
ಹೊಸದಿಲ್ಲಿ: ಮುಂದಿನ 2022ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೆಗಾ ಹರಾಜು ಡಿಸೆಂಬರ್ ತಿಂಗಳಲ್ಲಿ ನಡೆಯಲಿದ್ದು, ತಂಡಗಳು ತಮ್ಮ ಆಟಗಾರರ ಪಟ್ಟಿ ನೀಡಲು ನವೆಂಬರ್ 30 ಕೊನೆಯ ದಿನಾಂಕವಾಗಿದೆ ಎಂದು ವರದಿಯಾಗಿದೆ. ಇದರ ನಡುವೆ ಒಂದು ಫ್ರಾಂಚೈಸಿ ಗರಿಷ್ಠ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಬಹುದಾಗಿದೆ. ಉಳಿಸಿಕೊಳ್ಳುವ ನಾಲ್ವರು ಆಟಗಾರರನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಆಟಗಾರರು ಮೆಗಾ ಹರಾಜಿಗೆ ಬರಲಿದ್ದಾರೆ. ಅಂದಹಾಗೆ ಐಪಿಎಲ್ ಟೂರ್ನಿಯಲ್ಲಿ ಅತ್ಯಂತ ಯಶಸ್ವಿ ತಂಡ ತಂಡ ತನ್ನ ನಾಯಕ ಹಾಗೂ ವೇಗಿ ಅವರನ್ನು ಉಳಿಸಿಕೊಂಡಿದೆ ಎಂದು ವರದಿಯಾಗಿದೆ. ವೆಸ್ಟ್ ಇಂಡೀಸ್ ಟಿ20 ತಂಡದ ನಾಯಕ ಹಾಗೂ ಸ್ಟಾರ್ ಆಲ್ರೌಂಡರ್ ಕೈರೊನ್ ಪೊಲಾರ್ಡ್ ಹಾಗೂ ಯುವ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಇಶಾನ್ ಕಿಶನ್ ಅವರನ್ನು ಮುಂಬೈ ಉಳಿಸಿಕೊಂಡಿದೆ ಎಂಬುದು ಕೂಡ ವರದಿಯಾಗಿದೆ. ಇನ್ನು ಭರ್ಜರಿ ಫಾರ್ಮ್ನಲ್ಲಿರುವ ಅವರನ್ನು ಹರಾಜಿನ ಮೂಲಕ ಮತ್ತೆ ತಂಡಕ್ಕೆ ಕರೆಸಿಕೊಳ್ಳುವ ಯೋಜನೆಯನ್ನು ಮುಂಬೈ ಹಾಕಿಕೊಂಡಿದೆ. ಗಿಲ್-ವೆಂಕಟೇಶ್ ಉಳಿಸಿಕೊಳ್ಳುವ ಬಗ್ಗೆ ಕೆಕೆಆರ್ ಮಾತುಕತೆ ಕೋಲ್ಕತಾ ನೈಟ್ ರೈಡರ್ಸ್ ತಂಡ ವೆಸ್ಟ್ ಇಂಡೀಸ್ ಆಟಗಾರರಾದ ಆಂಡ್ರೆ ರಸೆಲ್ ಹಾಗೂ ಸುನೀಲ್ ನರೇನ್ ಅವರನ್ನು ಉಳಿಸಿಕೊಳ್ಳಲು ಮುಂದಾಗಿದೆ ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. ಆದರೆ, ವರುಣ್ ಚಕ್ರವರ್ತಿ ಅವರ ಬಗ್ಗೆ ಇನ್ನೂ ಕೆಕೆಆರ್ ಚರ್ಚೆ ನಡೆಸುತ್ತಿದೆ. ಇದರ ನಡುವೆ ಶುಭಮನ್ ಗಿಲ್ ಹಾಗೂ ವೆಂಕಟೇಶ್ ಅಯ್ಯರ್ ಅವರನ್ನು ಉಳಿಸಿಕೊಳ್ಳುವ ಬಗ್ಗೆ ಕೋಲ್ಕತಾ ಫ್ರಾಂಚೈಸಿ ಇನ್ನೂ ಮಾತುಕತೆ ನಡೆಸುತ್ತಿದೆ ಎಂದು ವರದಿಯಾಗಿದೆ. ಆರಂಭಿಕ ಬ್ಯಾಟ್ಸ್ಮನ್ಗಳಾದ ಶುಭಮನ್ ಗಿಲ್ ಹಾಗೂ ವೆಂಕಟೇಶ್ ಅಯ್ಯರ್ ಅವರು 2021ರ ಐಪಿಎಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದರು. ಆ ಮೂಲಕ ಕೆಕೆಆರ್ ಫೈನಲ್ ತಲುಪಲು ಮಹತ್ತರ ಪಾತ್ರವನ್ನು ನಿರ್ವಹಿಸಿದ್ದರು. ಆರ್ಸಿಬಿ ಉಳಿಸಿಕೊಳ್ಳಬಹುದಾದ ನಾಲ್ವರು ಆಟಗಾರರನ್ನು ಹೆಸರಿಸಿದ ಚೋಪ್ರಾ ತಮ್ಮ ಅಧಿಕೃತ ಯೂಟ್ಯೂಬ್ ಚಾನೆಲ್ನಲ್ಲಿ ಅಪ್ಲೋಡ್ ಮಾಡಿರುವ ವಿಡಿಯೋದಲ್ಲಿ ಇತ್ತೀಚೆಗೆ ಮಾತನಾಡಿರುವ ಆಕಾಶ್ ಚೋಪ್ರಾ, ವಿರಾಟ್ ಕೊಹ್ಲಿ, ಯುಜ್ವೇಂದ್ರ ಚಹಲ್, ದೇವದತ್ ಪಡಿಕ್ಕ್, ಮೊಹಮ್ಮದ್/ಹರ್ಷಲ್ ಪಟೇಲ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೆಗಾ ಹರಾಜಿಗೆ ಉಳಿಸಿಕೊಳ್ಳಬಹುದೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. "ವಿರಾಟ್ ಕೊಹ್ಲಿ ಹಾಗೂ ಯುಜ್ವೇಂದ್ರ ಚಹಲ್ ಮೊದಲ ಎರಡು ಆಯ್ಕೆಗಳಾಗಿವೆ. ಉಳಿಸಿಕೊಳ್ಳಬಹುದಾದ ಇನ್ನುಳಿದ ಎರಡು ಸ್ಥಾನಗಳ ಬಗ್ಗೆ ಮಾತನಾಡುವುದಾದರೆ, ಮೊಹಮ್ಮದ್ ಸಿರಾಜ್ ಹಾಗೂ ದೇವದತ್ ಪಡಿಕ್ಕಲ್ ಅವರನ್ನು ಆಯ್ಕೆ ಮಾಡುತ್ತೇನೆ. ಇವರು ತಾನು ಉಳಿಸಿಕೊಳ್ಳಬಹುದಾದ ನಾಲ್ವರು ಆಟಗಾರರು. ಇದರ ಜೊತೆ ಹರ್ಷಲ್ ಪಟೇಲ್ ಬಗ್ಗೆಯೂ ನಾನು ಯೋಚಿಸುತ್ತೇನೆ," ಎಂದು ಹೇಳಿದರು. "ಮೊಹಮ್ಮದ್ ಸಿರಾಜ್ ಹಾಗೂ ಹರ್ಷಲ್ ಪಟೇಲ್ ಅವರ ನಡುವೆ ಟಾಸ್ ಹಾಕಬೇಕಾಗುತ್ತದೆ. ಇದರಲ್ಲಿ ಮೊಹಮ್ಮದ್ ಸಿರಾಜ್ ದೀರ್ಘ ಅವಧಿ ಆಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಆದರೆ, ಕಳೆದ 12 ತಿಂಗಳಿನಿಂದ ಹರ್ಷಲ್ ಪಟೇಲ್ ಅದ್ಭುತವಾಗಿ ಸುಧಾರಣೆ ಕಂಡಿದ್ದಾರೆ. ಅಂದಹಾಗೆ ನೀವು ಕಳೆದ ಮೂರು ಆವೃತ್ತಿಗಳನ್ನು ಗಮನಿಸಿ ಈ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ," ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ. ಮುಂದಿನ ಐಪಿಎಲ್ ಮೆಗಾ ಹರಾಜಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂವರು ಭಾರತೀಯ ಆಟಗಾರರನ್ನು ಉಳಿಸಿಕೊಂಡು, ಇನ್ನೊಂದು ಸ್ಥಾನದಲ್ಲಿ ವಿದೇಶಿ ಆಟಗಾರನನ್ನು ಉಳಿಸಿಕೊಳ್ಳಬಹುದು. ಬಹುಶಃ ವಿದೇಶಿ ಆಟಗಾರನ ಸ್ಥಾನದಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ಉಳಿಸಿಕೊಳ್ಳಬಹುದಾಗಿದೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3HTt9XW