ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.14ಕ್ಕೆ ರಾಜ್ಯ ಸಾರಿಗೆ ನೌಕರರಿಂದ ಪ್ರತಿಭಟನೆ

ಕಲಬುರಗಿ: ಸಾರಿಗೆ ಸಿಬ್ಬಂದಿ ಹಾಗೂ ಅಧಿಕಾರಿಗಳ ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಡಿ.14 ರಂದು ಸಾರಿಗೆ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗುವುದು ಎಂದು ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಮಂಡಳಿ ಅಧ್ಯಕ್ಷ ಚಂದ್ರಕಾಂತ ಗದ್ದಗಿ ಹಾಗೂ ಪ್ರಧಾನ ಕಾರ್ಯದರ್ಶಿ ಬಸವರಾಜ ಕಣ್ಣಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಳೆದ ಬಾರಿ ಹೋರಾಟ ಮಾಡಿದಾಗ ಸರಕಾರ ಮನವಿ ಪೂರೈಸಲು ಷರತ್ತು ಹಾಕಿ ಒಪ್ಪಿಕೊಂಡಿದ್ದರೂ ಇಲ್ಲಿಯವರೆಗೆ ಸ್ಪಂದಿಸದೆ ನಿರ್ಲಕ್ಷ್ಯ ಧೋರಣೆ ಮಾಡುತ್ತಿದೆ. ಹೀಗಾಗಿ ಜಿಲ್ಲಾವಾರು ಮನವಿ ಪತ್ರ ನೀಡಿ ಒತ್ತಾಯಿಸಲಾಗುತ್ತದೆ ಎಂದರು. ಇಲ್ಲಿಯವರೆಗೂ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಎಲ್ಲ ಹೆಚ್ಚುವರಿ ಭತ್ಯೆ ಪಾವತಿಸಿಲ್ಲ. ಬೆಲೆ ಏರಿಕೆಯಿಂದ ಕಾರ್ಮಿಕ ಕುಟುಂಬಗಳು ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದ್ದು ಕೂಡಲೇ ಎಲ್ಲ ಸಿಬ್ಬಂದಿಗೆ ವೇತನ ಪರಿಷ್ಕರಣೆ ಮಾಡಬೇಕು. ಈ ಹಿಂದೆ ಕೈಗಾರಿಕಾ ಒಪ್ಪಂದದಲ್ಲಿ ಆದ ಎಲ್ಲ ಸೇವಾ ನಿಯಮಗಳು ಹಾಗೂ ಸವಲತ್ತುಗಳನ್ನು ಮುಂದುವರೆಸಬೇಕು. ವೇತನ ಮುಂಬಡ್ತಿ ದರಗಳು ಪರಿಷ್ಕರಣೆಗೊಂಡಿಲ್ಲ. ಹೀಗಾಗಿ ಕೂಡಲೇ ನೀಡಬೇಕು ಎಂದು ಆಗ್ರಹಿಸಿದರು. ವರ್ಗಾವಣೆ ಮಾಡಿದ್ದರಿಂದ ಸಿಬ್ಬಂದಿ ಹಾಗೂ ಅಧಿಕಾರಿಗಳ ವೇತನ ಹೆಚ್ಚಳ ಸೇರಿ ಇತರೆ ಸವಲತ್ತುಗಳಿಂದ ವಂಚಿತರಾಗಿದ್ದಾರೆ. ಆಡಳಿತ ವರ್ಗಾವಣೆ ಮಾಡಬೇಕು. ಮುಷ್ಕರದ ವೇಳೆ ವಜಾಗೊಂಡ ಸಿಬ್ಬಂದಿ ಮರು ನೇಮಕ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು. ಸಾರಿಗೆ ಸಂಸ್ಥೆಯಲ್ಲಿ 371 (ಜೆ) ಕಲಂನಡಿಯಲ್ಲಿ ನೇಮಕಾತಿಗಳು ನಡೆಯುತ್ತಿಲ್ಲ, ಹೀಗಾಗಿ ಕೆಕೆಆರ್‌ಟಿಸಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆದರೆ 4 ರಿಂದ 5 ಸಾವಿರ ನಿರುದ್ಯೋಗಿಗಳಿಗೆ ಉದ್ಯೋಗ ನೀಡಬಹುದು. ಈ ಕ್ರಮ ಕೂಡಲೇ ಜಾರಿಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಭೀಮರಾವ್‌ ಯರಗೋಳ, ರಾಮಚಂದ್ರ ಹಯ್ಯಾಳಕರ್‌, ಮಲ್ಲಿಕಾರ್ಜುನ ಕಣ್ಣಿ, ಚಂದ್ರಕಾಂತ ಡೊಳ್ಳಿ ಇತರರಿದ್ದರು.


from India & World News in Kannada | VK Polls https://ift.tt/3EzMWtt

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...