'2011ರ ಬಳಿಕ ಇದೇ ಮೊದಲು' ಆರ್‌ಸಿಬಿ ಪ್ಲೇ ಆಫ್ಸ್‌ಗೇರಿದ ಬಗ್ಗೆ ಕೊಹ್ಲಿ ಹೇಳಿದ್ದಿದು!

ಶಾರ್ಜಾ: ಪಂಜಾಬ್‌ ಕಿಂಗ್ಸ್ ವಿರುದ್ಧ 6 ರನ್‌ ರೋಚಕ ಗೆಲುವು ಸಾಧಿಸಿ ಹದಿನಾಲ್ಕನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್ಸ್‌ಗೆ ಅರ್ಹತೆ ಪಡೆದ ಬಗ್ಗೆ ನಾಯಕ ಸಂತಸ ವ್ಯಕ್ತಪಡಿಸಿದ್ದಾರೆ. ಭಾನುವಾರ ಇಲ್ಲಿನ ಶಾರ್ಜಾ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದಿದ್ದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ್ದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಪಾಲಿನ 20 ಓವರ್‌ಗಳಿಗೆ 7 ವಿಕೆಟ್‌ ನಷ್ಟಕ್ಕೆ 164 ರನ್‌ ಗಳಿಸಿತ್ತು. ಆ ಮೂಲಕ ಪಂಜಾಬ್‌ ಕಿಂಗ್ಸ್‌ಗೆ 165 ರನ್ ಕಠಿಣ ಗುರಿ ನೀಡಿತ್ತು. ನಂತರ ಗುರಿ ಹಿಂಬಾಲಿಸಿದ್ದ ಪಂಜಾಬ್‌ ಕಿಂಗ್ಸ್ ತಂಡಕ್ಕೆ ಓಪನಿಂಗ್‌ ಬ್ಯಾಟ್ಸ್‌ಮನ್‌ಗಳಾದ ಕೆ.ಎಲ್‌ ರಾಹುಲ್‌ ಹಾಗೂ ಮಯಾಂಕ್‌ ಅಗರ್ವಾಲ್‌ ಮೊದಲನೇ ವಿಕೆಟ್‌ಗೆ 91 ರನ್‌ ಗಳಿಸುವ ಮೂಲಕ ಭರ್ಜರಿ ಆರಂಭ ತಂದುಕೊಟ್ಟಿದ್ದರು. ಆದರೆ, (29ಕ್ಕೆ 3) ಅವರ ಸ್ಪಿನ್‌ ಮೋಡಿಗೆ ನಲುಗಿದ ಪಂಜಾಬ್‌ 20 ಓವರ್‌ಗಳಿಗೆ 6 ವಿಕೆಟ್‌ ನಷ್ಟಕ್ಕೆ 158 ರನ್‌ಗಳಿಗೆ ಸೀಮಿತವಾಯಿತು. ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಬಳಿಕ 2021ರ ಐಪಿಎಲ್ ಟೂರ್ನಿಯಲ್ಲಿ ಪ್ಲೇ ಆಫ್ಸ್‌ಗೆ ಅರ್ಹತೆ ಪಡೆದ ಮೂರನೇ ತಂಡ ಎಂಬ ಕೀರ್ತಿಗೆ ಪಾತ್ರವಾಯಿತು. ಇನ್ನುಳಿದ ಎರಡೂ ಪಂದ್ಯಗಳಲ್ಲಿ ನಾವು ಭಯ ಮುಕ್ತ ಪ್ರದರ್ಶನ ತೋರಬೇಕು ಹಾಗೂ ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರ ಎರಡು ಸ್ಥಾನಗಳನ್ನು ಪಡೆಯುವ ಕಡೆ ಗಮನ ಹರಿಸಬೇಕು ಎಂದು ವಿರಾಟ್‌ ಕೊಹ್ಲಿ ಹೇಳಿದ್ದಾರೆ. ಪಂದ್ಯದ ಬಳಿಕ ಪೋಸ್ಟ್‌ ಮ್ಯಾಚ್‌ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿದ ವಿರಾಟ್‌, "ಅದ್ಭುತ ಭಾವನೆ ಉಂಟಾಗುತ್ತಿದೆ. ಇನ್ನೂ ಲೀಗ್‌ ಪಂದ್ಯಗಳು ಬಾಕಿ ಇರುವಾಗಲೇ ಪ್ಲೇ ಆಫ್ಸ್‌ಗೆ ಅರ್ಹತೆ ಪಡೆದಿರುವುದು 2011ರ ಬಳಿಕ ಇದೇ ಮೊದಲು. 12 ಪಂದ್ಯಗಳಲ್ಲಿ 8 ರಲ್ಲಿ ಗೆಲುವು ಪಡೆದಿರುವುದು ಇದು ಅತ್ಯುತ್ತಮ ಅಭಿಯಾನ. ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರ ಎರಡು ಸ್ಥಾನಗಳನ್ನು ಪಡೆಯಲು ನಮಗೆ ಇನ್ನೂ ಎರಡು ಅವಕಾಶಗಳಿವೆ. ಇನ್ನಷ್ಟು ಭಯಮುಕ್ತರಾಗಿ ಆಡಲು ಇದು ನಮಗೆ ಪ್ರೇರಣೆಯಾಗಿದೆ," ಎಂದು ಹೇಳಿದ್ದಾರೆ. ಕೆ.ಎಲ್‌ ರಾಹುಲ್‌ ಹಾಗೂ ಮಯಾಂಕ್‌ ಅಗರ್ವಾಲ್‌ ಪಂಜಾಬ್‌ ಕಿಂಗ್ಸ್‌ಗೆ ಉತ್ತಮ ಆರಂಭ ತಂದುಕೊಟ್ಟಿದ್ದರು. ಈ ವೇಳೆ ಅದ್ಭುತವಾಗಿ ಬೌಲ್‌ ಮಾಡಿದ ಯುಜ್ವೇಂದ್ರ ಚಹಲ್‌ ನಾಲ್ಕು ಓವರ್‌ಗಳಿಗೆ 29 ರನ್‌ ನೀಡಿ ಮಯಾಂಕ್‌ ಅಗರ್ವಾಲ್‌ ಸೇರಿ ಪ್ರಮುಖ ಮೂರು ವಿಕೆಟ್‌ಗಳನ್ನು ಕಬಳಿಸಿದರು. ಆ ಮೂಲಕ ಆರ್‌ಸಿಬಿ ಕೊನೆಯ 10 ಓವರ್‌ಗಳಲ್ಲಿ ಅದ್ಭುತವಾಗಿ ಕಮ್‌ಬ್ಯಾಕ್‌ ಮಾಡಿ 6 ರನ್‌ ರೋಚಕ ಜಯ ಸಾಧಿಸಲು ನೆರವಾದರು. ಇವರ ಜೊತೆಗೆ ಜಾರ್ಜ್‌ ಗಾರ್ಟನ್‌, ಶಹಬಾಝ್ ಅಹಮದ್‌ ಹಾಗೂ ಹರ್ಷಲ್‌ ಪಟೇಲ್‌ ಅತ್ಯುತ್ತಮ ಸಾಥ್‌ ನೀಡಿದರು. ಆರ್‌ಸಿಬಿ ತಂಡ ಪ್ಲೇ ಆಫ್ಸ್‌ಗೆ ಅರ್ಹತೆ ಪಡೆಯುವಲ್ಲಿ ಬೌಲರ್‌ಗಳ ಪಾತ್ರ ಕೂಡ ವಿಶೇಷವಾಗಿದೆ ಎಂದು ನಾಯಕ ವಿರಾಟ್‌ ಕೊಹ್ಲಿ ಇದೇ ವೇಳೆ ತಂಡದ ಬೌಲಿಂಗ್‌ ವಿಭಾಗವನ್ನು ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ. "ಟೆಸ್ಟ್‌ ಕ್ರಿಕೆಟ್‌ ವೃತ್ತಿ ಜೀವನ ಆರಂಭಿಸಿದಾಗಿನಿಂದಲೂ ಸಿರಾಜ್‌ ಅತ್ಯುತ್ತಮ ಬೌಲಿಂಗ್‌ ಪ್ರದರ್ಶನ ತೋರುತ್ತಿದ್ದಾರೆ. ಹರ್ಷಲ್‌ ಪಟೇಲ್‌ ಸೇರ್ಪಡೆಯಾಗಿರುವುದು ತಂಡದ ಪಾಲಿಗೆ ಅಸಾಧಾರಣವಾಗಿದೆ. ಶಹಬಾಝ್‌ ಬೆನ್ನಲ್ಲೆ ಯುಜ್ವೇಂದ್ರ ಚಹಲ್‌ ಪಂದ್ಯಕ್ಕೆ ಬ್ರೇಕ್‌ ತಂದುಕೊಟ್ಟರು. ಇವರ ಜೊತೆಗೆ ಗಾರ್ಟನ್‌ ಸೇರ್ಪಡೆಯಾದರು. ಆಟಗಾರರು ಹೆಜ್ಜೆ ಹಾಕದೇ ಇದ್ದರೆ ನಮ್ಮ ಅಭಿಯಾನ ಅಂತ್ಯವಾಗುತ್ತದೆ," ಎಂದು ವಿರಾಟ್‌ ಕೊಹ್ಲಿ ಹೇಳಿದ್ದಾರೆ. ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ ಬುಧವಾರ ಅಬು ಧಾಬಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧ ಸೆಣಸಲಿದೆ ಹಾಗೂ ಇನ್ನುಳಿದ ಎರಡೂ ಪಂದ್ಯಗಳಲ್ಲಿ ಗೆದ್ದು ಅಗ್ರ ಎರಡು ಸ್ಥಾನಗಳಿಗೇರಲು ಪ್ರಯತ್ನಿಸಲಿದೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3BmGX9P

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...