ಬೆಂಗಳೂರು: ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯ ವಿದ್ರಾವಕ ಎಂದು ಮಾಜಿ ಸಿಎಂ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಸರಣಿ ಟ್ವೀಟ್ಗಳನ್ನು ಮಾಡಿದ ಅವರು, ಈ ಘಟನೆಯನ್ನು ಸರ್ಕಾರ ತಡೆಯಬಹುದಿತ್ತು. ಮೊದಲೇ ಆ ಕುಟುಂಬಕ್ಕೆ ಪರಿಹಾರ, ಅನುಕಂಪದ ಉದ್ಯೋಗ ನೀಡಿದ್ದಿದ್ದರೆ ಮೂರು ಅಮೂಲ್ಯ ಜೀವಗಳು ಉಳಿಯುತ್ತಿದ್ದವು. ಇದು 'ಕೊಲೆಗೆಡುಕ ಸರಕಾರ' ಎಂದು ಕಿಡಿಕಾರಿದ್ದಾರೆ. ಸರ್ಕಾರ ಎಲ್ಲಾ ದುಂದು ವೆಚ್ಚ, ಲೂಟಿ ನಿಲ್ಲಿಸಿ ಸರಕಾರ ಇಂಥವರ ನೆರವಿಗೆ ಧಾವಿಸಬೇಕಿತ್ತು. ಇಂತಹ ಪ್ರಕರಣಗಳ ಇತ್ಯರ್ಥಕ್ಕೆ ಮೊದಲ ಆದ್ಯತೆ ನೀಡಬೇಕಿತ್ತು. ರಾಜ್ಯ ಸರಕಾರ ಪೂರ್ಣ ವಿಫಲವಾಗಿದೆ ಹಾಗೂ ಅಧಿಕಾರಿಗಳ ಹೊಣೆಗೇಡಿತನ ಎದ್ದು ಕಾಣುತ್ತದೆ. ಕೂಡಲೇ ಸಂಬಂಧಪಟ್ಟ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಸ್ವತಃ ಮುಖ್ಯಮಂತ್ರಿಗಳೇ ಈ ಬಗ್ಗೆ ಗಮನ ಹರಿಸಿ ಕೊರೋನ ಸೋಂಕಿಗೆ ಬಲಿಯಾದ ಸಾರಿಗೆ ನೌಕರರ ಕುಟುಂಬಗಳಿಗೆ ನೇರವಾಗಿ, ಮುಂದಿನ ಅನಾಹುತಗಳನ್ನು ತಪ್ಪಿಸಬೇಕು ಎಂದು ನಾನು ಅವರನ್ನು ಒತ್ತಾಯ ಮಾಡುತ್ತೇನೆ ಎಂದು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮತ್ತೊಂದು ಆತ್ಮಹತ್ಯೆ ದುರಂತ ನಡೆದಿದೆ. ನೆಲಮಂಗಲದ ಮಾದನಾಯಕನಹಳ್ಳಿ ಸಮೀಪದ ಪ್ರಕೃತಿ ಬಡಾವಣೆ ತಾಯಿ, ಮಗ ಮತ್ತು ಮಗಳು ನೇಣು ಹಾಕಿಕೊಂಡು ಸಾವಿಗೀಡಾಗಿದ್ದಾರೆ. ಪತಿಯ ಸಾವಿನಿಂದ ಖಿನ್ನರಾಗಿದ್ದ ವಸಂತ (40), ಮಗ ಯಶವಂತ್ (15) ಮತ್ತು ನಿಶ್ಚಿತಾ (6) ಸಾವಿಗೆ ಶರಣಾದ ದುರ್ದೈವಿಗಳು. ಒಂದೇ ಕುಟುಂಬದ ಐವರು ಮೃತಪಟ್ಟ ಮನಕಲಕುವ ಘಟನೆ ಮಾಸುವ ಮುನ್ನವೇ ನಗರದಲ್ಲಿ ಈ ಘಟನೆ ವರದಿಯಾಗಿದೆ. ಪೀಣ್ಯ ಡಿಪೋದಲ್ಲಿ ಬಿಎಂಟಿಸಿ ನಿರ್ವಾಹಕ-ಚಾಲಕರಾಗಿದ್ದ ಪ್ರಸನ್ನ ಕುಮಾರ್ ಅವರು ಕಳೆದ ವರ್ಷ ಕೊರೊನಾ ವೈರಸ್ ಸೋಂಕಿನಿಂದ ಮೃತಪಟ್ಟಿದ್ದರು. ಪತಿಯ ಸಾವಿನ ಬಳಿಕ ಪತ್ನಿ ವಸಂತ ತೀವ್ರ ಖಿನ್ನತೆಗೆ ಒಳಗಾಗಿದ್ದರು. ಜತೆಗೆ ಗಂಡ ಹೆಂಡತಿ ಇಬ್ಬರೂ ಬ್ಯಾಂಕ್ ಮತ್ತು ಕೈಸಾಲಗಳನ್ನು ಮಾಡಿ ಕನಸಿನ ಮನೆ ಕಟ್ಟಿಸಿದ್ದರು.
from India & World News in Kannada | VK Polls https://ift.tt/3FbIq4U