ಮೊಟ್ಟೆ ತಿನ್ನೋರಿಂದ ಕಾಣಿಕೆ ಸ್ವೀಕರಿಸಿ ಮೊಟ್ಟೆ ವಿರೋಧಿಸೋರು ಮಠಾಧೀಶರಾಗಲು ನಾಲಾಯಕ್; ಶಿವರಾಮು

ಮೈಸೂರು: ಆಯ್ದ ಜಿಲ್ಲೆಗಳ ಸರಕಾರಿ ಶಾಲೆಯಲ್ಲಿ ಜಾರಿಗೊಳಿಸಿರುವ ಮೊಟ್ಟೆ ವಿತರಣೆಯನ್ನು ರಾಜ್ಯಾದ್ಯಂತ ವಿಸ್ತರಿಸಬೇಕೆಂದು ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಆಗ್ರಹಿಸಿದ್ದಾರೆ. ರಾಜ್ಯ ಸರಕಾರ ಮಕ್ಕಳಲ್ಲಿ ಪೌಷ್ಟಿಕತೆ ವೃದ್ಧಿಸುವ ನಿಟ್ಟಿನಲ್ಲಿ ಜಾರಿಗೆ ತಂದಿರುವ ಮೊಟ್ಟೆ ಯೋಜನೆಯಿಂದ ಉತ್ತರ ಕರ್ನಾಟಕದ ಭಾಗದಲ್ಲಿ ಶೇ.15ರಷ್ಟು ಹಾಜರಾತಿ ಹೆಚ್ಚಿದೆ. ಮಕ್ಕಳು ಅಪೌಷ್ಟಿಕತೆಯಿಂದ ಬಳಲುವುದು ತಪ್ಪಲಿದೆ. ಹೀಗಾಗಿ ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿಯೂ ಮೊಟ್ಟೆ ವಿತರಣೆ ಯೋಜನೆ ಅನುಷ್ಠಾನವಾಗಲಿ. ಮೊಟ್ಟೆ ಜತೆಗೆ ಹಾಲು ಮತ್ತು ಹಣ್ಣನ್ನೂ ಸರಕಾರ ನೀಡಬೇಕು. ಇದರಿಂದ ಮಕ್ಕಳ ಶಾಲಾ ಹಾಜರಾತಿ ಪ್ರಮಾಣ ಹೆಚ್ಚುತ್ತದೆ. ಮೊಟ್ಟೆ ವಿತರಣೆ ನಿರ್ಧಾರದಿಂದ ಸರಕಾರ ಹಿಂದೆ ಸರಿಯಬಾರದು ಎಂದು ಆಗ್ರಹಿಸಿ ಡಿ.10ರಂದು ಬೆಳಗ್ಗೆ 11.30ಕ್ಕೆ ಪತ್ರ ಚಳವಳಿ ನಡೆಸಲಾಗುವುದು ಎಂದು ಗುರುವಾರ ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವುದನ್ನು ವಿರೋಧಿಸುವ ಮಠಾಧೀಶರು, ಮೊಟ್ಟೆ ತಿನ್ನುವ ಭಕ್ತರಿಂದ ಕಾಣಿಕೆಗಳನ್ನು ಕಡ್ಡಾಯವಾಗಿ ಸ್ವೀಕರಿಸಬಾರದು. ಮೊಟ್ಟೆ ಸೇವಿಸುವವರು ಕಾಣಿಕೆ ನೀಡಬಾರದು ಎಂದು ಮಠಗಳಲ್ಲಿ ಮೊದಲು ಫಲಕ ಅಳವಡಿಸಬೇಕು. ಮೊಟ್ಟೆ ಸೇವಿಸುವವರು ಹಾಗೂ ಮಾರುವವರ ಕಾಣಿಕೆಗಳನ್ನು ಪಡೆಯುವ ಮಠಗಳು, ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದನ್ನು ವಿರೋಧಿಸುವುದು ಸರಿಯಲ್ಲ. ಅಂಥ ಸ್ವಾಮೀಜಿಗಳು ಮಠಾಧೀಶರಾಗಲು ನಾಲಾಯಕ್. ಮೊಟ್ಟೆ ನೀಡುವುದನ್ನು ವಿರೋಧಿಸಿ ಕೆಲವು ಮಠಾಧೀಶರು ಸಮಾವೇಶ ಮಾಡಲು ಹೊರಟಿರುವುದು ನಾಚಿಕೆಗೇಡಿನ ಸಂಗತಿ. ಈ ರೀತಿ ರಾಜಕಾರಣ ಮಾಡುತ್ತಿರುವ ಮಠಾಧೀಶರು ಮೊದಲು ತಮ್ಮ ಕಾವಿ ಕಳಚಿ ನಂತರ ರಾಜಕಾರಣ ಮಾಡಲಿ. ನಾವು ಕಟ್ಟಿದ ತೆರಿಗೆ ಹಣವನ್ನು ನಿಮ್ಮ ಮಠಗಳ ಅಭಿವೃದ್ಧಿಗೆ, ನಿಮ್ಮ ಅಭಿವೃದ್ಧಿಗೆ, ನಿಮಗೆ ಮೋಜು ಮಾಡೋಕೆ ಅನುದಾನ ನೀಡುತ್ತಿದ್ದಾರೆ. ಮಠಾಧೀಶರುಗಳಿಗೆ ಮಾನ ಮರ್ಯಾದೆ ಇದ್ದರೆ ನಾವು ತೆರಿಗೆ ಕಟ್ಟಿದ ಆ ಅನುದಾನವನ್ನು ವಾಪಸ್ ನೀಡಲಿ’ ಎಂದರು. ಸವಿತಾ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಎನ್‌.ಆರ್‌.ನಾಗೇಶ್‌ ಮಾತನಾಡಿ, ಮಠಾಧಿಪತಿಗಳಿಗೆ ಬೇರೆ ಕೆಲಸ ಇಲ್ಲವೆ? ಎಂದು ಪ್ರಶ್ನಿಸಿದರು. ಒಂದು ವೇಳೆ ಮಠಾಧೀಶರ ಬೇಡಿಕೆಗೆ ಮಣಿದು ಮೊಟ್ಟೆ ನೀಡುವುದನ್ನು ನಿಲ್ಲಿಸಿದರೆ ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದರು. ಸಚಿವರ ಕುಮ್ಮಕ್ಕಿದೆ: ಕುಂಬಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಎಸ್‌.ಪ್ರಕಾಶ ಮಾತನಾಡಿ, ಮೊಟ್ಟೆ ವಿತರಣೆ ವಿರುದ್ಧ ಸಮಾವೇಶ ಮಾಡಲು ಹೊರಟಿರುವುದರಿಂದ ಧಾರ್ಮಿಕ ಸಾಮರಸ್ಯಕ್ಕೆ ಧಕ್ಕೆ ಉಂಟಾಗುತ್ತದೆ. ಇದರ ಹಿಂದೆ ಸಚಿವರ ಕುಮ್ಮಕ್ಕು ಇದೆ ಎಂದು ಆರೋಪಿಸಿದರು. ಹಿರಿಯ ಮುಖಂಡ ಚೌಹಳ್ಳಿ ಪುಟ್ಟಸ್ವಾಮಿ, ಲೋಕೇಶ್‌ ಕುಮಾರ್‌, ಹರೀಶ್‌ ಮೊಗಣ್ಣಾ, ರೋಹಿತ್‌ ಇತರರು ಇದ್ದರು.


from India & World News in Kannada | VK Polls https://ift.tt/3EHyKyh

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...