IPL 2021: ಚೆನ್ನೈ ವಿರುದ್ದದ ಪಂದ್ಯಕ್ಕೆ ಆರ್‌ಸಿಬಿಗೆ ಈ 3 ಬದಲಾವಣೆ ಅನಿವಾರ್ಯ!

ಹೊಸದಿಲ್ಲಿ: ಹದಿನಾಲ್ಕನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಮೊದಲ ಅವಧಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ಧ ತಂಡ ಆಡಿದ್ದ 7 ಪಂದ್ಯಗಳಲ್ಲಿ ಐದರಲ್ಲಿ ಗೆದ್ದು ಇನ್ನುಳಿದ ಎರಡು ಹಣಾಹಣಿಗಳಲ್ಲಿ ಸೋಲು ಅನುಭವಿಸಿತ್ತು. ಆ ಮೂಲಕ 10 ಅಂಕಗಳೊಂದಿಗೆ ಪಾಯಿಂಟ್ಸ್‌ ಟೇಬಲ್‌ನಲ್ಲಿ ಮೂರನೇ ಸ್ಥಾನ ಪಡೆದಿತ್ತು. ಆದರೆ, ಸೆ.19 ರಿಂದ ಶುರುವಾಗಿರುವ 2021ರ ಐಪಿಎಲ್‌ ಟೂರ್ನಿಯ ಯುಎಇ ಚರಣದಲ್ಲಿ ತನ್ನ ಮೊದಲನೇ ಪಂದ್ಯದಲ್ಲಿ ಆರ್‌ಸಿಬಿ, ಕೋಲ್ಕತಾ ನೈಟ್‌ ರೈಡರ್ಸ್ ವಿರುದ್ಧ 9 ವಿಕೆಟ್‌ಗಳ ಹೀನಾಯ ಸೋಲು ಅನುಭವಿಸಿತ್ತು. ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ್ದ ಬೆಂಗಳೂರು ತನ್ನ ಪಾಲಿನ 20 ಓವರ್‌ಗಳಿಗೆ ಕೇವಲ 92 ರನ್‌ಗಳಿಗೆ ಆಲೌಟ್‌ ಆಗಿತ್ತು. ನಂತರ ಗುರಿ ಹಿಂಬಾಲಿಸಿದ್ದ ಕೋಲ್ಕತಾ ನೈಟ್‌ ರೈಡರ್ಸ್ ತಂಡ ಕೇವಲ 10 ಓವರ್‌ಗಳಿಗೆ ಗುರಿ ತಲುಪಿ ಪ್ಲೇಆಫ್‌ ಹಾದಿಯನ್ನು ಜೀವಂತವಾಗಿರಿಸಿಕೊಂಡಿತ್ತು. ಆದರೆ, ಆರ್‌ಸಿಬಿ ಗೆಲುವಿನ ಲಯಕ್ಕೆ ಮರಳಿ ಚೊಚ್ಚಲ ಐಪಿಎಲ್‌ ಟ್ರೋಫಿ ಮುಡಿಗೇರಿಸಿಕೊಳ್ಳಬೇಕೆಂದರೆ ಸಿಎಸ್‌ಕೆ ವಿರುದ್ಧದ ಮುಂದಿನ ಹಣಾಹಣಿಗೆ ತಂಡದಲ್ಲಿ ಕೆಲ ಮಹತ್ವದ ಬದಲಾವಣೆಗಳನ್ನು ಮಾಡಿಕೊಳ್ಳಬೇಕಾದ ಅಗತ್ಯವಿದೆ. 