'ಧೋನಿ ಯುಗಾಂತ್ಯ' ಸ್ಲೋ ಇನಿಂಗ್ಸ್ ಆಡಿ ಸಿಕ್ಕಾಪಟ್ಟೆ ಟ್ರೋಲಾದ ಸಿಎಸ್‌ಕೆ ನಾಯಕ!

ದುಬೈ: ಹದಿನಾಲ್ಕನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್‌) ಟೂರ್ನಿ ಆರಂಭವಾದಾಗಿನಿಂದಲೂ ಚೆನ್ನೈ ಸೂಪರ್‌ ಕಿಂಗ್ಸ್ ನಾಯಕ ಎಂಎಸ್‌ ಧೋನಿಯ ವಿಶೇಷ ಇನಿಂಗ್ಸ್‌ ಅನ್ನು ಕಣ್ತುಂಬಿಸಿಕೊಳ್ಳಲು ಕೋಟ್ಯಂತರ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಆದರೆ, ಇಲ್ಲಿಯವರೆಗೂ ಅಭಿಮಾನಿಗಳ ಆಸೆ ಈಡೇರಿಸಲು ಧೋನಿಯಿಂದ ಸಾಧ್ಯವಾಗಿಲ್ಲ. ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಸೋಮವಾರ ರಾತ್ರಿ ನಡೆದಿದ್ದ ಪಂದ್ಯದಲ್ಲಿ 10ನೇ ಓವರ್‌ನಲ್ಲಿಯೇ ಕ್ರೀಸ್‌ಗೆ ಬಂದಿದ್ದ , ದೊಡ್ಡ ಇನಿಂಗ್ಸ್‌ ಆಡಲು ಅವಕಾಶವಿತ್ತು. ಆದರೆ, ಸಿಕ್ಕ ಅವಕಾಶವನ್ನು ಸಿಎಸ್‌ಕೆ ನಾಯಕ ಕೈಚೆಲ್ಲಿಕೊಂಡರು. 27 ಎಸೆತಗಳನ್ನು ಎದುರಿಸಿದ್ದ ಧೋನಿ, ಕೇವಲ 18 ರನ್‌ಗಳಿಗೆ ಸೀಮಿತರಾಗಿದ್ದರು. ಆದರೆ, ಅವರಿಂದ ಒಂದೇ ಒಂದು ಬೌಂಡರಿ ಅಥವಾ ಸಿಕ್ಸರ್‌ ಸಿಡಿಸಲು ಸಾಧ್ಯವಾಗಿರಲಿಲ್ಲ ಎಂಬುದು ಅಭಿಮಾನಿಗಳ ಪಾಲಿಗೆ ಬೇಸರದ ಸಂಗತಿ. ಅಷ್ಟೇ ಅಲ್ಲದೆ, ಅವರ ನಿಧಾನಗತಿಯ ಬ್ಯಾಟಿಂಗ್‌ನಿಂದ ಡೆತ್ ಓವರ್‌ಗಳಲ್ಲಿ ಫಾರ್ಮ್‌ನಲ್ಲಿರುವ ರವೀಂದ್ರ ಜಡೇಜಾ ಮತ್ತು ಡ್ವೇನ್‌ ಬ್ರಾವೊ ಅವರಿಗೆ ಆಡುವ ಅವಕಾಶ ಸಿಕ್ಕಿರಲಿಲ್ಲ. 20ನೇ ಓವರ್‌ವರೆಗೂ ಕ್ರೀಸ್‌ನಲ್ಲಿಯೇ ಉಳಿದಿದ್ದ ಎಂಎಸ್‌ ಧೋನಿ ಸಿಎಸ್‌ಕೆ ಮೊತ್ತವನ್ನು ಇಗ್ಗಿಸುವಲ್ಲಿ ವಿಫಲರಾದರು. