ರೊಹಿಂಗ್ಯಾ ವಲಸಿಗರ ಪರ ನಿಂತ ಕರ್ನಾಟಕ ಸರ್ಕಾರ! ಬಿಜೆಪಿ ಮುಖಂಡನ ಅರ್ಜಿ ವಜಾಕ್ಕೆ ಮನವಿ

ಹೊಸದಿಲ್ಲಿ: ಬಾಂಗ್ಲಾದೇಶ ಹಾಗೂ ಮುಸ್ಲಿಮರು ಸೇರಿದಂತೆ ಹಾಗೂ ಒಳನುಸುಳುಕೋರರನ್ನು ಬಂಧಿಸಬೇಕು ಹಾಗೂ ಗಡಿಪಾರು ಮಾಡಬೇಕು ಎಂದು ಕೋರಿ ಬಿಜೆಪಿ ಮುಖಂಡ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಕರ್ನಾಟಕ ವಿರೋಧ ವ್ಯಕ್ತಪಡಿಸಿದೆ. ಈ ಅರ್ಜಿಯನ್ನು ವಜಾಗೊಳಿಸುವಂತೆ ಅದು ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದೆ. ಈವರೆಗೂ ಬೆಂಗಳೂರಿನಲ್ಲಿ 72 ರೊಹಿಂಗ್ಯಾಗಳನ್ನು ಗುರುತಿಸಲಾಗಿದೆ. ಆದರೆ ಅವರನ್ನು ಗಡಿಪಾರು ಮಾಡುವ ಯಾವುದೇ ಯೋಜನೆಯಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರಯವ ಅಫಿಡವಿಟ್‌ನಲ್ಲಿ ಸರ್ಕಾರ ಹೇಳಿದೆ. ದೇಶದಲ್ಲಿರುವ ರೊಹಿಂಗ್ಯಾ ನಿರಾಶ್ರಿತರನ್ನು ಗಡಿಪಾರು ಮಾಡುವ ಸಂಬಂಧ ತನ್ನ ಹಕ್ಕನ್ನು ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಸಮರ್ಥಿಸಿಕೊಂಡಿತ್ತು. ಆದರೆ ಅದಕ್ಕೆ ವಿರೋಧಾಭಾಸವೆಂಬಂತೆ ರಾಜ್ಯದಲ್ಲಿನ ಬಿಜೆಪಿ ಸರ್ಕಾರದ ನಡೆ ಕುತೂಹಲ ಮೂಡಿಸಿದೆ. ಜಮ್ಮುವಿನಲ್ಲಿ ಬಂಧಿಸಲಾಗಿದ್ದ ರೊಹಿಂಗ್ಯಾಗಳ ಪ್ರಕರಣದಲ್ಲಿ ಅವರನ್ನು ಮಯನ್ಮಾರ್‌ಗೆ ಗಡಿಪಾರು ಮಾಡಲು ನ್ಯಾಯಾಲಯ ಕೂಡ ಒಪ್ಪಿಕೊಂಡಿತ್ತು. ಆದರೆ ಈ ಪ್ರಕರಣದಲ್ಲಿ, 72 ರೊಹಿಂಗ್ಯಾಗಳು ಬೇರೆ ಬೇರೆ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದು, ಅವರ ವಿರುದ್ಧ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ರಾಜ್ಯ ಸರ್ಕಾರ ಪ್ರತಿಕ್ರಿಯಿಸಿದೆ. ಅಕ್ರಮವಾಗಿ ವಲಸೆ ಬಂದಿರುವ ರೊಹಿಂಗ್ಯಾಗಳನ್ನು ಗಡಿಪಾರು ಮಾಡುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ್ದ ಪಿಐಎಲ್‌ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ಸರ್ಕಾರ, ಇದು ಪ್ರಕರಣಗಳ ವಾಸ್ತವಾಂಶಗಳು ಅಥವಾ ಕಾನೂನಿನ ಪ್ರಕಾರ ನಡೆದುಕೊಳ್ಳಬಹುದಾದ ಕ್ರಮವಲ್ಲ ಎಂದು ಪ್ರತಿಪಾದಿಸಿದೆ. 