ಗುರುವಾರ ಸಚಿವ ಸಂಪುಟ ಸಭೆ: ಕೈಗೊಳ್ಳಬಹುದಾದ ಪ್ರಮುಖ ನಿರ್ಧಾರಗಳೇನು?

ಬೆಂಗಳೂರು: ಗುರುವಾರ ರಾಜ್ಯ ನಡೆಯಲಿದ್ದು, ಕೋವಿಡ್ ಮೂರನೇ ಅಲೆಯ ಸಿದ್ಧತೆಗೆ ಉಪಕರಣಗಳ ಖರೀದಿಗೆ ಅನುಮೋದನೆ ಹಾಗೂ ಆರ್‌ಎಸ್‌ಎಸ್‌ನ ರಾಷ್ಟ್ರೋತ್ಥಾನ ಪರಿಷತ್‌ಗೆ ಭೂಮಿ ಮಂಜೂರಾತಿ ಸೇರಿದಂತೆ ಇನ್ನಿತರ ಮಹತ್ವದ ವಿಚಾರಗಳ ಕುರಿತಾಗಿ ಚರ್ಚೆ ಮತ್ತು ಅನುಮೋದನೆಗಳು ಸಿಗುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೆ ವಿಧಾನಮಂಡಲ ಅಧಿವೇಶನ ಕುರಿತಾಗಿಯೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಗಳು ಇವೆ. ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ನಡೆಯಲಿರುವ ಪ್ರಮುಖ ಚರ್ಚೆಗಳು ಹಾಗೂ ಕೈಗೊಳ್ಳಬಹುದಾದ ಸಾಧ್ಯತೆ ಇರುವ ನಿರ್ಧಾರಗಳ ಕುರಿತಾಗಿ ಮಾಹಿತಿ ಇಲ್ಲಿದೆ.
  • ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ವಾಹನಗಳನ್ನು 41 ರೂ ಕೋಟಿ ಅಂದಾಜು ವೆಚ್ಚದಲ್ಲಿ ಖರೀದಿಸಲು ಅನುಮೋದನೆ ಸಾಧ್ಯತೆ
  • ನಬಾರ್ಡ್ ಪ್ರಾಯೋಜಿತ ಆರ್‌ಐಡಿಎಫ್ -27 ಯೋಜನೆಯಡಿ ಕೃಷಿ ವಿಜ್ಞಾನಗಳ ವಿವಿಗಳಿಗೆ ಅನುಮೋದನೆಗೊಂಡಿರುವ 79.66 ರೂ ಕೋಟಿ ಮೊತ್ತದ ಸಿವಿಲ್ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ಸಾಧ್ಯತೆ.
  • ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಜಮೀನು ಹಂಚಿಕೆ ನೀತಿಗೆ ತಿದ್ದುಪಡಿ ಮಾಡಲು ಅನುಮೋದನೆ ಸಾಧ್ಯತೆ.
  • ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಅಪರ ನಿಬಂಧಕರು ಹುದ್ದೆಗಳಿಗೆ ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ವೃಂದದ ಅಧಿಕಾರಿಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡುವ ಬಗ್ಗೆ ಅನುಮೋದನೆ ಸಾಧ್ಯತೆ.
  • ಕರ್ನಾಟಕ ಸಿವಿಲ್ ಸೇವೆಗಳು (ಪರಿವೀಕ್ಷಣೆ) (ತಿದ್ದುಪಡಿ) ನಿಯಮಗಳು, 2021ಕ್ಕೆ ಅನುಮೋದನೆ ಸಾಧ್ಯತೆ
  • ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ತಜ್ಞರಾದ ಡಾ. ಟಿ ಅಮರನಾಥ್ ಅವರನ್ನು ಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಲೋಕಾಯುಕ್ತರ ಶಿಫಾರಸ್ಸಿನಂತೆ ಸೇವೆಯಿಂದ ಕಡ್ಡಾಯ ನಿವೃತ್ತಿಗೊಳಿಸುವ ಹಾಗೂ 30 ರಷ್ಟು ಪಿಂಚಣಿಯನ್ನು ಶಾಶ್ವತವಾಗಿ ತಡೆಯಿಡಿಯುವ ದಂಡನೆ ವಿಧಿಸುವ ಬಗ್ಗೆ ನಿರ್ಧಾರ ಸಾಧ್ಯತೆ.
