ರಹಾನೆ ಸ್ಥಾನ ತುಂಬಬಲ್ಲ 'ಪರ್ಫೆಕ್ಟ್‌ ಬ್ಯಾಟ್ಸ್‌ಮನ್‌' ಹೆಸರಿಸಿದ ಹರ್ಭಜನ್‌!

ಮುಂಬೈ: ತನ್ನ ಮಧ್ಯಮ ಕ್ರಮಾಂಕದ ಬ್ಯಾಟಿಂಗ್‌ ಬಲ ಪಡಿಸಿಕೊಳ್ಳಲು ಔಟ್‌ ಆಫ್‌ ಫಾರ್ಮ್‌ ಅವರ ಸ್ಥಾನದಲ್ಲಿ ಯುವ ಪ್ರತಿಭೆ ಅವರನ್ನೇ ಆಡಿಸುವುದನ್ನು ಮುಂದುವರಿಸಬೇಕು ಎಂದು ಅನುಭವಿ ಆಫ್‌ ಸ್ಪಿನ್ನರ್ ಭಿಪ್ರಾಯ ಹೊರಹಾಕಿದ್ದಾರೆ. ನ್ಯೂಜಿಲೆಂಡ್‌ ವಿರುದ್ಧ ನಡೆಯುತ್ತಿರುವ 2 ಪಂದ್ಯಗಳ ಟೆಸ್ಟ್‌ ಕ್ರಿಕೆಟ್‌ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಟೆಸ್ಟ್‌ ತಂಡಕ್ಕೆ ಶ್ರೇಯಸ್‌ ಅಯ್ಯರ್‌ ಪದಾರ್ಪಣೆ ಮಾಡಿದರು. ಕಾನ್ಪುರ ಟೆಸ್ಟ್‌ನಲ್ಲಿ ಮಿಂಚಿನ ಪ್ರದರ್ಶನ ನೀಡಿದ ಶ್ರೇಯಸ್‌ ಮೊದಲ ಇನಿಂಗ್ಸ್‌ನಲ್ಲಿ ಶತಕ ಮತ್ತು 2ನೇ ಇನಿಂಗ್ಸ್‌ನಲ್ಲಿ ಫಿಫ್ಟಿ ಬಾರಿಸಿ ಪಂದ್ಯಶ್ರೇಷ್ಠ ಗೌರವಕ್ಕೂ ಭಾಜನರಾದರು. ಇನ್ನು ಭಾರತ ತಂಡದ ಅನುಭವಿ ಬ್ಯಾಟ್ಸ್‌ಮನ್‌ ಅಜಿಂಕ್ಯ ರಹಾನೆ ಅವರ ಕಳಪೆ ಬ್ಯಾಟಿಂಗ್‌ ಪ್ರದರ್ಶನ ಮುಂದುವರಿದಿದ್ದು, ಕಳೆದ 12 ತಿಂಗಳಿಂದ ಒಂದು ಶತಕವನ್ನೂ ಗಳಿಸಿಲ್ಲ. ಕಿವೀಸ್‌ ಎದುರು ಮೊದಲ ಟೆಸ್ಟ್ ಪಂದ್ಯದಲ್ಲಿ ನಾಯಕನಾಗಿ ಆಡಿ 35 ಮತ್ತು 0 ರನ್‌ಗಳಿಗೆ ಔಟ್‌ ಆಗಿದ್ದರು. ಬಳಿಕ 2ನೇ ಟೆಸ್ಟ್‌ಗೆ ಗಾಯದ ಸಮಸ್ಯೆಯ ನೆಪ ಹೇಳಿ ಅವರನ್ನು ಆಡುವ ಹನ್ನೊಂದರ ಬಳಗದಿಂದ ಹೊರಗಿಡಲಾಗಿದೆ. "ಕಳೆದ ಟೆಸ್ಟ್‌ನಲ್ಲಿ ಶ್ರೇಯಸ್‌ ಅದ್ಭುತವಾಗಿ ಬ್ಯಾಟಿಂಗ್‌ ಮಾಡುವ ಮೂಲಕ ತಮ್ಮ ಪ್ರತಿಭೆ ಅನಾವರಣ ಪಡಿಸಿದ್ದಾರೆ. ಮಧ್ಯಮ ಕ್ರಮಾಂಕದ ಬ್ಯಾಟಿಂಗ್‌ನಲ್ಲಿ ಸಿಕ್ಕ ಅವಕಾಶವನ್ನು ಅವರನ್ನು ಅಮೋಘವಾಗಿ ಬಳಸಿಕೊಂಡಿದ್ದಾರೆ. ಇನ್ನು ಅಜಿಂಕ್ಯ ರಹಾನೆ ಸತತ ವೈಫಲ್ಯ ಅನುಭವಿಸಿದ್ದಾರೆ. ಮುಂದಿನ ದಿನಗಳಲ್ಲಿ ಅಜಿಂಕ್ಯ ಸ್ಥಾನ ತುಂಬಬಲ್ಲ ಪರ್ಫೆಕ್ಟ್‌ ಆಟಗಾರ ಎಂದರೆ ಅದು ಅಜಿಂಕ್ಯ ರಹಾನೆ," ಎಂದು ಭಜ್ಜಿ ತಮ್ಮ ಯೂಟ್ಯೂಬ್‌ ವಾಹಿನಿಯಲ್ಲಿ ಹೇಳಿದ್ದಾರೆ. ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ರಹಾನೆ ಡೌಟ್‌! ಭಾರತ ತಂಡ ಡಿಸೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣ ಬೆಳೆಸಲಿದ್ದು, ಈ ಪ್ರವಾಸಕ್ಕೆ ರಹಾನೆ ಆಯ್ಕೆ ಅನುಮಾನವಾಗಿದೆ. ರಹಾನೆ ಸ್ಥಾನದಲ್ಲಿ ಶ್ರೇಯಸ್‌ ಅಯ್ಯರ್‌ ಅವರನ್ನೇ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ. "ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ರಹಾನೆ ಆಯ್ಕೆ ಆಗುತ್ತಾರೆಯೇ? ಅಥ್ವಾ ಇಲ್ಲವೇ? ಎಂಬುದು ನನಗೆ ತಿಳಿದಿಲ್ಲ. ಆದರೆ, ನ್ಯೂಜಿಲೆಂಡ್‌ ವಿರುದ್ಧದ ಸರಣಿಯಲ್ಲಿ ಮಿಂಚಿರುವ ಶ್ರೇಯಸ್‌ ಅಯ್ಯರ್‌ ಅವರನ್ನು ಖಂಡಿತಾ ಆಯ್ಕೆ ಮಾಡಿಕೊಳ್ಳಲಿದ್ದಾರೆ. ತಂಡದ ಮಧ್ಯಮ ಕ್ರಮಾಂಕದಲ್ಲಿ ಅಯ್ಯರ್‌ ತಮ್ಮ ಸ್ಥಾನ ಭದ್ರ ಪಡಿಸಿಕೊಂಡಿದ್ದಾರೆ. ಹೀಗಾಗಿ ಆಯ್ಕೆ ಸಮಿತಿಯ ನಿರ್ಧಾರದ ಬಗ್ಗೆ ಬಹಳಾ ಕುತೂಹಲವಿದೆ," ಎಂದು ಹರ್ಭಜನ್‌ ಹೇಳಿದ್ದಾರೆ. ಭಾರತ ತಂಡ ಡಿಸೆಂಬರ್‌ 8ರಂದು ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದು, 3 ಪಂದ್ಯಗಳ ಟೆಸ್ಟ್‌ ಕ್ರಿಕೆಟ್‌ ಸರಣಿ ನಿಗದಿಯಂತೆ ಡಿ. 17ರಂದು ಶುರುವಾಗಬೇಕಿತ್ತು. ಆದರೆ, ಕೊರೊನಾ ವೈರಸ್‌ನ ಹೊಸ ಮಾದರಿ ಮಾರಕ ಸೋಂಕು ಓಮಿಕಾರ್ನ್‌ ದಕ್ಷಿಣ ಆಫ್ರಿಕಾದಲ್ಲಿ ವ್ಯಾಪಕವಾಗಿ ಹೆಚ್ಚುತ್ತಿರುವ ಕಾರಣ ಭಾರತ ತಂಡದ ಈಪ್ರವಾಸದಲ್ಲಿ ಕೆಲ ಬದಲಾವಣೆ ತರುವಂತೆ ಬಿಸಿಸಿಐ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ಮಂಡಳಿಗೆ ಮನವಿ ಮಾಡಿದೆ. ಹೀಗಾಗಿ ಡಿ.26ರಿಂದ ಸರಣಿ ಶುರುವಾಗಿ 3 ಟೆಸ್ಟ್‌ಗಳ ಬಲದು 2 ಪಂದ್ಯಗಳ ಟೆಸ್ಟ್‌ ಸರಣಿ ನಡೆಯುವ ಸಾಧ್ಯತೆ ಹೆಚ್ಚಾಗಿದೆ. ಇದಾದ ಬಳಿಕ ತಲಾ ಮೂರು ಪಂದ್ಯಗಳ ಒಡಿಐ ಮತ್ತು ಟಿ20-ಐ ಕ್ರಿಕೆಟ್‌ ಸರಣಿಗಳು ನಡೆಯಲಿವೆ. ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡವನ್ನು ಬಿಸಿಸಿಐ ಶೀಘ್ರದಲ್ಲೇ ಪ್ರಕಟ ಮಾಡಲಿದೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3oq7Nto

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...