ಒಗ್ಗಟ್ಟಿನ ಪ್ರತಿಭಟನೆಗೆ ಮಣಿದ ರಾಜ್ಯ ಸರ್ಕಾರ; ಕೆಜಿಎಫ್‌ ಪೊಲೀಸ್‌ ಜಿಲ್ಲೆ ಸ್ಥಳಾಂತರ ನಿರ್ಧಾರ ವಾಪಸ್

ಕೆಜಿಎಫ್‌: ನೂತನವಾಗಿ ರಚನೆಯಾಗಿರುವ ಜಿಲ್ಲೆಗೆ ಕೆಜಿಎಫ್‌ ಪೊಲೀಸ್‌ ಜಿಲ್ಲೆ ಸ್ಥಳಾಂತರಿಸುವ ಬದಲಿಗೆ ಹೊಸದಾಗಿ ಸಿಬ್ಬಂದಿ ನೇಮಿಸಿಕೊಳ್ಳಲು ಸರಕಾರ ಆದೇಶಿಸಿರುವುದು ಕೆಜಿಎಫ್‌ ಭಾಗದ ಜನರ ಸಂತಸಕ್ಕೆ ಕಾರಣವಾಗಿದೆ. ಕಳೆದ ಆಗಸ್ಟ್‌ ತಿಂಗಳಲ್ಲಿ ನೂತನ ಜಿಲ್ಲೆಗೆ ಕೆಜಿಎಫ್‌ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಸ್ಥಳಾಂತರ ಮಾಡುವ ಪ್ರಕ್ರಿಯೆಗೆ ಸರಕಾರ ಮುಂದಾಗಿತ್ತು. ಆದರೆ, ಕೆಜಿಎಫ್‌ ಪೊಲೀಸ್‌ ಜಿಲ್ಲೆ ಸ್ಥಳಾಂತರಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಕೆಜಿಎಫ್‌ ಪೊಲೀಸ್‌ ಜಿಲ್ಲೆ ಸ್ಥಳಾಂತರ ವಿರುದ್ಧದ ಹೋರಾಟಕ್ಕೆ ಪಕ್ಷಾತೀತವಾಗಿ ಎಲ್ಲ ಪಕ್ಷಗಳ ನಾಯಕರು, ವಿವಿಧ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ದ್ದರು. ಜತೆಗೆ ಸ್ಥಳಾಂತರ ವಿರೋಧಿಸಿ ಕೆಜಿಎಫ್‌ ಹಾಗೂ ಬಂಗಾರಪೇಟೆ ತಾಲೂಕುಗಳ ಬಂದ್‌ ನಡೆಸಲಾಗಿತ್ತು. ಇದರೊಂದಿಗೆ ಸರಕಾರ ಸ್ಥಳಾಂತರಕ್ಕೆ ಮುಂದಾದರೆ ಬೆಂಗಳೂರಿಗೆ ಮೆರವಣಿಗೆ ಜಾಥಾ ನಡೆಸುವ ಎಚ್ಚರಿಕೆಯನ್ನು ಶಾಸಕಿ ರೂಪಕಲಾ ಶಶಿಧರ್‌ ನೀಡಿದ್ದರು. ಈ ಎಲ್ಲ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಸರಕಾರ ಪೊಲೀಸ್‌ ಜಿಲ್ಲೆ ಸ್ಥಳಾಂತರ ಪ್ರಸ್ತಾವವನ್ನು ಕೈಬಿಟ್ಟಿದೆ. ಅದರಂತೆ ವಿಜಯನಗರ ಜಿಲ್ಲೆಗೆ ಅಗತ್ಯವಿರುವ ಸಿಬ್ಬಂದಿ ನೇಮಕಕ್ಕೆ ಅರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಕೆಲ ಸಿಬ್ಬಂದಿಯನ್ನು ಸಮೀಪದ ಬಳ್ಳಾರಿ ಜಿಲ್ಲೆಯಿಂದ ವರ್ಗಾವಣೆ ಮಾಡಿಕೊಳ್ಳಲು ಸಲಹೆ ನೀಡಲಾಗಿದೆ. ಪ್ರತಿಭಟನೆಗಳಿಗೆ ಮಣಿದ ಸರಕಾರ: ಕೆಜಿಎಫ್‌ ಪೊಲೀಸ್‌ ಜಿಲ್ಲೆ ಸ್ಥಳಾಂತರ ಮಾಡದಂತೆ ಶಾಸಕಿ ರೂಪಕಲಾ ಶಶಿಧರ್‌ ಅವರು ಹಲವು ಬಾರಿ ಮುಖ್ಯ ಮಂತ್ರಿಗಳು, ಗೃಹ ಮಂತ್ರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯ ದರ್ಶಿಗಳನ್ನು ಭೇಟಿ ಮಾಡಿ ಪೊಲೀಸ್‌ ಜಿಲ್ಲೆಯ ಪ್ರಾಮುಖ್ಯತೆ ಕುರಿತು ಮನವರಿಗೆ ಮಾಡಿಕೊಟ್ಟಿದ್ದರು. ಇದರೊಂದಿಗೆ ಸ್ಥಳಾಂತರ ಖಂಡಿಸಿ ಕೆಜಿಎಫ್‌ ನಗರದ ಗಾಂಧಿ ಪ್ರತಿಮೆ ಎದುರು ಒಂದು ದಿನಗಳ ಉಪವಾಸ ಸತ್ಯಾಗ್ರಹ ಸಹ ಹಮ್ಮಿ ಕೊಂಡಿದ್ದರು. ನಗರಸಭೆ ಅಧ್ಯಕ್ಷ ವಳ್ಳರ್‌ ಮುನಿಸ್ವಾಮಿ ಸ್ಥಳಾಂತರಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದರು. ಇದರೊಂದಿಗೆ ಕರ್ನಾಟಕ ದಲಿತ ಸಮಾಜ ಸೇನೆಯ ಅಧ್ಯಕ್ಷ ಸೂಲಿಕುಂಟೆ ಆನಂದ್‌ 138 ವರ್ಷಗಳ ಇತಿಹಾಸ ಹೊಂದಿರುವ ಪೊಲೀಸ್‌ ಠಾಣೆಯ ಮಹತ್ವದ ಕುರಿತು ವಿಡಿಯೋ ಮಾಡಿ ಡಿಐಜಿ ಪ್ರವೀಣ್‌ಸೂದ್‌ ಅವರಿಗೆ ಕಳುಹಿಸಿಕೊಟ್ಟಿದ್ದರು. ಜತೆಗೆ ಬೆಂಬಲಿಗರ ಜೊತೆ ಕೋಲಾರದ ಅಂಬೇಡ್ಕರ್‌ ಪ್ರತಿಮೆ ಮುಂಭಾಗದಲ್ಲಿ ಅರೆ ಬೆತ್ತಲೆ ಪ್ರತಿಭಟನೆ ಸಹ ನಡೆಸಿದ್ದರು. ಬಂದ್‌ಗೆ ವ್ಯಾಪಕ ಬೆಂಬಲ: ಕೆಜಿಎಫ್‌ ಪೊಲೀಸ್‌ ಜಿಲ್ಲೆ ಸ್ಥಳಾಂತರ ಖಂಡಿಸಿ ವಿವಿಧ ಸಂಘಟನೆಗಳು ಕರೆ ನೀಡಿದಂತಹ ಕೆಜಿಎಫ್‌ ಹಾಗೂ ಬಂಗಾರಪೇಟೆ ತಾಲೂಕುಗಳ ಬಂದ್‌ಗೆ ಎಲ್ಲ ವರ್ಗದವರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿತ್ತು.


from India & World News in Kannada | VK Polls https://ift.tt/3jGNvcf

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...