ಓಮಿಕ್ರಾನ್ ಆತಂಕ: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಡಾ. ಕೆ ಸುಧಾಕರ್

ಬೆಂಗಳೂರು: ಆತಂಕದ ಹಿನ್ನೆಲೆಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆರೋಗ್ಯ ಸಚಿವ ಡಾ. ತೆರಳಿ ಪರಿಶೀಲನೆ ನಡೆಸಿದ್ದಾರೆ. ಬುಧವಾರ ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ತೆರಳಿದ ಅವರು ಕೈಗೊಂಡ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ವಿದೇಶದಿಂದ ಬಂದ ಪ್ರಯಾಣಿಕರಿಗೂ ಕಡ್ಡಾಯ ಆರ್‌ಟಿಪಿಸಿಆರ್ ಟೆಸ್ಟ್‌ ಆರಂಭಿಸಲಾಗುವುದು. ಕೇಂದ್ರ ಮಾರ್ಗಸೂಚಿ 5 ಶೇಕಡ ಇದ್ದರೂ ಸಿಎಂ ಹೆಚ್ಚಿನ ಕಾಳಜಿ ಹಾಗೂ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಸಿಎಂ ಹೇಳಿದ್ದಾರೆ. ಈ ನಿಟ್ಟಿನಲ್ಲಿ ವ್ಯವಸ್ಥೆ ಪರಿಶೀಲನೆ ಮಾಡಲು ಬಂದಿದ್ದೇನೆ ಎಂದರು. ವಿದೇಶಿ ಪ್ರಯಾಣಿಕರಿಗೆ ನೆಗೆಟಿವ್ ವರದಿ ಬಂದರೆ ಮನೆಯಲ್ಲಿ 7 ದಿನ ಕ್ವಾರಂಟೈನ್ ಮಾಡಲಾಗುವುದು. ಕೋವಿಡ್ ಆಪ್‌ ಮೂಲಕ ಗಮನಿಸಲಾಗುವುದು. ಆರ್‌ಟಿಪಿಸಿಆರ್ ನೆಗೆಟಿವ್ ಬಂದರೆ ಮನೆಗೆ ಹೋದ ಬಳಿಕ 5 ದಿನಗಳ ಬಳಿಕ ಟೆಸ್ಟ್‌ ಮಾಡಲಾಗುವುದು. ನೆಗೆಟಿವ್ ಬಂದರೆ 7 ದಿನ ಆದ ಬಳಿ ಹೊರಗಡೆ ಹೋಗಲು ಅವಕಾಶ ನೀಡಲಾಗುತ್ತದೆ. ಆದರೆ ಪಾಸಿಟಿವ್ ಬಂದರೆ ನೇರವಾಗಿ ಆಸ್ಪತ್ರೆಗೆ ದಾಖಲು ಮಾಡಲಾಗುವುದು ಎಂದರು. ಪಾಸಿಟಿವ್‌ ಬಂದರೆ ವಿಶೇಷ ಐಸೋಲೇಟೆಡ್ ವಾರ್ಡ್‌ಗೆ ಸೇರಿಸಲಾಗುವುದು ಎಂದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ಆರೋಗ್ಯ ಸಚಿವರನ್ನು ಸಿಎಂ ಭೇಟಿ ಮಾಡುತ್ತಾರೆ. ಆರೋಗ್ಯ ಇಲಾಖೆಯ ಫ್ರಂಟ್‌ ಲೈನ್ ವರ್ಕರ್ಸ್‌ಗೆ ಬೋಸ್ಟರ್‌ ಡೋಸ್ ನೀಡುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗುತ್ತದೆ. ವೈಜ್ಞಾನಿಕವಾಗಿ ಎಷ್ಟು ಉಪಯೋಗ ಆಗಲಿದೆ ಎಂದು ಚರ್ಚಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ಯಾವುದೇ ಲೋಪ ಇಲ್ಲದೆ ಎಲ್ಲ ಕ್ರಮ ಕೈಗೊಳ್ಳಲು ಸರ್ಕಾರ ಸಿದ್ಧ. ಪ್ರಕರಣಗಳು ಯಾವ ರೀತಿ ಏರಿಕೆ ಆಗುತ್ತದೆ ಆ ನಿಟ್ಟಿನಲ್ಲಿ ಕಾಲ ಕಾಲಕ್ಕೆ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.


from India & World News in Kannada | VK Polls https://ift.tt/3I1Idme

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...