ಬಿಬಿಎಂಪಿ ಚುನಾವಣೆ ವಿಚಾರ: ನಾಲ್ಕು ವಾರಗಳ ನಂತರ ಸುಪ್ರೀಂನಲ್ಲಿ ಅಂತಿಮ ವಿಚಾರಣೆ

: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಬಾಕಿ ಇರುವ ವಿಶೇಷ ಮೇಲ್ಮನವಿಯ ಅಂತಿಮ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ನಾಲ್ಕು ವಾರಗಳ ನಂತರ ಕೈಗೆತ್ತಿಕೊಳ್ಳಲಿದೆ. ಶೀಘ್ರ ಚುನಾವಣೆ ನಡೆಸಬೇಕೆಂದು ಕರ್ನಾಟಕ ಹೈಕೋರ್ಟ್‌ ನೀಡಿದ್ದ ತೀರ್ಪು ಪ್ರಶ್ನಿಸಿ ರಾಜ್ಯ ಸರಕಾರ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಬುಧವಾರ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಮತ್ತು ಹಿಮಾ ಕೊಯ್ಲಿಅವರಿದ್ದ ತ್ರಿಸದಸ್ಯಪೀಠದ ಮುಂದೆ ವಿಚಾರಣೆಗೆ ಬಂದಿತು. ಆಗ ಅರ್ಜಿದಾರರು ಮತ್ತು ಪ್ರತಿವಾದಿಗಳ ಪರ ವಕೀಲರು, ವಿಷಯ ಪ್ರಸ್ತಾಪಿಸಿ ತುರ್ತಾಗಿ ವಿಚಾರಣೆ ಕೈಗೆತ್ತಿಕೊಳ್ಳಬೇಕೆಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಆ ಹಿನ್ನೆಲೆಯಲ್ಲಿ ನ್ಯಾಯಾಲಯ ನಾಲ್ಕು ವಾರಗಳ ನಂತರ ಅಂತಿಮ ವಿಚಾರಣೆಗೆ ಅರ್ಜಿ ನಿಗದಿಪಡಿಸುವಂತೆ ರಿಜಿಸ್ಟ್ರಿಗೆ ನಿರ್ದೇಶನ ನೀಡಿ ವಿಚಾರಣೆಯನ್ನು ಮುಂದೂಡಿತು. ಪಾಲಿಕೆಯ ಮಾಜಿ ಸದಸ್ಯ ಎಂ.ಶಿವರಾಜ್‌ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮನವಿ ಆಲಿಸಿದ್ದ ಹಿಂದಿನ ಸಿಜೆ ಎ.ಎಸ್‌. ಓಕ್‌ ನೇತೃತ್ವದ ವಿಭಾಗೀಯ ಪೀಠ, ಆರು ವಾರಗಳಲ್ಲಿ ರಾಜ್ಯ ಸರಕಾರ ವಾರ್ಡ್‌ವಾರು ಅಂತಿಮ ಮೀಸಲು ಪಟ್ಟಿ ಪ್ರಕಟಿಸಿದ ನಂತರ ಎಷ್ಟು ಸಾಧ್ಯವೋ ಅಷ್ಟು ಶೀಘ್ರ ಬಿಬಿಎಂಪಿಗೆ ಚುನಾವಣೆಯನ್ನು ನಡೆಸಬೇಕು ಎಂದು 2020ರ ಡಿ.4ರಂದು ಆದೇಶ ನೀಡಿತ್ತು. ಆ ಆದೇಶ ಪ್ರಶ್ನಿಸಿ ರಾಜ್ಯ ಸರಕಾರ ಮೇಲ್ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ 2020ರ ಡಿ.19ರಂದು ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ ನೀಡಿತ್ತು. ಅನಂತರ ಅರ್ಜಿದಾರರು ತಡೆಯಾಜ್ಞೆ ತೆರವು ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಸುಪ್ರೀಂಕೋರ್ಟ್‌ ತಡೆ ಹಿನ್ನೆಲೆಯಲ್ಲಿ ನಡೆದಿಲ್ಲ. ಕಳೆದ ಸೆಪ್ಟೆಂಬರ್‌ ತಿಂಗಳಿಗೆ ಪಾಲಿಕೆಯ ಅವಧಿ ಪೂರ್ಣಗೊಂಡು ಒಂದು ವರ್ಷ ಕಳೆದಿದೆ. 