ಭಾರತವನ್ನು ವಿಶ್ವ ಗುರು ಮಾಡೋದೇ ಎನ್‌ಇಪಿ ಗುರಿ: ಸಚಿವ ಅಶ್ವಥ್‌ ನಾರಾಯಣ

: ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕೊಡುವ ಮೂಲಕ ಭಾರತವನ್ನು ಮಾಡಬೇಕು, ತಂತ್ರಜ್ಞಾನದಲ್ಲಿ ವಿಶ್ವಕ್ಕೆ ಮಾದರಿಯಾಗಿ ಬೆಳೆಯಬೇಕೆಂಬ ಗುರಿಯೊಂದಿಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ ಎಂದು ಉನ್ನತ ಶಿಕ್ಷಣ ಡಾ. ಸಿ. ಎನ್‌. ಅಶ್ವಥ್‌ ನಾರಾಯಣ ಹೇಳಿದರು. ಕುವೆಂಪು ವಿಶ್ವವಿದ್ಯಾಲಯವು ಸಹ್ಯಾದ್ರಿ ಕಾಲೇಜು ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಮಾಜದ ಆಮೂಲಾಗ್ರ ಅಭಿವೃದ್ಧಿಯ ಹಿತದೃಷ್ಟಿಯಿಂದ ಜಾರಿಗೊಳಿಸಲಾಗಿದೆಯೇ ಹೊರತು ಯಾವುದೇ ಧರ್ಮ, ಜಾತಿಗಳ ವಿರುದ್ಧವಾಗಿ ಅಲ್ಲ. ಇಡೀ ಸಮಾಜದ ಬದಲಾವಣೆ, ಬೆಳವಣಿಗೆ, ಅಭಿವೃದ್ಧಿಯು ಶಿಕ್ಷಣವನ್ನು ಅವಲಂಬಿಸಿದೆ. ವಿಶ್ವದ ಮುಂದುವರಿದ ಮತ್ತು ಪ್ರಬಲ ರಾಷ್ಟ್ರಗಳೊಂದಿಗೆ ಸ್ಪರ್ಧೆ ಮಾಡಬೇಕಾದ ಶಿಕ್ಷಣ ಕ್ಷೇತ್ರವನ್ನು ಸುಧಾರಿಸದ ಹೊರತು ನಮಗೆ ಬೇರೆ ದಾರಿ ಕಾಣುತ್ತಿಲ್ಲ. ಗುಣಮಟ್ಟದ ಶಿಕ್ಷಣ ಕೊಡುವ ಮೂಲಕ ವಿದ್ಯಾರ್ಥಿಗಳನ್ನು ವಿಶ್ವ ಮಟ್ಟದ ಸ್ಪರ್ಧೆಗೆ ಸಜ್ಜುಗೊಳಿಸುವುದು ನಮ್ಮ ಗುರಿ ಎಂದರು. ಶಿಕ್ಷಣ ಸಂಸ್ಥೆಗಳು ಕೇವಲ ಶೋಕೇಸ್‌ ಅಲ್ಲ. ಶಿಕ್ಷಣ ಸಂಸ್ಥೆಗಳು ಕೇವಲ ಹಣ ಗಳಿಕೆಯ ತಾಣಗಳಲ್ಲ. ಚಂದ ಕಾಣುವ ಮೂಲ ಸೌಲಭ್ಯಗಳನ್ನು ಹೊಂದಿದ ಮಾತ್ರಕ್ಕೆ ಗುಣಮಟ್ಟವನ್ನು ನಿರ್ಧರಿಸಲು ಸಾಧ್ಯವಿಲ್ಲ. ಗುಣಮಟ್ಟ ಎನ್ನುವುದು ಅಧ್ಯಾಪಕರು ವಿದ್ಯಾರ್ಥಿಗಳನ್ನು ಎಷ್ಟರ ಮಟ್ಟಿಗೆ ಸ್ಪರ್ಧೆಗೆ ಸಜ್ಜುಗೊಳಿಸಿದ್ದಾರೆ ಎಂಬುದರ ಮೇಲೆ ನಿರ್ಧಾರವಾಗುತ್ತದೆ. ಅಲ್ಲಿ ಸಮಾಜ ಪರಿವರ್ತನೆಯ ಗುರಿ ಇರಬೇಕು. ಗುಣಮಟ್ಟದ ಶಿಕ್ಷಣ ಕೊಡದ ಸಂಸ್ಥೆಗಳು ಹೊಸ ಶಿಕ್ಷಣ ನೀತಿಯಲ್ಲಿ ಉಳಿದುಕೊಳ್ಳಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು. ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಮಾತನಾಡಿ, ಪ್ರತಿಯೊಬ್ಬರ ಒಳಗಿರುವ ಪ್ರತಿಭೆ ಗುರುತಿಸಿ ಅದರ ವಿಕಸನಕ್ಕೆ ಅವಕಾಶ ಕಲ್ಪಿಸಲು ನೂತನ ಶಿಕ್ಷಣ ನೀತಿಯಿಂದ ಸಾಧ್ಯವಿದೆ ಎಂದರು. ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಡಾ. ವೀರಭದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಆರ್ಯ ವೈಶ್ಯ ಸಮಾಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ. ಎಸ್‌. ಅರುಣ್‌, ಕುಲ ಸಚಿವೆ ಅನುರಾಧ, ಪರೀಕ್ಷಾಂಗ ಕುಲ ಸಚಿವ ಪ್ರೊ. ಸಿ. ಎಂ. ತ್ಯಾಗರಾಜ್‌, ರಾಜ್ಯ ಉನ್ನತ ಶಿಕ್ಷಣ ಪರಿಷತ್‌ ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ. ಗೋಪಾಲಕೃಷ್ಣ ಜೋಷಿ, ಸಹ್ಯಾದ್ರಿ ಕಾಲೇಜುಗಳ ಪ್ರಾಂಶುಪಾಲರುಗಳಾದ ಡಾ. ಕೆ. ಬಿ. ಧನಂಜಯ, ಪ್ರೊ. ವಾಗ್ದೇವಿ, ಪ್ರೊ. ಎಂ. ಕೆ. ವೀಣಾ ಮತ್ತಿತರರು ಇದ್ದರು. ಪಠ್ಯಕ್ರಮ ಪ್ರಶ್ನೆಗೆ ಉತ್ತರಿಸದ ಸಚಿವ ಕಾರ್ಯಕ್ರಮದಲ್ಲಿ ನಡೆದ ಸಂವಾದದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯನ್ನು ಸಮರ್ಥಿಸಿಕೊಂಡ ಸಚಿವ ಡಾ. ಅಶ್ವಥ್‌ ನಾರಾಯಣ ಅವರು ಸಹ್ಯಾದ್ರಿ ಕಲಾ ಕಾಲೇಜು ಪ್ರಾಧ್ಯಾಪಕ ಪ್ರೊ. ಮಲ್ಲಿಕಾರ್ಜುನ ಮೇಟಿ ಅವರು, 'ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಉಲ್ಲೇಖಿಸಿರುವ ಮತ್ತು ಪ್ರಸ್ತುತ ಬಿಂಬಿಸುತ್ತಿರುವ ಹೊಸತನ ಪಠ್ಯಕ್ರಮದಲ್ಲಿ ಏಕೆ ಕಾಣುತ್ತಿಲ್ಲ ಹಾಗೂ ಪಠ್ಯಕ್ರಮ ರಚನೆಯಲ್ಲಿ ಅನುಭವಸ್ಥ ಅಧ್ಯಾಪಕರನ್ನು ಬಳಕೆ ಮಾಡಿಕೊಂಡಿಲ್ಲ ಏಕೆ' ಎಂಬ ಪ್ರಶ್ನೆಗೆ ಉತ್ತರಿಸದೆ ಸಂವಾದವನ್ನು ಸಮಾಪ್ತಿಗೊಳಿಸಿದರು.


from India & World News in Kannada | VK Polls https://ift.tt/3abZNnV

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...