ಬೆಂಗಳೂರು: ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವಿನ ಹೆಗ್ಗಳಿಕೆಯನ್ನು ಪಡೆದುಕೊಳ್ಳಲು ಕಾಂಗ್ರೆಸ್ನಲ್ಲಿ ಕಲಹ ಶುರುವಾಗಿದೆ ಎಂದು ಟಾಂಗ್ ನೀಡಿದೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಬಿಜೆಪಿ, ಉಪಚುನಾವಣೆ ಫಲಿತಾಂಶದಿಂದ ಕೇಂದ್ರ ಸರ್ಕಾರ ತೈಲ ಬೆಲೆ ಇಳಿಸಿದೆ ಎಂಬುದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ವ್ಯಾಖ್ಯಾನವಾಗಿದೆ. ಡಿಕೆಶಿ ಅವರೇ ಫಲಿತಾಂಶ ಪ್ರಭಾವ ಬೀರಿರುವುದು ಕಾಂಗ್ರೆಸ್ ಪಕ್ಷದಲ್ಲಿ. ಗೆಲುವಿನ ಯಶಸ್ಸಿಗೆ ಯಾರು ಪಿತಾಮಹ ಎಂಬ ಹೆಗ್ಗಳಿಕೆ ಪಡೆಯುವುದಕ್ಕಾಗಿ ಕಾಂಗ್ರೆಸ್ ಪಕ್ಷದಲ್ಲಿ ಈಗಾಗಲೇ ಕಲಹ ಆರಂಭಗೊಂಡಿದೆ ಎಂದಿದೆ. ಹಾನಗಲ್ ಉಪಚುನಾವಣೆ ಫಲಿತಾಂಶದ ಫಲವಾಗಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಇನ್ನೂ ಬೆಲೆ ಇಳಿಕೆಯಾಗಬೇಕಾದ ಪದಾರ್ಥಗಳು ಬಹಳಷ್ಟಿವೆ. ಗ್ಯಾಸ್, ಅಡುಗೆ ಎಣ್ಣೆ, ದಿನಸಿ ಇತ್ಯಾತಿ. ಜನರು ಬಿಜೆಪಿಗೆ ತಕ್ಕ ಉತ್ತರ ಕೊಡುವ ದಿನಗಳು ಹತ್ತಿರ ಬರುತ್ತಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದರು. ಡಿಕೆ ಶಿವಕುಮಾರ್ ಅವರ ಈ ರೀತಿಯ ಹೇಳಿಕೆಗೆ ಬಿಜೆಪಿ ಟ್ವಿಟ್ಟರ್ ಮೂಲಕ ಗೆಲುವಿನ ಯಶಸ್ಸಿಗೆ ಯಾರು ಪಿತಾಮಹ ಎಂಬ ಹೆಗ್ಗಳಿಕೆ ಪಡೆಯುವುದಕ್ಕಾಗಿ ಕಾಂಗ್ರೆಸ್ ಪಕ್ಷದಲ್ಲಿ ಈಗಾಗಲೇ ಕಲಹ ಆರಂಭಗೊಂಡಿದೆ ಎಂದು ತಿರುಗೇಟು ನೀಡಿದೆ. ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಿದ ಬೆನ್ನಿಗೆ ರಾಜ್ಯ ಸರಕಾರವೂ ಇಂಧನದ ಬೆಲೆ ಇಳಿಕೆ ಮಾಡಲು ತೀರ್ಮಾನಿಸಿದೆ. ಕೇಂದ್ರ ಸರಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 5 ರೂ., ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ. ಇಳಿಕೆ ಮಾಡಿತ್ತು. ರಾಜ್ಯ ಸರಕಾರಗಳಿಗೂ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಅನ್ನು ಕಡಿತಗೊಳಿಸುವಂತೆ ಕೇಂದ್ರ ಸರಕಾರ ಆಗ್ರಹಿಸಿತ್ತು.ಇದೀಗ ರಾಜ್ಯ ಸರಕಾರವೂ ಡೀಸೆಲ್ ಮತ್ತು ಪೆಟ್ರೋಲ್ ದರವನ್ನು ತಲಾ 7 ರೂ. ಕಡಿತಗೊಳಿಸಲು ನಿರ್ಧರಿಸಿದೆ.
from India & World News in Kannada | VK Polls https://ift.tt/3bHS81g