4 ವಾರಗಳಲ್ಲಿ ವರದಿ ಸಲ್ಲಿಸಲು ಬಿಬಿಎಂಪಿಗೆ ಹೈಕೋರ್ಟ್‌ ನಿರ್ದೇಶನ ಬೆಂಗಳೂರು: ಜಯನಗರ ಸುತ್ತಮುತ್ತಲ ಪ್ರದೇಶದಲ್ಲಿ ಪಾದಚಾರಿ ಮಾರ್ಗಗಳ ಮೇಲಿನ ವಾಹನಗಳ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಂಡು ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸುವಂತೆ ಹೈಕೋರ್ಟ್‌ ಮಂಗಳವಾರ ಸರಕಾರಕ್ಕೆ ಆದೇಶಿಸಿದೆ. ಲೆಟ್ಜ್‌ ಕಿಟ್‌ ಫೌಂಡೇಷನ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಆಗ ಅರ್ಜಿದಾರರ ಪರ ವಕೀಲರಾದ ಪುತ್ತಿಗೆ ರಮೇಶ್‌, ಜಯನಗರ ಪ್ರದೇಶದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಲಾಗಿದೆ ಎಂದು ಪ್ರಮಾಣಪತ್ರ ಸಲ್ಲಿಸಿತ್ತು. ಆದರೆ ಅಲ್ಲಿ ತೆರವು ಕಾರ್ಯ ಆಗಿಲ್ಲ. ಆ ಕುರಿತಂತೆ ಇತ್ತೀಚಿನ ಫೋಟೊ ಸಹಿತ ನ್ಯಾಯಾಲಯಕ್ಕೆ ವಿವರ ಸಲ್ಲಿಸಲಾಗಿದೆ. ಅವುಗಳನ್ನು ನ್ಯಾಯಾಲಯ ಪರಿಶೀಲಿಸಬಹುದು ಎಂದು ಕೋರಿದರು. ಅದಕ್ಕೆ ಬಿಬಿಎಂಪಿ, ಈ ಹಿಂದೆ ಅರ್ಜಿದಾರರು ನೀಡಿದ್ದ ಫೋಟೊ ಆಧರಿಸಿ ತೆರವು ಕಾರ್ಯ ಮಾಡಲಾಗಿತ್ತು. ವಾಹನಗಳ ಮಾಲೀಕರಿಗೆ ನೋಟಿಸ್‌ ನೀಡಲಾಗಿತ್ತು. ತೆರವು ಮಾಡಿದ ಜಾಗದಲ್ಲಿ ಪಾಟ್‌ಗಳನ್ನಿಟ್ಟು ಗಾರ್ಡನ್‌ ನಿರ್ಮಿಸಲಾಗಿದೆ. ಆನಂತರದ ಸ್ಥಿತಿ-ಗತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಸಲ್ಲಿಸಲು ಸ್ವಲ್ಪ ಕಾಲಾವಕಾಶ ನೀಡಬೇಕು ಎಂದರು. ಆಗ ನ್ಯಾಯಪೀಠ, ಹಾಗಿದ್ದರೆ ಅರ್ಜಿದಾರರು ಫೋಟೊದಲ್ಲಿ ತಿಳಿಸಿರುವ ಜಾಗಗಳಲ್ಲಿ ಪಾದಚಾರಿ ಒತ್ತುವರಿ ತೆರವು ಕಾರ್ಯ ಕೈಗೊಂಡು, ಆ ಬಗ್ಗೆ ನಾಲ್ಕು ವಾರಗಳಲ್ಲಿ ಅನುಪಾಲನಾ ವರದಿ ಸಲ್ಲಿಸಬೇಕು ಎಂದು ಬಿಬಿಎಂಪಿಗೆ ಸೂಚಿಸಿ ವಿಚಾರಣೆಯನ್ನು ನ.12ಕ್ಕೆ ಮುಂದೂಡಿತು. ಅರ್ಜಿ ವಿಲೇವಾರಿಈ ಮಧ್ಯೆ, ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕೋರಿ ವಕೀಲ ಡಿ.ಎಸ್‌.ರಾಮಚಂದ್ರರೆಡ್ಡಿ ಸಲ್ಲಿಸಿದ್ದ ಪಿಐಎಲ್‌ ಅನ್ನು ನ್ಯಾಯಪೀಠ ವಿಲೇವಾರಿ ಮಾಡಿತು. ಸರಕಾರಿ ವಕೀಲ ವಿಜಯಕುಮಾರ್‌ ಪಾಟೀಲ್‌, ಸರಕಾರ ಮತ್ತು ಬಿಬಿಎಂಪಿ ಈಗಾಗಲೇ ಪಾದಚಾರಿ ಮಾರ್ಗಗಳ ಮೇಲೆ ವಾಹನ ನಿಲುಗಡೆ ಮಾಡುವುದು ಅಪರಾಧ. ಅಂತಹವರ ವಿರುದ್ಧ ಮೋಟಾರು ವಾಹನ ಕಾಯಿದೆಯಡಿ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗುವುದೆಂದು ಆದೇಶಗಳನ್ನು ಹೊರಡಿಸಿದೆ. ಹಾಗಾಗಿ, ಅರ್ಜಿಯನ್ನು ಇತ್ಯರ್ಥಪಡಿಸಬಹುದು ಎಂದರು. ಅದರಂತೆ, ನ್ಯಾಯಾಲಯ ಇತ್ಯರ್ಥಪಡಿಸಿ ಆದೇಶಿಸಿತು.


from India & World News in Kannada | VK Polls https://ift.tt/2YmdYUO

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...