
ಚಂಡೀಗಡ: ನೀವು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ವರದಿಗಳು ಬಂದಿದ್ದು, ನಿಮ್ಮ ವಿರುದ್ಧ ಪಕ್ಷದಿಂದ ಏಕೆ ಕ್ರಮ ತೆಗೆದುಕೊಳ್ಳಬಾರದು ಎಂದು ವಿವರಣೆ ನೀಡುವಂತೆ ಸಂಸದೆ ಅವರಿಗೆ ನೋಟಿಸ್ ನೀಡಲಾಗಿದೆ. ಕೌರ್ ಅವರು ಕಾಂಗ್ರೆಸ್ ತೊರೆದು ಇತ್ತೀಚೆಗಷ್ಟೇ ಹೊಸ ಪಕ್ಷ ಘೋಷಿಸಿರುವ ಮಾಜಿ ಮುಖ್ಯಮಂತ್ರಿ ಅವರ ಪತ್ನಿ. ನಿಮ್ಮ ವಿರುದ್ಧ ಮಾಧ್ಯಮಗಳಲ್ಲಿ ಹಾಗೂ ಪಾಟಿಯಾಲದಲ್ಲಿನ ಪಕ್ಷದ ನಾಯಕರಿಂದ ನಿರಂತರವಾಗಿ ಆರೋಪಗಳು ಕೇಳಿಬರುತ್ತಿವೆ ಎಂದು ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ಚೌಧರಿ ಅವರು ಕೌರ್ ಅವರಿಗೆ ನೀಡಿರುವ ಪತ್ರದಲ್ಲಿ ಹೇಳಿದ್ದಾರೆ. 'ನಿಮ್ಮ ಗಂಡನ ಪಕ್ಷದ ಜತೆಯಲ್ಲಿ ಇದ್ದೀರಿ ಎಂಬ ಬಗ್ಗೆ ಕೂಡ ಮಾಧ್ಯಮಗಳಲ್ಲಿ ನಿಮ್ಮ ಬಹಿರಂಗ ಪ್ರಕಟಣೆಗಳು ನಮ್ಮ ಗಮನಕ್ಕೆ ಬಂದಿವೆ' ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಈ ತಿಂಗಳ ಆರಂಭದಲ್ಲಿ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷವನ್ನು ಸ್ಥಾಪಿಸಿದ್ದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಲ್ಲ 117 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುವುದಾಗಿ ಘೋಷಿಸಿದ್ದರು. ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದರೆ ಬಿಜೆಪಿ ಜತೆಗೆ ಸೀಟು ಹಂಚಿಕೆ ಮಾಡಿಕೊಳ್ಳುವ ಬಗ್ಗೆಯೂ ಪರಿಗಣಿಸಿದ್ದಾಗಿ ತಿಳಿಸಿದ್ದರು. ಈಗ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಕೇಂದ್ರ ಸರ್ಕಾರ ಪ್ರಕಟಿಸಿರುವುದರಿಂದ ಈ ಮೈತ್ರಿ ಈಡೇರುವ ಸಾಧ್ಯತೆ ಇದೆ. 'ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ತಾವು ನೀಡುವ ಹೇಳಿಕೆಗಳಿಗೆ ಯಾವಾಗಲೂ ಬದ್ಧರಾಗಿರುತ್ತಾರೆ. ನಾನು ನನ್ನ ಕುಟುಂಬದ ಜತೆಗಿದ್ದೇನೆ' ಎಂದು ಪ್ರೆಣೀತ್ ಕೌರ್ ಅವರು ತಮ್ಮ ಪತಿಯ ಹೊಸ ರಾಜಕೀಯ ಪಕ್ಷದಲ್ಲಿ ಸೇರಿಕೊಳ್ಳುವ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದರು. ಈಗ ಈ ಹೇಳಿಕೆಯನ್ನು ಉಲ್ಲೇಖಿಸಿರುವ ಕಾಂಗ್ರೆಸ್, ಏಳು ದಿನಗಳ ಒಳಗಾಗಿ ತಮ್ಮ ನಡೆ ಹಾಗೂ ನಿಲುವಿನ ಕುರಿತು ವಿವರಣೆ ಕೋರಿದೆ. ಶಿಮ್ಲಾದಲ್ಲಿ ಜನಿಸಿದ ಕೌರ್ ಅವರು ಪಾಟಿಯಾಲ ಕ್ಷೇತ್ರದ ಕಾಂಗ್ರೆಸ್ ಸಂಸದೆಯಾಗಿದ್ದಾರೆ. ಅವರು 2009 ರಿಂದ 2014ರ ಯುಪಿಎ ಸರ್ಕಾರದ ಅವಧಿಯಲ್ಲಿ ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವೆಯಾಗಿದ್ದರು.
from India & World News in Kannada | VK Polls https://ift.tt/3r95e0C