ಹಾನಗಲ್ ವಿಜಯ: ಹರಕೆ ಈಡೇರಿಸಿದ ಶಕ್ತಿ ದೇವತೆಗೆ ಪೂಜೆ ಸಲ್ಲಿಸಲಿದ್ದಾರೆ ಡಿಕೆಶಿ

ಬೆಂಗಳೂರು: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಸಿಎಂ ತವರು ಜಿಲ್ಲೆಯ ಈ ಕ್ಷೇತ್ರದ ಗೆಲುವು ಕಾಂಗ್ರೆಸ್‌ಗೂ ಮಹತ್ವದ ಗೆಲುವಾಗಿದೆ. ಈ ಕ್ಷೇತ್ರದಲ್ಲಿ ಗೆಲ್ಲಲೇ ಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಹಾನಗಲ್‌ನಲ್ಲಿ ಬೀಡುಬಿಟ್ಟಿದ್ದರು. ಅಲ್ಲದೆ ತಮ್ಮ ಆಪ್ತ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರಿಗೂ ಹೊಣೆಗಾರಿಗೆ ನೀಡಿದ್ದರು. ಈ ಸಂದರ್ಭದಲ್ಲಿ ಕ್ಷೇತ್ರದ ಶಕ್ತಿ ದೇವತೆ ಶ್ರೀ ಗ್ರಾಮದೇವಿ ಹಾದಗಟ್ಟಿಗೆ ಕ್ಷೇತ್ರಕ್ಕೆ ಭೇಟಿ ನೀಡಿ ಚುನಾವಣೆಯಲ್ಲಿ ಗೆಲ್ಲಿಸಿ ಕೊಡುವಂತೆ ಹರಕೆ ಹೊತ್ತುಕೊಂಡಿದ್ದರು. ಇದೀಗ ಹಾನಗಲ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆಲುವು ಸಾಧಿಸಿದ್ದಾರೆ. ಸಿಎಂ ತವರು ಜಿಲ್ಲೆಯ ಈ ಗೆಲುವು ಬಿಜೆಪಿ ಪಾಲಿಗೆ ಹಿನ್ನಡೆಯಾದರೆ ಕಾಂಗ್ರೆಸ್ ಈ ಗೆಲುವಿನಿಂದ ಬೀಗುತ್ತಿದೆ. ಈ ಗೆಲುವಿನ ಹಿನ್ನೆಲೆಯಲ್ಲಿ ಹೊತ್ತುಕೊಂಡಿದ್ದ ಹರಕೆಯನ್ನು ಪೂರೈಸಲು ಶುಕ್ರವಾರ ಡಿಕೆ ಶಿವಕುಮಾರ್ ಅವರು ಹಾನಗಲ್ ತೆರಳುತ್ತಿದ್ದಾರೆ. ಬೆಂಗಳೂರಿನಿಂದ ಹಾನಗಲ್‌ಗೆ ತೆರಳಿ ಕ್ಷೇತ್ರದ ಶಕ್ತಿ ದೇವತೆ ಶ್ರೀ ಗ್ರಾಮದೇವಿ ಹಾದಗಟ್ಟಿಗೆ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಅಷ್ಟೇ ಅಲ್ಲದೆ, ಕ್ಷೇತ್ರದಲ್ಲಿ ಇರುವ ಕಾಶ್ಮೀರಿ ದರ್ಗಾ, ಶ್ರೀ ಕುಮಾರೇಶ್ವರ ವಿರಕ್ಷ ಮಠಕ್ಕೂ ಭೇಟಿ ನೀಡಿ ಪೂಜೆ ಸಲ್ಲಿಕೆ ಮಾಡಲಿದ್ದಾರೆ. ಸಿಎಂ ತವರು ಜಿಲ್ಲೆಯ ಕ್ಷೇತ್ರವಾದ ಹಾನಗಲ್‌ನಲ್ಲಿ ಬಿಜೆಪಿ ಭರ್ಜರಿ ಪ್ರಚಾರ ನಡೆಸಿತ್ತು. ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಅವರು ಕ್ಷೇತ್ರದಲ್ಲಿ ಎಂಟು ದಿನಗಳ ಕಾಲ ಇದ್ದು ಪ್ರಚಾರ ನಡೆಸಿದ್ದರು. ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್ ಪರವಾಗಿ ಪ್ರಚಾರ ನಡೆಸಿದ್ದರು. ಆದರೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ 7598 ಮತಗಳ ಅಂತರದಲ್ಲಿ ಗೆಲವು ಸಾಧಿಸಿದ್ದಾರೆ.


from India & World News in Kannada | VK Polls https://ift.tt/3bIDR4B

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...