ದರ ನಿಗದಿ ಕೇಂದ್ರದ ಕೈಯಲ್ಲಿಲ್ಲದಿದ್ದರೂ ತೈಲ ದರ ಇಳಿಸಿ ಸರ್ಕಾರ ದೀಪಾವಳಿ ಗಿಫ್ಟ್‌ ನೀಡಿದೆ; ಶೋಭಾ ಕರಂದ್ಲಾಜೆ

ಉಡುಪಿ: ಪೆಟ್ರೋಲಿಯಂ ಉತ್ಪನ್ನಗಳು ದೇಶೀಯವಾಗಿ ಉತ್ಪಾದನೆಯಾಗದೇ ಇದ್ದರೂ, ದರ ನಿಗದಿ ಕೇಂದ್ರದ ನಿಯಂತ್ರಣದಲ್ಲಿ ಇಲ್ಲದ್ದರೂ ಪ್ರಧಾನ ಮಂತ್ರಿ ನೇತೃತ್ವದ ಕೇಂದ್ರ ಸರ್ಕಾರ ಡೀಸೆಲ್‌, ಪೆಟ್ರೋಲ್‌ ದರ ಇಳಿಸಿ ದೀಪಾವಳಿಗೆ ಕೊಡುಗೆ ನೀಡಿದೆ ಎಂದು ಕೇಂದ್ರ ಸಚಿವೆ ಹೇಳಿದರು. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಶೋಭಾ ಕರಂದ್ಲಾಜೆ ಅವರು, ಪೆಟ್ರೋಲ್‌ ಮತ್ತು ಡೀಸೆಲ್‌ ದರದ ಆಧಾರದಲ್ಲಿ ಅನ್ಯ ಪದಾರ್ಥಗಳ ದರ ಏರಿಕೆಯಾಗುತ್ತಿದ್ದು, ದರ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎನ್ನುವುದು ಜನರ ನಿರೀಕ್ಷೆಯಾಗಿದೆ. ವಿಧಾನ ಸಭೆಯ ಎರಡು ಸ್ಥಾನಗಳಿಗೆ ನಡೆದ ಮರು ಚುನಾವಣೆ ಫಲಿತಾಂಶದ ಆಧಾರದಲ್ಲಿ ವ್ಯಕ್ತಿ ಮತ್ತು ಸರಕಾರದ ಬಗ್ಗೆ ನಿರ್ಧರಿಸುವುದು ಸರಿಯಲ್ಲ ಎಂದು ಹೇಳಿದರು. ಇನ್ನು ಭತ್ತಕ್ಕೆ ಕೇಂದ್ರ ಸರಕಾರ 1,940 ರೂ. ಬೆಂಬಲ ಬೆಲೆ ಘೋಷಿಸಿದ್ದು, ತಕ್ಷಣ ಖರೀದಿ ಕೇಂದ್ರ ತೆರೆಯಲು ರಾಜ್ಯ ಸರಕಾರಕ್ಕೆ ಸೂಚಿಸಲಾಗಿದೆ ಎಂದು ರಾಜ್ಯ ಕೃಷಿ, ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ನವೆಂಬರ್‌/ ಡಿಸೆಂಬರ್‌ನಲ್ಲಿ ಭತ್ತ ಕೊಯ್ಲು, ಮಾರಾಟ ಪ್ರಕ್ರಿಯೆ ಮುಗಿಯಲಿದ್ದು, ಭತ್ತ ಖರೀದಿ ಕೇಂದ್ರ ಆರಂಭಕ್ಕಿದು ಸಕಾಲ. ರಾಜ್ಯ ಸಚಿವ ಸಂಪುಟ ಶೀಘ್ರವೇ ನಿರ್ಣಯ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಹಾಗೂ ಕೃಷಿ ಸಚಿವರು ಭರವಸೆ ನೀಡಿದ್ದಾರೆ ಎಂದರು. ಅಲ್ಲದೇ, ಕರಾವಳಿ ಜಿಲ್ಲೆಗಳ ಭತ್ತ ಬೆಳೆಗಾರರ ಸಮಸ್ಯೆ ವಿಭಿನ್ನವಾಗಿದೆ. ಪಡಿತರ ಮೂಲಕ ಕುಚ್ಚಿಗೆ ಅಕ್ಕಿ ಹಾಗೂ ಬೆಂಬಲ ಬೆಲೆಯಲ್ಲಿ ಎಂಒ 4 ತಳಿಯ ಭತ್ತ ಖರೀದಿಗೆ ಅವಕಾಶ ಕಲ್ಪಿಸಬೇಕೆನ್ನುವುದು ರೈತರ ಬೇಡಿಕೆಯಾಗಿದೆ. ಸಮೀಕ್ಷೆ ನಡೆಸಿ ವರದಿ ತರಿಸಿ ಎಂಒ 4 ಭತ್ತ ಖರೀದಿ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.


from India & World News in Kannada | VK Polls https://ift.tt/31ChxIh

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...