರು ಆ ನಾಯಕರನ್ನು ನಂಬುತ್ತಿಲ್ಲ. ಜೆಡಿಎಸ್ ಕಡೆಗೆ ಒಕ್ಕಲಿಗರ ಒಲವಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಹಳೆ ಮೈಸೂರು ಭಾಗಗಳಲ್ಲಿ ಪ್ರಾಬಲ್ಯ ಸಾಧಿಸಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಒಕ್ಕಲಿಗ ಸಮುದಾಯದ ಒಲವನ್ನು ಬದಲಾಯಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಚರ್ಚೆ ನಡೆದಿದೆ. ಈ ಮೂಲಕ ಕುಮಾರಸ್ವಾಮಿಗೆ ಟಾಂಗ್ ಕೊಡಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ದಿನಗಳ ಹಿಂದೆ ಸಂಸದ ಡಿಕೆ ಸುರೇಶ್ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಧ್ವನಿ ಎತ್ತಿದ್ದರು. ರಾಮನಗರದಲ್ಲಿ ಶಾಸಕರನ್ನು ಕಡೆಗಣಿಸಿ ಸಭೆ ನಡೆಸಿದ್ದಾರೆಂದು ಸದನದಲ್ಲೇ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಹೆಚ್ಡಿಕೆಗೆ ತಿರುಗೇಟು ನೀಡಲು ಪ್ಲಾನ್ ರೂಪಿಸುತ್ತಿದ್ದು, ತಮ್ಮ ಸಹೋದರನನ್ನೇ ಮುಂದೆ ಬಿಟ್ಟು ತಂತ್ರ ಹೂಡಲು ಡಿಕೆಶಿ ಮುಂದಾದಾಗಿದ್ದಾರೆ. ಇದಕ್ಕೆ ಸಿದ್ದರಾಮಯ್ಯನವರದ್ದೂ ಸಂಪೂರ್ಣ ಬೆಂಬಲ ಇದೆ ಎಂದು ತಿಳಿದುಬಂದಿದೆ.
from India & World News in Kannada | VK Polls https://ift.tt/3zwwxT3