1. ಪವರ್‌ಪ್ಲೇನಲ್ಲಿ ವಾನಿಂದು ಹಸರಂಗಗೆ ಬೌಲಿಂಗ್‌ ನೀಡಬೇಕು ಎಲ್ಲರಿಗೂ ಗೊತ್ತಿರುವ ಹಾಗೆ ಆಡಂ ಝಾಂಪ ಅವರ ಸ್ಥಾನಕ್ಕೆ ಯುಇಎ ಚರಣದ ಸಲುವಾಗಿ ಶ್ರೀಲಂಕಾ ತಂಡದ ವಾನಿಂದು ಹಸರಂಗ ಅವರನ್ನು ಆರ್‌ಸಿಬಿ ಕರೆಸಿಕೊಂಡಿದೆ. ಇಲ್ಲಿನ ಪರಿಸ್ಥಿತಿಗಳು ಸ್ಪಿನ್‌ ಬೌಲಿಂಗ್‌ ವರ್ಕ್‌ಔಟ್‌ ಆಗಲಿದ್ದು, ಚೆನ್ನೈ ಸೂಪರ್‌ ಕಿಂಗ್ಸ್ ವಿರುದ್ಧ ಮುಂದಿನ ಹಣಾಹಣಿಗೆ ಹಸರಂಗ ಕೀ ಸ್ಪಿನ್ನರ್‌ ಆಗುವ ಸಾಧ್ಯತೆ ಇದೆ. ಆರ್‌ಸಿಬಿ ಮುಂದಿನ ಪಂದ್ಯ ಆಡುವ ಶಾರ್ಜಾ ವಿಕೆಟ್‌ ಸ್ಪಿನ್ನರ್‌ಗಳ ಸ್ನೇಹಿಯಾಗಿದೆ. ಹಾಗಾಗಿ, ವಾನಿಂದು ಹಸರಂಗ ಅವರಿಗೆ ಕೊಹ್ಲಿ ಪವರ್‌ಪ್ಲೇನಲ್ಲಿ ಬೌಲಿಂಗ್‌ ನೀಡಿದ್ದೇ ಆದಲ್ಲಿ ಆರ್‌ಸಿಬಿ ಮೇಲುಗೈ ಸಾಧಿಸಬಹುದು. ಐಪಿಎಲ್‌ಗೂ ಮುನ್ನ ಹಸರಂಗ ಭಾರತದ ವಿರುದ್ಧ ಸೀಮಿತ ಓವರ್‌ಗಳ ಸರಣಿಯಲ್ಲಿ ಅತ್ಯುತ್ತಮ ಬೌಲ್‌ ಮಾಡಿದ್ದರು. ಇದೀಗ ಅದೇ ಪ್ರದರ್ಶನವನ್ನು ಇಲ್ಲಿ ತೋರಿದ್ದೇ ಆದಲ್ಲಿ ಖಂಡಿತಾ ಆರ್‌ಸಿಬಿ ಅದೃಷ್ಟ ಬದಲಾಗುವುದರಲ್ಲಿ ಸಂಶಯವೇ ಇಲ್ಲ. ಹಾಗಾಗಿ, ಕೊಹ್ಲಿ ಮುಂದಿನ ಪಂದ್ಯಗಳಲ್ಲಿ ಹಸರಂಗ ಅವರನ್ನು ಚೆನ್ನಾಗಿ ಬಳಿಸಿಕೊಳ್ಳಬೇಕು. 2. ಡಿವಿಲಿಯರ್ಸ್‌-ಮ್ಯಾಕ್ಸ್‌ವೆಲ್‌ ಬ್ಯಾಟಿಂಗ್‌ ಕ್ರಮಾಂಕ ಬದಲಿಸುವುದು ಅಗತ್ಯ ಕಳೆದ ಹಲವು ವರ್ಷಗಳಿಂದ ಎಬಿ ಡಿ ವಿಲಿಯರ್ಸ್ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕೀ ಬ್ಯಾಟ್ಸ್‌ಮನ್‌ ಆಗಿದ್ದಾರೆ. ಹಾಗಾಗಿ, ಅವರಿಗೆ ಪಂದ್ಯದಲ್ಲಿ ಹೆಚ್ಚಿನ ಎಸೆತಗಳನ್ನು ಆಡಲು ಅವಕಾಶ ಮಾಡಿಕೊಡಬೇಕು. ಆಗ ಎಬಿಡಿಗೆ ದೊಡ್ಡ ಮೊತ್ತ ಕಲೆ ಹಾಕಲು ಹೆಚ್ಚಿನ ಸಮಯ ಸಿಕ್ಕಂತಾಗುತ್ತದೆ. ಆದರೆ, ಕೋಲ್ಕತಾ ನೈಟ್‌ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಎಬಿ ಡಿವಿಲಿಯರ್ಸ್ ಶೂನ್ಯಕ್ಕೆ ವಿಕೆಟ್‌ ಒಪ್ಪಿಸಿದ್ದರು. ಈ ಪಂದ್ಯದಲ್ಲಿ ಗ್ಲೆನ್‌ ಮ್ಯಾಕ್ಸ್‌ವೆಲ್‌ ನಾಲ್ಕನೇ ಕ್ರಮಾಂಕದಲ್ಲಿ ಆಡಿದ್ದರು. ನಂತರ ಎಬಿಡಿ ಆಡಿದ್ದರು. ತಂಡದ ಗೆಲುವಿನ ಹಿತದೃಷ್ಠಿಯಲ್ಲಿ ವಿರುದ್ಧದ ಪಂದ್ಯದಲ್ಲಿ 360 ಡಿಗ್ರಿ ಖ್ಯಾತಿಯ ಬ್ಯಾಟ್ಸ್‌ಮನ್‌ಗೆ ನಾಲ್ಕನೇ ಕ್ರಮಾಂಕದಲ್ಲಿ ಅವಕಾಶ ನೀಡಬೇಕು ಹಾಗೂ ಕ್ರೀಸ್‌ ಬಳಿ ಗಟ್ಟಿಯಾಗಿ ನೆಲೆಯೂರಲು ಹೆಚ್ಚಿನ ಸಮಯ ನೀಡಬೇಕಾದ ಅಗತ್ಯವಿದೆ. ಕ್ರೀಸ್‌ನಲ್ಲಿ ಡಿವಿಲಿಯರ್ಸ್ ಹೆಚ್ಚಿನ ಸಮಯ ಕಳೆದಿದ್ದೇ ಆದಲ್ಲಿ ಇದು ತಂಡಕ್ಕೆ ಖಂಡಿತಾ ಲಾಭದಾಯಕವಾಗಲಿದೆ. 3. ಗ್ಲೆನ್‌ ಮ್ಯಾಕ್ಸ್‌ವೆಲ್‌ಗೆ ಬೌಲಿಂಗ್ ನೀಡಬೇಕು ಸ್ಪೋಟಕ ಬ್ಯಾಟಿಂಗ್‌ ಜೊತೆಗೆ ಸ್ಪಿನ್‌ ಬೌಲಿಂಗ್‌ ಮಾಡುವ ಗ್ಲೆನ್‌ ಮ್ಯಾಕ್ಸ್‌ವೆಲ್‌ ಅವರು ಯುಎಇ ಪರಿಸ್ಥಿತಿಗಳಿಗೆ ತಂಡಕ್ಕೆ ನೆರವಾಗಲಿದ್ದಾರೆ. ಹಾಗಾಗಿ, ಇದನ್ನು ನಾಯಕ ಸದುಪಯೋಗಪಡಿಸಿಕೊಳ್ಳುವ ಅಗತ್ಯವಿದೆ. ಅಂದಹಾಗೆ ಕೆಕೆಆರ್‌ ವಿರುದ್ಧದ ಕಳೆದ ಪಂದ್ಯದಲ್ಲಿ ಮ್ಯಾಕ್ಸ್‌ವೆಲ್‌ ಬೌಲ್‌ ಮಾಡಿರಲಿಲ್ಲ. ಏಕೆಂದರೆ ಹೆಚ್ಚುವರಿ ಸ್ಪಿನ್ನರ್‌ ಬೌಲ್‌ ಮಾಡುವಷ್ಟು ಮೊತ್ತವನ್ನು ಆರ್‌ಸಿಬಿ ಕಳೆದ ಪಂದ್ಯದಲ್ಲಿ ದಾಖಲಿಸಿರಲಿಲ್ಲ. ಮುಂಬೈ ಇಂಡಿಯನ್ಸ್ ಬ್ಯಾಟಿಂಗ್‌ನಲ್ಲಿ ತೊಂದರೆಗೆ ಒಳಗಾಗಿದ್ದ ಸುರೇಶ್ ರೈನಾ ವಿರುದ್ಧ ಗ್ಲೆನ್‌ ಮ್ಯಾಕ್ಸ್‌ವೆಲ್‌ ಅವರನ್ನು ಆರ್‌ಸಿಬಿ ಬಳಸಿಕೊಳ್ಳಬಹುದು. ಇದರ ಜೊತೆಗೆ ಸ್ಪಿನ್‌ ಆಲ್‌ರೌಂಡರ್‌ ಮೊಯೀನ್‌ ಅಲಿ ಅವರ ವಿರುದ್ಧವೂ ಮ್ಯಾಕ್ಸ್‌ವೆಲ್‌ ಮೇಲುಗೈ ಸಾಧಿಸುವ ಸಾಧ್ಯತೆ ಇದೆ. ಹಾಗಾಗಿ, ನಾಯಕ ವಿರಾಟ್‌ ಕೊಹ್ಲಿ, ಗ್ಲೆನ್‌ ಮ್ಯಾಕ್ಸ್‌ವೆಲ್‌ ಅವರನ್ನು ಮುಂದಿನ ಪಂದ್ಯದಲ್ಲಿ ಬುದ್ದಿವಂತಿಕೆಯಿಂದ ಬಳಸಿಕೊಳ್ಳುವ ಅಗತ್ಯವಿದೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3Av4kNP

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...