'ಬೆಂಗಳೂರು ನಗರ ಪೊಲೀಸರು ಯಾವುದೇ ರೊಹಿಂಗ್ಯಾಗಳನ್ನು ತನ್ನ ವ್ಯಾಪ್ತಿಯಲ್ಲಿನ ಶಿಬಿರ ಅಥವಾ ಬಂಧನ ಕೇಂದ್ರದಲ್ಲಿ ಇರಿಸಿಲ್ಲ. ಆದರೆ, ಬೆಂಗಳೂರು ನಗರದಲ್ಲಿ 72 ರೊಹಿಂಗ್ಯಾಗಳನ್ನು ಗುರುತಿಸಲಾಗಿದೆ. ಅವರ ವಿರುದ್ಧ ಬೆಂಗಳೂರು ಪೊಲೀಸರು ಸದ್ಯಕ್ಕೆ ಯಾವುದೇ ಕಠಿಣ ಕ್ರಮ ತೆಗೆದುಕೊಂಡಿಲ್ಲ ಹಾಗೂ ಅವರನ್ನು ಗಡಿಪಾರು ಮಾಡುವ ತಕ್ಷಣದ ಆಲೋಚನೆ ಇಲ್ಲ' ಎಂದು ತಿಳಿಸಿದೆ. ಅರ್ಜಿಗೆ ಅರ್ಹತೆ ಇಲ್ಲ!ಪಿಐಎಲ್‌ಗೆ ಅರ್ಹತೆ ಇಲ್ಲ. ಹೀಗಾಗಿ ಅರ್ಜಿಯನ್ನು ಈಗಲೇ ವಜಾಗೊಳಿಸಬೇಕು ಎಂದು ಕರ್ನಾಟಕ ಸರ್ಕಾರದ ಅಫಿಡವಿಟ್ ಹೇಳಿದೆ. ಅರ್ಜಿದಾರರು ಎತ್ತಿರುವ ಅಂಶಗಳು ಸ್ವ ಹಿತಾಸಕ್ತಿಗಳಿಂದ ಕೂಡಿದೆ. ಇದನ್ನು ಕಾನೂನು ಮತ್ತು ಸುವ್ಯವಸ್ಥೆಯಡಿ ಒಪ್ಪಲಾಗದು. ಹೀಗಾಗಿ ನ್ಯಾಯಾದ ಹಿತಾಸಕ್ತಿಯಿಂದ ಅದನ್ನು ವಜಾಗೊಳಿಸಬೇಕು ಎಂದು ಕೋರಿದೆ. 'ನಾವು ರೊಹಿಂಗ್ಯಾಗಳನ್ನು ಅಕ್ರಮ ವಲಸಿಗರು ಎಂದು ಪರಿಗಣಿಸುತ್ತಿಲ್ಲ. ಅವರು ನಿರಾಶ್ರಿತರು ಎಂದು ಪರಿಗಣಿಸುವಂತೆ ಭಾರತ ಸರ್ಕಾರದ ನೀತಿಯೂ ಇದೆ. ಅವರು ದೇಶಾದ್ಯಂತ ಹರಡಿದ್ದಾರೆ. ಅವರಲ್ಲಿ ಬೆಂಗಳೂರಿನಲ್ಲಿ 72 ಮಂದಿ ಇದ್ದಾರೆ. ಆದರೆ ನಾವು ನಿರಂತರ ನಿಗಾ ಇರಿಸಿದ್ದೇವೆ. ಯಾರಾದರೂ ಅಕ್ರಮ ವಲಸಿಗರು ಎನ್ನುವುದು ಪತ್ತೆಯಾದರೆ, ಗಡಿಪಾರು ಮಾಡುವ ಮುನ್ನ ಅಗತ್ಯ ಪ್ರಕ್ರಿಯೆಗಳನ್ನು ಅನುಸರಿಸಲಾಗುವುದು. ವಲಸಿಗರನ್ನು ತನಿಖೆ ವೇಳೆ ನಮ್ಮ ಬಂಧನ ಕೇಂದ್ರದಲ್ಲಿ ಇರಿಸಲಾಗಿತ್ತು. ಗಡಿಪಾರಿನ ಬಗ್ಗೆ ನಿರ್ದೇಶನ ನೀಡುವಂತೆ ಕೋರ್ಟ್‌ಗೆ ವರದಿ ಸಲ್ಲಿಸಲಾಗಿತ್ತು. ಏಕೆಂದರೆ ಈ ವಿಚಾರದಲ್ಲಿ ನಮ್ಮದೇ ನಿರ್ಧಾರಕ್ಕೆ ಅನುಗುಣವಾಗಿ ನಡೆದುಕೊಳ್ಳಲು ಆಗುವುದಿಲ್ಲ' ಎಂದು ಕರ್ನಾಟಕ ಗೃಹ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


from India & World News in Kannada | VK Polls https://ift.tt/3nufNIb

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...