ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಂಡ ಬಳಿಕ ರಾಜ್ಯದಲ್ಲಿ ದಾಖಲಾದ ಪ್ರಕರಣಗಳೆಷ್ಟು?

ಬೆಂಗಳೂರು: ರಾಜ್ಯದಲ್ಲಿ ಗೋಹತ್ಯೆಯನ್ನು ನಿಷೇಧಿಸಿ ಕಾಯ್ದೆ ಜಾರಿಗೆ ಬಂದ ಬಳಿಕ ಗೋಸಂಕ್ಷಣೆಗೆ ಸರ್ಕಾರ ಕೆಲವೊಂದು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಈ ನಿಟ್ಟಿನಲ್ಲಿ ಅಕ್ರಮ ಗೋಸಾಗಾಟದ ಮೇಲೆ ಕಣ್ಣಿಟ್ಟಿದ್ದು ಈವರೆಗೆ ರಾಜ್ಯದಲ್ಲಿ 400 ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಕರ್ನಾಟಕ ಜಾನುವಾರ ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಈಗಾಗಲೇ ರಾಜ್ಯದಲ್ಲಿ ಜಾರಿಗೊಂಡಿದೆ. ಜಾನುವಾರ ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ ಪ್ರಕಾರ, ಕರ್ನಾಟಕದಲ್ಲಿ ಯಾವುದೇ ವ್ಯಕ್ತಿ ಜಾನುವಾರ ಹತ್ಯೆ ಮಾಡಲು ಅಥವ ಹತ್ಯೆ ನಡೆಸುವವರಿಗೆ ಮಾರಾಟ ಮಾಡಲು ಅವಕಾಶವಿಲ್ಲ. ಕಾಯ್ದೆ ಜಾರಿಯ ಪರಿಣಾಮವಾಗಿ ರಾಜ್ಯ ಹಾಗೂ ಇತರ ರಾಜ್ಯಕ್ಕೆ ಜಾನುವಾರ ಸಾಗಾಣಿಕೆಯ ಮೇಲೂ ನಿರ್ಬಂಧ ಬಿದ್ದಿದೆ. ಆದರೆ ಕೃಷಿ ಹಾಗೂ ಪಶುಸಂಗೋಪನೆ ಕಾರಣಕ್ಕಾಗಿ ಸಾಗಣಿಕೆ ಮಾಡಲು ಅವಕಾಶ ನೀಡಲಾಗಿದೆ. ಹೀಗಿದ್ದರೂ ಅಕ್ರಮ ಗೋಸಾಗಾಟ ಪ್ರಕರಣಳು ರಾಜ್ಯದಲ್ಲಿ ನಡೆಯುತ್ತಿವೆ. ಕಾಯ್ದೆ ಉಲ್ಲಂಘಿಸಿ ಗೋಹತ್ಯೆ ಹಾಗೂ ಸಾಗಾಟ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾಯ್ದೆ ಜಾರಿಯ ಬಳಿಕ 400 ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಸದ್ಯ ಕಾಯ್ದೆಯನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು ಇದು ಬಗೆಹರಿದ ಬಳಿಕ ಮತ್ತಷ್ಟು ಬಿಗಿಯಾಗಿ ಕಾಯ್ದೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ಜಾರಿಗೆ ಬಂದ ಬಳಿಕ ರಾಜ್ಯದಲ್ಲಿ ಗೋವುಗಳ ಸಂಖ್ಯೆ ಹೆಚ್ಚಾಗುತ್ತಿವೆ. ಈ ನಿಟ್ಟಿನಲ್ಲಿ ಗೋವುಗಳ ಸಂರಕ್ಷಣೆಗಾಗಿ ಪ್ರತಿ ಜಿಲ್ಲೆಗಳಲ್ಲಿ ಗೋಶಾಲೆ ನಿರ್ಮಾಣಕ್ಕೆ ಈಗಾಗಲೇ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಆದರೆ ಕಾರಣಾಂತರಗಳಿಂದ ಗೋಶಾಲೆ ಆರಂಭ ವಿಳಂಬವಾಗುತ್ತಿದೆ. ಅಕ್ಟೋಬರ್‌ 2 ಕ್ಕೆ ಈ ಪ್ರಕ್ರಿಯೆಗೆ ಚಾಲನೆ ನೀಡಬೇಕಿತ್ತು. ಈಗಾಗಲೇ 22 ಜಿಲ್ಲೆಗಳಲ್ಲಿ ಸ್ಥಳ ಗುರುತಿಸುವ ಕಾರ್ಯ ಆರಂಭವಾಗಿದೆ. 50 ರಿಂದ 100 ಎಕರೆ ಜಾಗದಲ್ಲಿ ಗೋಶಾಲೆ ಮಾಡುವ ಉದ್ದೇಶ ಇದೆ. ಯಾರೂ ಬೇಕಾದರೂ ಗೋವುಗಳನ್ನು ತಂದು ಇಲ್ಲಿ ಬಿಡಬಹುದಾಗಿದೆ. ಗೋಶಾಲೆಗಳಲ್ಲಿ ಇರುವ ಪಶುಗಳ ಆರೋಗ್ಯ ನೋಡಿಕೊಳ್ಳಲು ಪಶುವೈದ್ಯರನ್ನು ನೇಮಕ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.


from India & World News in Kannada | VK Polls https://ift.tt/2ZYeVDX

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...