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಧೋನಿ ವಿರುದ್ಧ ಸೋಶಿಯಲ್‌ ಮೀಡಿಯಾದಲ್ಲಿ ರೊಚ್ಚಿಗೆದ್ದಿದ್ದು, ಸಿಎಸ್‌ಕೆ ನಾಯಕನ ಯುಗ ಬಹುತೇಕ ಅಂತ್ಯವಾದಂತೆ ಎಂದು ಹೇಳಿದ್ದಾರೆ. ಪರ ಜವಾಬ್ದಾರಿಯುತ ಬ್ಯಾಟ್‌ ಮಾಡಿದ ಅಂಬಾಟಿ ರಾಯುಡು 43 ಎಸೆತಗಳಲ್ಲಿ ಎರಡು ಭರ್ಜರಿ ಸಿಕ್ಸರ್‌ ಹಾಗೂ ಐದು ಬೌಂಡರಿಯೊಂದಿಗೆ ಅಜೇಯ 55 ರನ್‌ ಗಳಿಸಿದರು. ಆ ಮೂಲಕ ಸಿಎಸ್‌ಕೆ ತನ್ನ ನಿಗದಿತ 20 ಓವರ್‌ಗಳಿಗೆ 5 ವಿಕೆಟ್‌ ನಷ್ಟಕ್ಕೆ 135 ರನ್‌ ದಾಖಲಿಸಲು ನೆರವಾದರು. ಪಂದ್ಯದ ಬಳಿಕ ಎಂಎಸ್‌ ಧೋನಿಯ ನಿಧಾನಗತಿಯ ಇನಿಂಗ್ಸ್‌ ಅನ್ನು ಅಭಿಮಾನಿಗಳು ಟ್ವಿಟರ್‌ನಲ್ಲಿ ಸಿಕ್ಕಾಪಟ್ಟೆ ಟ್ರೋಲ್‌ ಮಾಡಿದ್ದಾರೆ. ಆದರೆ, ಕೆಲವರು ದುಬೈ ಇಂಟರ್‌ನ್ಯಾಷನಲ್‌ ಸ್ಟೇಡಿಯಂ ಪಿಚ್‌ ಅನ್ನು ಟೀಕಿಸುವ ಮೂಲಕ ತಮ್ಮ ನೆಚ್ಚಿನ ಆಟಗಾರನನ್ನು ಸಮರ್ಥಿಸಿಕೊಂಡಿದ್ದಾರೆ. 'ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಪ್ರಮುಖ ಎದುರಾಳಿ ಮುಂಬೈ ಇಂಡಿಯನ್ಸ್ ಅಥವಾ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಅಲ್ಲವೇ ಅಲ್ಲ. ಅದು ಎಂಎಸ್‌ ಧೋನಿ ಮಾತ್ರ' ಎಂದು ಒಬ್ಬ ಅಭಿಮಾನಿ ಟ್ವಿಟರ್‌ನಲ್ಲಿ ಟ್ರೋಲ್‌ ಮಾಡಿದರೆ, ಮತ್ತೊಬ್ಬ ಅಭಿಮಾನಿ, 'ನೀವು ಕೊನೆಯಲ್ಲಿ ರವೀಂದ್ರ ಜಡೇಜಾಗೆ ಬ್ಯಾಟಿಂಗ್‌ಗೆ ಅವಕಾಶ ನೀಡಿದ್ದರೆ, ಅವರು ಕೇವಲ 20 ಎಸೆತಗಳಿಗೆ 50 ರನ್‌ ಸಿಡಿಸುತ್ತಿದ್ದರು," ಎಂದು ಹೇಳಿದ್ದಾರೆ. ಇನ್ನೊಬ್ಬ ಅಭಿಮಾನಿ "ಚೆನ್ನೈ ಸೂಪರ್ ಕಿಂಗ್ಸ್‌ ತಂಡದಲ್ಲಿ ಎಂಎಸ್‌ ಧೋನಿ ಯುಗ ಅಂತ್ಯವಾಗುತ್ತಿದೆ," ಎಂದು ಹೇಳಿದ್ದಾರೆ. ಅದೇ ರೀತಿ ಮತ್ತೊಬ್ಬ ಅಭಿಮಾನಿ, "ಸ್ಟ್ರೈಕ್‌ ರೇಟ್‌ ವಿಷಯದಲ್ಲಿ ನಂ.1 ಆಟಗಾರ ಆಗಿರುವ ಎಂಎಸ್‌, ಚೇತೇಶ್ವರ್‌ ಪೂಜಾರ ಅವರ ದಾಖಲೆಯನ್ನೂ ಮುರಿಯಲಿದ್ದಾರೆ," ಎಂದು ಟ್ರೋಲ್‌ ಮಾಡಿದ್ದಾರೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಪರ ಅತ್ಯುತ್ತಮ ಬೌಲ್‌ ಮಾಡಿದ ಅಕ್ಷರ್‌ ಪಟೇಲ್‌ 4 ಓವರ್‌ಗಳಿಗೆ ಕೇವಲ 18 ರನ್‌ ನೀಡಿ ಎರಡು ವಿಕೆಟ್‌ಗಳನ್ನು ತನ್ನ ಖಾತೆಗೆ ಹಾಕಿಕೊಂಡಿದ್ದಾರೆ. ಎನ್ರಿಕ್‌ ನೊರ್ಕಿಯಾ, ಆವೇಶ್‌ ಖಾನ್‌, ಆರ್‌ ಅಶ್ವಿನ್‌ ತಲಾ ಒಂದೊಂದು ವಿಕೆಟ್‌ ಜೇಬಿಗಿಳಿಸಿದ್ದಾರೆ. ಬಳಿಕ 137 ರನ್‌ ಸಾಧಾರಣ ಗುರಿ ಹಿಂಬಾಲಿಸಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಪರ ಓಪನರ್‌ಗಳಾದ ಪೃಥ್ವಿ ಶಾ ಹಾಗೂ ಶಿಖರ್ ಧವನ್‌ ಜೋಡಿ ಆರಂಭದಲ್ಲಿ ಅಬ್ಬರಿಸಿದ್ದರು. ಅದರಂತೆ ಕೇವಲ 12 ಎಸೆತಗಳಲ್ಲಿ ಪೃಥ್ವಿ 18 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರೆ, ಶಿಖರ್‌ ಧವನ್‌ 35 ಎಸೆತಗಳಲ್ಲಿ ಎರಡು ಸಿಕ್ಸರ್‌ ಹಾಗೂ ಮೂರು ಬೌಂಡರಿಯೊಂದಿಗೆ 39 ರನ್‌ ಚೆಚ್ಚಿದ್ದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್‌ ಅಯ್ಯರ್‌(2), ರಿಷಭ್‌ ಪಂತ್‌(15), ರಿಪಿಲ್‌ ಪಟೇಲ್‌(18) ಅವರು ಕೊನೆಯವರೆಗೂ ಕ್ರೀಸ್‌ನಲ್ಲಿ ನಿಂತು ತಂಡವನ್ನು ಗೆಲ್ಲಿಸುವಲ್ಲಿ ವಿಫಲರಾದರು. ಆದರೆ, ಡೆತ್‌ ಓವರ್‌ಗಳಲ್ಲಿ ಸ್ಪೋಟಕ ಬ್ಯಾಟಿಂಗ್‌ ಪ್ರದರ್ಶನ ತೋರಿದ ಶಿಮ್ರಾನ್‌ ಹೆಟ್ಮಾಯೆರ್‌ ಕೇವಲ 18 ಎಸೆತಗಳಲ್ಲಿ ಒಂದು ಸಿಕ್ಸರ್‌ ಹಾಗೂ ಎರಡು ಬೌಂಡರಿಯೊಂದಿಗೆ ಅಜೇಯ 28 ರನ್‌ ಗಳಿಸಿ ಡೆಲ್ಲಿ ಕ್ಯಾಪಿಟಲ್ಸ್‌ಗೆ 3 ವಿಕೆಟ್‌ ಗೆಲುವಿನ ಮಾಲೆ ತೊಡಿಸಿದರು. ಈ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್‌ 20 ಅಂಕಗಳೊಂದಿಗೆ ಪಾಯಿಂಟ್ಸ್‌ ಟೇಬಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ತಂಡವನ್ನು ಹಿಂದಿಕ್ಕಿ ಅಗ್ರ ಸ್ಥಾನವನ್ನು ಅಲಂಕರಿಸಿತು.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3DatfXU

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...