ಅಂಬಾವಿಲಾಸ ಅರಮನೆಯಲ್ಲಿ ಯದುವೀರ್‌ರಿಂದ ಖಾಸಗಿ ದರ್ಬಾರ್; ಇಲ್ಲಿದೆ ದರ್ಬಾರ್ ಕುರಿತ ಪೂರ್ಣ ಮಾಹಿತಿ

ಮೈಸೂರು: ನಾಡಹಬ್ಬ ಇಂದಿನಿಂದ (ಗುರುವಾರ) ಆರಂಭವಾಗಲಿದೆ. ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾಗೆ ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರು ಅಧಿಕೃತವಾಗಿ ಚಾಲನೆ ನೀಡಿದರೆ ಇತ್ತ ಅಂಬಾವಿಲಾಸ ಅರಮನೆಯಲ್ಲಿ ನಡೆಯಲಿದ್ದು, ಸಿಂಹಾಸನರೋಹಣ ಖಾಸಗಿ ದರ್ಬಾರ್ ನಡೆಸಲಿದ್ದಾರೆ. ಆ ಮೂಲಕ ಸಾಂಸ್ಕೃತಿಕ ನಗರಿ ಮೈಸೂರಿನ ಅರಮನೆ ಆವರಣದಲ್ಲಿ ಗತಕಾಲದ ವೈಭವ ಮರುಕಳಿಸಲಿದೆ. ನವರಾತ್ರಿ ಮೊದಲ ದಿನವಾದ ಇಂದು ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್‌ ಪ್ರಯುಕ್ತ ಬೆ.4.30 ರಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿದ್ದು, ಮುಂಜಾನೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಎಣ್ಣೆ ಶಾಸ್ತ್ರ ಸಂಪ್ರದಾಯ ನಡೆದಿದೆ. ಬೆಳಗ್ಗೆ 6 ರಿಂದ ದರ್ಬಾರ್‌ ಹಾಲ್‌ನಲ್ಲಿ ಜೋಡಿಸಲಾದ ಸಿಂಹಾಸನಕ್ಕೆ ವಜ್ರ ಖಚಿತ ಸಿಂಹದ ತಲೆ ಜೋಡಣೆ ಮಾಡಲಾಗಿದ್ದು, ಬೆ.7.45ರಿಂದ ಚಾಮುಂಡಿ ತೊಟ್ಟಿಯಲ್ಲಿ ಯದುವೀರ್‌ ಅವರಿಗೆ ಕಂಕಣಧಾರಣೆ ನಡೆಯಲಿದೆ. ಬೆಳಗ್ಗೆ 11.45 ರಿಂದ 12.15 ರ ನಡುವಿನ ಧನುರ್‌ ಲಗ್ನದಲ್ಲಿ ಯದುವೀರ್‌ ಅವರು ಸಿಂಹಾಸನರೋಹಣ ಮಾಡಿ ಖಾಸಗಿ ದರ್ಬಾರ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ. ಅರಮನೆಯ ಚಾಮುಂಡಿ ತೊಟ್ಟಿಯಿಂದ ಕನ್ನಡಿ ತೊಟ್ಟಿಗೆ ಹೋಗಿ ಬಿಜಯ ಆಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ರಾಜಗಾಂಭೀರ್ಯದಿಂದ ಸಿಂಹಾನದ ಕಡೆ ಹೆಜ್ಜೆ ಇಡುತ್ತಿದ್ದಂತೆ ಇತ್ತ ವಂಧಿ ಮಾಗಧರು ರಾಜಾಧಿರಾಜ, ರಾಜ ಮಾರ್ತಾಂಡ, ರಾಜ ಕುಲತಿಲಕ, ರಾಜ ಮಾರ್ತಾಂಡ, ಯದುವೀರ್ ಮಹಾರಾಜ್‌ ಕೀ ಬಹು ಪರಾಕ್, ಬಹು ಪರಾಕ್ ಎಂದು ಮೈಸೂರಿನ ಅಂಬಾ ವಿಲಾಸ ಅರಮನೆಯಲ್ಲಿ ಕೆಲವೇ ಕ್ಷಣಗಳಲ್ಲಿ ಬಹುಪರಾಕ್ ಕೂಗಲಿದ್ದಾರೆ. ಹಿಂದೆ ರಾಜ ಮಹಾರಾಜರು ನಡೆಸುತ್ತಿದ್ದ ದರ್ಬಾರ್‌ ಮಾದರಿಯಲ್ಲೇ ಇಂದಿಗೂ ದಸರೆಯ ಸಂದರ್ಭದಲ್ಲಿ ಸಂಪ್ರದಾಯ ಬದ್ಧವಾಗಿ ಅರಮನೆಯಲ್ಲಿ ರಾಜವಂಶಸ್ಥರು ಖಾಸಗಿ ದರ್ಬಾರ್ ನಡೆಸುತ್ತಿದ್ದಾರೆ. ಈ ವರ್ಷ ಏಳನೇ ಬಾರಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಲಿದ್ದು, ಸಿಂಹಾಸನದ ಬಳಿ ತೆರಳಿದ ನಂತರ ಯದುವೀರ್ ಸಿಂಹಾಸನಕ್ಕೆ ಮೂರು ಬಾರಿ ಪ್ರದಕ್ಷಿಣೆ ಹಾಕಿ, ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಮಂಗಳಾರತಿ ಮಾಡಲಿದ್ದಾರೆ. ಸಿಂಹಾಸನದ ಪಕ್ಕದಲ್ಲೇ ಕುಳಿತು ನವಗ್ರಹ ಪೂಜೆ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಿ, ನಂತರ ಅವರು ಸಿಂಹಾಸನಾರೂಢರಾಗಲಿದ್ದಾರೆ. ಇದೇ ವೇಳೆ ಪತ್ನಿ ತ್ರಿಷಿಕಾ ಕುಮಾರಿ ಯದುವೀರ್ ಪಾದಗಳಿಗೆ ಪುಷ್ಪಾರ್ಚನೆ ಮಾಡಿದ ಬಳಿಕ ದಿವಾನರು ಸಿಂಹಾಸನದ ಮುಂದೆ ನಿಂತು ನಡುಬಾಗಿಸಿ ವಂದಿಸುತ್ತಾರೆ. ಇದಾದ ನಂತರ ಅರಮನೆಯ ದೇವಸ್ಥಾನಗಳು, ಚಾಮುಂಡಿ ಬೆಟ್ಟ ಸೇರಿದಂತೆ ಹಲವು ದೇವಸ್ಥಾನಗಳಿಂದ ತಂದಿದ್ದ ಪ್ರಸಾದವನ್ನು ಒಡೆಯರ್‍ಗೆ ನೀಡಲಾಗುತ್ತದೆ. ಈ ವೇಳೆ ಎಲ್ಲ ಪ್ರಸಾದವನ್ನು ಶ್ರದ್ಧಾ ಭಕ್ತಿಯಿಂದ ಯದುವೀರ್ ಸ್ವೀಕರಿಸುತ್ತಾರೆ. ನಂತರ ಮೈಸೂರು ರಾಜ್ಯ ಗೀತೆಯನ್ನು ನುಡಿಸಲಾಗುತ್ತದೆ. ಈ ವೇಳೆ ರತ್ನ ಖಚಿತ ಸಿಂಹಾಸನದ ಮೇಲೆ ನಿಂತ ಯದುವೀರ್ ಸೆಲ್ಯೂಟ್ ಮಾಡಿ ರಾಜ್ಯ ಗೀತೆಗೆ ಗೌರವ ಸಲ್ಲಿಸಲಿದ್ದಾರೆ. ರಾಜ್ಯ ಗೀತೆ ಮುಗಿದ ನಂತರ ಸಿಂಹಾಸನದಿಂದ ಇಳಿದು ಖಾಸಗಿ ದರ್ಬಾರನ್ನು ಮುಕ್ತಾಯಗೊಳಿಸುತ್ತಾರೆ. ಯದುವೀರ್ ಅವರು ಖಾಸಗಿ ದರ್ಬಾರ್ ನಡೆಸುವ ಮುನ್ನ ಅರಮನೆಯಲ್ಲಿ ಬೆಳಗಿನ ಜಾವದಿಂದಲೇ ಪೂಜಾ ವಿಧಿ ವಿಧಾನಗಳು ಜರುಗುತ್ತವೆ. ಮಂಗಳ ಸ್ನಾನ ನೆರವೇರಿಸಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಯದುವೀರ್ ಅವರಿಗೆ ಕಂಕಣ ಧಾರಣೆ ಮಾಡಲಾಗುತ್ತದೆ. ಇದಾದ ಬಳಿಕ ಆರಮನೆಗೆ ಪಟ್ಟದ ಆನೆ, ಕುದರೆ, ಹಸುವನ್ನು ಕರೆಸಿ ಪೂಜೆ ಸಲ್ಲಿಸಲಾಗುತ್ತದೆ.


from India & World News in Kannada | VK Polls https://ift.tt/3ljhLLD

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...