ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ; ಸಂಜಯ್ ಪಾಟೀಲ್ ವಿರುದ್ದ ಈಶ್ವರ್ ಖಂಡ್ರೆ ಕಿಡಿ

ಬೆಂಗಳೂರು: ಕಾಂಗ್ರೆಸ್ ಶಾಸಕಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬೆಳಗಾವಿ ಗ್ರಾಮಾಂತರ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ನಾಲಿಗೆ ತಮ್ಮ ಕುಲವನ್ನು ಹೇಳುತ್ತದೆ ಎನ್ನುವ ಹಿರಿಯರ ಮಾತಿನಂತೆ, ನಮ್ಮ ಪಕ್ಷದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕುರಿತು ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ಹೇಳಿರುವ ಕೀಳು ಮಟ್ಟದ ಮಾತು ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ. ಬಿಜೆಪಿ ನಾಯಕರು ಮಹಿಳೆಯರಿಗೆ ಗೌರವ ನೀಡುವುದೇ ಹಾಗಿದ್ದರೆ, ಕೂಡಲೇ ಸಂಜಯ್ ಪಾಟೀಲ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಿ. ಇಲ್ಲವಾದರೆ, ಇದು ಪಕ್ಷದ ಹೇಳಿಕೆ ಎಂದು ಒಪ್ಪಿಕೊಂಡಂತಾಗುತ್ತದೆ ಎಂದು ಸವಾಲು ಹಾಕಿದ್ದಾರೆ. ಸಂಜಯ್ ಪಾಟೀಲ ಅವರು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ರಾತ್ರಿ ರಾಜಕಾರಣದಿಂದ ಲಕ್ಷ್ಮೀ ಹೆಬ್ಬಾಳ್ಕರ್ ಶಾಸಕಿಯಾದರು ಎಂದು ಹೇಳಿಕೆ ನೀಡಿದ್ದರು. ಇವರ ಈ ಹೇಳಿಕೆಯಿಂದ ವಿವಾದ ಸೃಷ್ಟಿಯಾಗಿತ್ತು. ಹಲವು ಮುಖಂಡರು ಇವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಸಂಜಯ್ ಪಾಟೀಲ್ ಅವರ ಹೇಳಿಕೆಗೆ ಈಗಾಗಲೇ ಪ್ರತಿಕ್ರಿಯೆ ನೀಡಿರುವ ಲಕ್ಷ್ಮೀ ಹೆಬ್ಬಾಳ್ಕರ್, ಸಂಜಯ್ ಅಣ್ಣನ ಹೇಳಿಕೆ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ. ಅವರು ಬಿಜೆಪಿ ಪಕ್ಷದ ಜಿಲ್ಲಾ ಅಧ್ಯಕ್ಷರಾಗಿ ಹೇಳಿದ್ದಾರಾ? ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜಾಧ್ಯಕ್ಷರು ಸ್ಪಷ್ಟಪಡಿಸಬೇಕು ಎಂದಿದ್ದಾರೆ. ಭಾರತದ ಇತಿಹಾಸದಲ್ಲಿ ಯಾರ‍್ಯಾರು ಹೆಣ್ಣನ್ನು ಕೆಣಕ್ಕಿದ್ದಾರೆ ಅವರ ಪರಿಸ್ಥಿತಿ ಏನಾಗಿದೆ ಎಂಬುದನ್ನು ಇತಿಹಾಸ ತೆಗೆದುನೋಡಿದರೆ ಗೊತ್ತಾಗುತ್ತದೆ. ನಾನು ಯಾರಿಗೂ ಚಾಲೆಂಜ್‌ ಮಾಡೋದಿಲ್ಲ, ಸುಮ್ಮನೇ ಕುಳಿತುಕೊಳ್ಳುವ ಹೆಣ್ಣು ಮಗಳು ಅಲ್ಲ ಎಂದು ಸವಾಲು ಹಾಕಿದ್ದಾರೆ.


from India & World News in Kannada | VK Polls https://ift.tt/2YfKyYX

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...