ಬೆಂಗಳೂರು: ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶ್ರೀನಿವಾಸ್ ಮಾನೆ ಗುರುವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಗುರುವಾರ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡಾ ಭಾಗಿಯಾಗಲಿದ್ದಾರೆ. ಸಂಜೆ ಐದು ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದ ಸಮೀಪವಿರುವ ಖಾಸಗಿ ಹೋಟೆಲ್ನಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರ ಸಭೆ ಕೂಡಾ ನಡೆಯಲಿದೆ. ಈ ಸಭೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ. ಇನ್ನು ಸಿಂದಗಿ ಅಭ್ಯರ್ಥಿ ಅಶೋಕ್ ಮನಗೊಳಿ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ಸಮಯದಲ್ಲೂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಉಪಸ್ಥಿತರಿರಲಿದ್ದಾರೆ. ಹಾಗನಲ್ ಕ್ಷೇತದಲ್ಲಿ ಟಿಕೆಟ್ಗಾಗಿ ಮನೋಹರ್ ತಹಶೀಲ್ದಾರ್ ಹಾಗೂ ಶ್ರೀನಿವಾದ ಮಾನೆ ನಡುವ ಪೈಪೋಟಿ ನಡೆದಿತ್ತು. ಕೊನೆಯ ಗಳಿಗೆಯಲ್ಲಿ ಶ್ರೀನಿವಾಸ್ ಮಾನೆ ಹೆಸರು ಅಂತಿಮಗೊಂಡು ಘೋಷಣೆ ಆಗಿತ್ತು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅಸಮಾಧಾನಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಹಿರಿಯರ ಸಭೆಯಲ್ಲಿ ಅವರ ಮನವೋಲಿಕೆ ಪ್ರಯತ್ನವೂ ನಡೆಯುವ ಸಾಧ್ಯತೆ ಇದೆ. ಇನ್ನು ಬಿಜೆಪಿ ಪಕ್ಷವೂ ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಯ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಸಿಂದಗಿಯಲ್ಲಿ ರಮೇಶ್ ಭೂಸನೂರು ಹಾಗೂ ಹಾನಗಲ್ನಲ್ಲಿ ಶಿವರಾಜ್ ಸಜ್ಜನರ್ ಹೆಸರು ಘೋಷಣೆ ಮಾಡಲಾಗಿದೆ. ಜೆಡಿಎಸ್ನಿಂದ ನಾಮಪತ್ರ ಸಲ್ಲಿಕೆ ಗುರುವಾರ 12 ಗಂಟೆಗೆ ಸಿಂಧಗಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ನಾಜಿಯಾ ಶಕೀಲಾ ಅಂಗಡಿ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಭಾಗಿಯಾಗಲಿದ್ದಾರೆ.
from India & World News in Kannada | VK Polls https://ift.tt/2YsDW9j