ಚಿಕ್ಕಮಗಳೂರು: ರಾಮನಾಥ ಕೋವಿಂದ್ ಅವರು ಶುಕ್ರವಾರ ಶೃಂಗೇರಿಗೆ ಭೇಟಿ ನೀಡುತ್ತಿದ್ದಾರೆ. ಆದರೆ ಅವರ ಆಗಮನ ಅಲ್ಲಿನ ಜನರಲ್ಲಿ ಸಂತಸ ಉಂಟುಮಾಡುವ ಬದಲು ಅಸಮಾಧಾನಕ್ಕೆ ಕಾರಣವಾಗಿದೆ. ಅವರ ಭೇಟಿ ಹಿನ್ನೆಲೆಯಲ್ಲಿ ಗುರುವಾರ ಮತ್ತು ಶುಕ್ರವಾರ ಎರಡೂ ದಿನ ಪಟ್ಟಣ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ರಾಷ್ಟ್ರಪತಿ ಕೋವಿಂದ್ ಅವರ ಭೇಟಿ ಹಿನ್ನೆಲೆಯಲ್ಲಿ ಭದ್ರತೆಯ ದೃಷ್ಟಿಯಿಂದ ಪಟ್ಟಣದ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಜಿಲ್ಲಾಡಳಿತ ಸೂಚಿಸಿದೆ. ಇದು ವ್ಯಾಪಾರಿಗಳಲ್ಲಿ ಆಕ್ರೋಶ ಉಂಟುಮಾಡಿದೆ. ಕೊರೊನಾ ವೈರಸ್ ಲಾಕ್ಡೌನ್ ನಿಯಂತ್ರಣಗಳ ಹಿನ್ನೆಲೆಯಲ್ಲಿ ಈಗಾಗಲೇ ತೀವ್ರ ನಷ್ಟ ಅನುಭವಿಸಿರುವ ವ್ಯಾಪಾರಸ್ಥರು, ನವರಾತ್ರಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ವ್ಯಾಪಾರದ ನಿರೀಕ್ಷೆ ಇತ್ತು. ಆದರೆ ಈ ಮಹತ್ವದ ಸಮಯದಲ್ಲಿಯೇ ಮತ್ತೆ 2 ದಿನ ಅಂಗಡಿ ಮುಂಗಟ್ಟು ಮುಚ್ಚಲು ಆದೇಶ ನೀಡಿರುವುದು ಅವರ ನಿರೀಕ್ಷೆಗೆ ತಣ್ಣೀರೆರಚಿದೆ. ಜಿಲ್ಲಾಡಳಿತದ ಆದೇಶಕ್ಕೆ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ನಷ್ಟವನ್ನು ಭರಿಸಿಕೊಡುವಂತೆ ಒತ್ತಾಯಿಸಿದ್ದಾರೆ. ಕೃಷಿ ಸಂಬಂಧಿತ ಕೆಲಸಗಳಿಗೂ ರೈತರು ಪಟ್ಟಣಕ್ಕೆ ಬಾರದಂತೆ ಸೂಚನೆ ನೀಡಲಾಗಿದೆ. ಜನಸಾಮಾನ್ಯರು, ರೈತರು, ವ್ಯಾಪಾರಸ್ಥರಿಗೆ ತೊಂದರೆ ಕೊಡುತ್ತಿರುವುದಕ್ಕೆ ಜಿಲ್ಲಾಡಳಿತ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಜಿಲ್ಲಾಡಳಿತ ತುಘಲಕ್ ದರ್ಬಾರ್ ನಡೆಸುತ್ತಿದೆ ಇದೆ ಎಂದು ಟೀಕಿಸಲಾಗುತ್ತಿದೆ. ಹೀಗಾಗಿ ಎರಡು ದಿನ ನಿರ್ಬಂಧ ವಿಧಿಸಲಾಗಿದ್ದು, ಭಕ್ತರು ಸಹಕರಿಸುವಂತೆ ದೇವಸ್ಥಾನ ಸಮಿತಿ ಮನವಿ ಮಾಡಿದೆ. ರಾಷ್ಟ್ರಪತಿ ಆಗಮನದ ಹಿನ್ನೆಲೆಯಲ್ಲಿ ಶೃಂಗೇರಿಯಲ್ಲಿ ಮೂರು ಹೆಲಿಪ್ಯಾಡ್ಗಳನ್ನು ನಿರ್ಮಾಣ ಮಾಡಲಾಗಿದೆ. ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಹಲವು ವರ್ಷಗಳಿಂದ ಡಾಂಬರು ಕಾಣದ ರಸ್ತೆಗಳಿಗೆ ಹೊಸದಾಗಿ ಡಾಂಬರು ಮಾಡಿ ನಗರವನ್ನು ಸುಸಜ್ಜಿತಗೊಳಿಸಲಾಗಿದೆ. ರಾಷ್ಟ್ರಪತಿ ಭೇಟಿಯಿಂದ ಇದೊಂದು ಒಳ್ಳೆಯ ಕೆಲಸವಾಗಿದೆ ಎಂದು ಜನರು ನಿಟ್ಟುಸಿರುಬಿಡುತ್ತಿದ್ದಾರೆ.
from India & World News in Kannada | VK Polls https://ift.tt/3lhDp2I