  • ಬೆಳಗಾವಿಯ ಬೈಲಹೊಂಗಲ, ಕಲಬುರಗಿಯ ಜೇವರ್ಗಿ, ಕೊಪ್ಪಳದ ಕುಷ್ಠಗಿಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ನಿರ್ಮಾಣ ಮತ್ತು ಚಿಕ್ಕಬಳ್ಳಾಪುರದ ಮಂಚೇನಹಳ್ಳಿಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಗೆ 93 ಕೋಟಿ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ಸಾಧ್ಯತೆ.
  • ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲ್ಲೂಕಿನ ತಾಲ್ಲೂಕು ಮಟ್ಟದ ಆಸ್ಪತ್ರೆ ಹಾಗೂ ಸಿಬ್ಬಂದಿ ವಸತಿಗೃಹಗಳ ನಿರ್ಮಾಣಕ್ಕಾಗಿ 27 ಕೋಟಿ ರೂ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ಸಾಧ್ಯತೆ.
  • ಕೋವಿಡ್ ಮೂರನೇ ಅಲೆಯ ಸಿದ್ಧತೆಗಾಗಿ 317 ಕೋಟಿ ಮೊತ್ತದ ಉಪಕರಣ ಮತ್ತು ಪರಿಕರಗಳನ್ನು ಖರೀದಿಸಲು 52 ಕೋಟಿ ರೂ ಮೊತ್ತದ ಸಿವಿಲ್ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಹೊರಡಿಸಿದ ಸರ್ಕಾರದ ಆದೇಶಕ್ಕೆ ಘಟನೋತ್ತರ ಅನುಮೋದನೆ ಸಿಗುವ ಸಾಧ್ಯತೆ.
  • ಬೆಂಗಳೂರು ನಗರ ಜಿಲ್ಲೆಯ ಯಲಹಂಕದ ಹೆಸರುಘಟ್ಟದ ಹುರಳಿಚಿಕ್ಕನಹಳ್ಳಿ ಗ್ರಾಮದಲ್ಲಿ 9.32 ಎಕರೆ ಜಮೀನು ಶೈಕ್ಷಣಿಕ ಉದ್ದೇಶಕ್ಕಾಗಿ ರಾಷ್ಟ್ರೋತ್ಥಾನ ಪರಿಷತ್‌ಗೆ ಮಂಜೂರಾತಿ ಮಾಡಲು ಅನುಮೋದನೆ ಸಾಧ್ಯತೆ
  • ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮತ್ತು ಮಂಗಳೂರು ತಾಲ್ಲೂಕಿನ ಉಳಾಯಿ ಬೆಟ್ಟು ಮತ್ತು 14 ಹಳ್ಳಿಗಳಿಗೆ ಜಲಮಿಷನ್ ಯೋಜನೆಯಡಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 73.10 ರೂ ಕೋಟಿ ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ಸಾಧ್ಯತೆ.
  • ಯಾದಗಿರಿ ಜಿಲ್ಲೆಯ ಎಲ್ಲಾ ಗ್ರಾಮೀಣ ವಸತಿ ಹಾಗೂ 3 ನಗರದ ಸ್ಥಳೀಯ ಸಂಸ್ಥೆಗಳಾದ ಕಕ್ಕೆರಾ, ಕೆಂಭಾವಿ, ಹುಣಸಗಿ ಪಟ್ಟಣಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆಗೆ 1358.62 ಕೋಟಿ ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡುವ ಸಾಧ್ಯತೆ.
  • ಬೆಳಗಾವಿಯ ಗೋಕಾಕ್ ಘಟ್ಟಿ ಬಸವಣ್ಣ ಕುಡಿಯುವ ನೀರು ಸರಬರಾಜು ಯೋಜನೆಗೆ 990 ಕೋಟಿ ಮೊತ್ತಕ್ಕೆ ಘಟನೋತ್ತರ ಅನುಮೋದನೆ ಸಾಧ್ಯತೆ


from India & World News in Kannada | VK Polls https://ift.tt/3xlFZsS

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...