ಆರ್ ಎಸ್ ಎಸ್ ಇಲ್ಲಾಂದ್ರೆ ಪಾಕಿಸ್ತಾನ ಸೃಷ್ಟಿಯಾಗುತ್ತಿತ್ತು; ಸಚಿವ ಪ್ರಭು ಚವ್ಹಾಣ್

ಬೆಂಗಳೂರು: ಆರ್.ಎಸ್.ಎಸ್ ಇಲ್ಲಾಂದ್ರೆ ದೇಶದಲ್ಲಿ ಸೃಷ್ಟಿಯಾಗುತ್ತಿತ್ತು ಎಂದು ಪ್ರಭು ಚೌಹ್ಹಾಣ್ ಅಭಿಪ್ರಾಯಪಟ್ಟಿದ್ದಾರೆ. ವಿಕಾಸಸೌಧದಲ್ಲಿ ಬುಧವಾರ ಮಾತನಾಡಿದ ಅವರು, ಇದ್ದ ಕಾರಣ ದೇಶ ಗಟ್ಟಿ ಇದೆ, ಇಲ್ಲಾಂದ್ರೆ ಪಾಕಿಸ್ತಾನ ಸೃಷ್ಟಿಯಾಗುತ್ತಿತ್ತು ಎಂದರು. ಆರ್ ಎಸ್ ಎಸ್ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿಕೆಯನ್ನು ಖಂಡಿಸಿದ ಅವರು, ಕೇಂದ್ರದಲ್ಲಿ ರಾಜ್ಯದಲ್ಲಿ ನಮ್ಮ ಸರ್ಕಾರ ಇದೆ. ಹತಾಶೆಯಿಂದ ಈ‌ ಹೇಳಿಕೆ ನೀಡುತ್ತಿದ್ದಾರೆ. ಇದು ಖಂಡನೀಯ ಎಂದರು. ಗೋ ಸಂರಕ್ಷಣೆಗೆ ಸಂಚಾರಿ ಚಿಕಿತ್ಸಾಲಯಗಳ ಗೋ ಸಂರಕ್ಷಣೆಗಾಗಿ ಸಂಚಾರಿ ಚಿಕಿತ್ಸಾಲಯಗಳನ್ನು ಆರಂಭಿಸಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹ್ಹಾಣ್ ತಿಳಿಸಿದರು. ರಾಷ್ಟ್ರೀಯ ರೋಗ ನಿಯಂತ್ರಣ ಯೋಜನೆ ಅಡಿಯಲ್ಲಿ ಸಂಚಾರಿ ಪಶು ಚಿಕಿತ್ಸಾಲಯಗಳು ಕೇಂದ್ರದಿಂದ ಮಂಜೂರಾಗಿವೆ. ರಾಜ್ಯದ ಎಲ್ಲಾ ತಾಲೂಕಿಗೆ 275 ಸಂಚಾರಿ ಪಶು ಚಿಕಿತ್ಸಾಲಯಗಳು ಮಂಜೂರು ಆಗಿದ್ದು ಒಂದು ವಾಹನಕ್ಕೆ 16 ಲಕ್ಷ ತಗಲುತ್ತೆ ವಾಹನದ ನಿರ್ವಹಣೆ ಪಿಪಿಪಿ ಮಾಡಲ್ ಮೂಲಕ ನಡೆಸಲಾಗುವುದು ಎಂದು ತಿಳಿಸಿದರು. ಸಂಚಾರಿ ಚಿಕಿತ್ಸಾಲಯ ವಾಹನ ನಿರ್ವಹಣೆಗೆ ಕೇಂದ್ರದಿಂದ 60% ರಾಜ್ಯದಿಂದ 40% ವೆಚ್ಚ ಭರಿಸಲಾಗುತ್ತದೆ. ರೈತರು 1962 ಗೆ ಕರೆ ಮಾಡಿದರೆ ಮನೆಗೆ ವಾಹನ ಬರುತ್ತದೆ. ಪಶುಸಂಜೀವಿನಿ ಸಂಚಾರಿ ಚಿಕಿತ್ಸಾಲಯವನ್ನು ಇಡೀ ದೇಶದಲ್ಲಿ ಆರಂಭಿಸುವ ಭರವಸೆಯನ್ನು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ನೀಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಪ್ರಾಣಿ ಸಹಾಯವಾಣಿ ಕೇಂದ್ರಕ್ಕೆ 25,000 ಕರೆ ಬಂದಿದೆ. ಕಾಲುಬಾಯಿ ರೋಗಕ್ಕೆ 50 ಲಕ್ಷ ಲಸಿಕೆ ಡೋಸ್ ನೀಡಲಾಗಿದೆ. ಗೋಹತ್ಯೆ ಕಾನೂನು‌ ಬಂದ ಬಳಿಕ 400 ಎಫ್ ಐ ಆರ್ ದಾಖಲಾಗಿದೆ. ಕಾಯ್ದೆ ಜಾರಿ ಬಳಿಕ ಗೋವುಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ ಎಂದು ಮಾಹಿತಿ ನೀಡಿದರು.


from India & World News in Kannada | VK Polls https://ift.tt/3lcqHCw

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...